ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಮೊಮ್ಮಕ್ಕಳ ಅಪ್ಪಿ ಹಿಡಿದು ಅಜ್ಜಿಯ ಅಭಯ
ಮಂಗಳೂರು, ಸೆಪ್ಟೆಂಬರ್ 20: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ದಕ್ಷಿಣ ಕನ್ನಡ- ಉಡುಪಿ ಗಡಿ ಭಾಗದಲ್ಲೇ ಮಳೆ ಅಬ್ಬರ ಜೋರಾಗಿದೆ.
ದಕ್ಷಿಣ ಜಿಲ್ಲೆಯ ಮುಲ್ಕಿ ಹೋಬಳಿಯಲ್ಲಿ ಕೃತಕ ನೆರೆ ಉಂಟಾಗಿದ್ದು, ಹಲವೆಡೆ ಮಳೆ ನೀರು ಮನೆಗಳಿಗೆ ನುಗ್ಗಿದೆ. ಗ್ರಾಮೀಣ ಭಾಗದ ಕೃಷಿ ಭೂಮಿಗಳು ಜಲಾವೃತಗೊಂಡಿದ್ದು, ಕಿನ್ನಿಗೋಳಿಯಲ್ಲಿ ಗ್ರಾಮ ಸಂಪರ್ಕಿಸುವ ಸೇತುವೆ ಸಂಪರ್ಕ ಕಡಿತಗೊಂಡಿದೆ.
ಶಾಂಭವಿ ನದಿ ಹಾಗೂ ಜಿಲ್ಲೆಯ ತೊರೆಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದ ಜನರು ಮನೆಯಿಂದ ಹೊರಬರುತ್ತಿಲ್ಲ.

ಮುಲ್ಕಿ, ಹಳೆಯಂಗಡಿ, ಕಿನ್ನಿಗೋಳಿ ಪರಿಸರದಲ್ಲಿ ಮಳೆ ಆರ್ಭಟ ಜೋರಾಗಿರುವ ಹಿನ್ನಲೆಯಲ್ಲಿ, ಜಲಾವೃತ ಮನೆಯಿಂದ ನಾಡದೋಣಿ ಬಳಸಿ ರಕ್ಷಣಾ ಕಾರ್ಯ ಮಾಡಲಾಗುತ್ತಿದೆ. ಮುಲ್ಕಿ ಮಟ್ಟುವಿನಲ್ಲಿ ಅಗ್ನಿಶಾಮಕ ದಳ, ಸ್ಥಳೀಯರಿಂದ ರಕ್ಷಣಾ ಕಾರ್ಯಾಚರಣೆ ಕೈಗೊಂಡು ಎರಡು ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಿದ್ದಾರೆ.

ಇದೇ ವೇಳೆ ನೆರೆ ನೀರಲ್ಲೂ ಅಜ್ಜಿಯ ಮಮತೆ ಕಂಡು ಬಂದಿದ್ದು, ಮಳೆ ನಡುವೆಯೂ ತನ್ನ ಮೊಮ್ಮಕ್ಕಳನ್ನು ತಬ್ಬಿಕೊಂಡು ಮಳೆಯಿಂದ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಅಜ್ಜಿಯ ಮಮತೆಯ ಅಭಯವು ರಕ್ಷಣಾ ಕಾರ್ಯಾಚರಣೆ ವೇಳೆ ಕಂಡುಬಂದಿದೆ.

ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಉತ್ತಮ ಮಳೆ ಹಾಗೂ ಚದುರಿದಂತೆ ಅಲ್ಲಲ್ಲಿ ಅಧಿಕದಿಂದ ಅತ್ಯಧಿಕ ಭಾರಿ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications