ಮಳೆರಾಯನ ಆರ್ಭಟದಿಂದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ, ಭಕ್ತರಿಗೆ ಪ್ರಮುಖ ಸಂದೇಶಗಳು
ಮಂಗಳೂರು, ಜುಲೈ, 23: ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅನಾಹುತಗಳೇ ಸೃಷ್ಟಿಯಾಗಿವೆ.
ಇಂದು ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದು, ಹಲವೆಡೆ ತಗ್ಗು ಪ್ರದೇಶಗಳು ಮುಳುಗಡೆ ಆಗುತ್ತಿವೆ. ಅದರಲ್ಲೂ ನೇತ್ರಾವತಿ ನದಿ ಮಟ್ಟ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಕುಮಾರಧಾರಾ ನದಿಯೂ ಕೆಲಕಡೆಗಳಲ್ಲಿ ಉಕ್ಕಿ ಹರಿಯಲು ಆರಂಭಿಸಿದೆ. ಇದರಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಲದಿಗ್ಬಂಧನವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾತ್ತಿದೆ. ಅಲ್ಲದೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಅಲ್ಲದೆ ದೇವಸ್ಥಾನದ ಪಕ್ಕದ ರಸ್ತೆಗಳೂ ಜಲಾವೃತವಾಗಿವೆ. ಈ ಹಿನ್ನೆಲೆ ನದಿ ಪ್ರದೇಶಗಳಿಗೆ ಹೋಗದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಪೊಲೀಸ್, ಗೃಹರಕ್ಷಕದಳದವರು ಸ್ನಾನಘಟ್ಟದ ಬಳಿ ಬೀಡುಬಿಟ್ಟಿದ್ದಾರೆ.
ಕುಕ್ಕೆ ಸಂಪರ್ಕಿಸುವ ಶಿರಾಡಿ ಘಾಟಿ ಹೆದ್ದಾರಿ ಮತ್ತು ಪುತ್ತೂರು, ಮಂಗಳೂರು ಕಡೆಯಿಂದ ಸಂಪರ್ಕ ಕಲ್ಪಿಸುವ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಸಹ ಜಲಾವೃತವಾಗಿದೆ. ಶನಿವಾರ ಮತ್ತು ಭಾನುವಾರವಾದ ಹಿನ್ನೆಲೆ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಿಮಿಸಿದ್ದಾರೆ. ಆದ್ದರಿಂದ ಬಂದಂತಹ ಭಕ್ತರನ್ನು ನಿಭಾಯಿಸುವಲ್ಲಿ ಎನ್ಡಿಆರ್ಎಫ್ ತಂಡ ಹರಸಾಹಸಪಡುತ್ತಿದೆ.
-
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ












Click it and Unblock the Notifications