ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ; ರೆಡ್ ಅಲರ್ಟ್

|
Google Oneindia Kannada News

ಮಂಗಳೂರು, ಆಗಸ್ಟ್ 04 : ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂಗಾರು ಮತ್ತಷ್ಟು ಚುರುಕಾಗಲಿದೆ. ಆಗಸ್ಟ್ 5ರ ತನಕ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಂಗಳವಾರ ಸಹ ಹೆಚ್ಚು ಮಳೆಯಾಗುತ್ತಿದೆ.

Recommended Video

DK Shivakumar : ಫೀಲ್ಡಿಗಿಳಿದು ಗೆದ್ದರಷ್ಟೇ ಪದಾಧಿಕಾರಿ ಹುದ್ದೆ | Oneindia Kannada

ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ. 115 ರಿಂದ 204 ಮಿ. ಮೀ. ತನಕ ಮಳೆ ಸುರಿಯಲಿದೆ ಎಂದು ಅಂದಾಜಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಜೋರು ಮಳೆಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಜೋರು ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಮಳೆ ಸುರಿಯುತ್ತಿದೆ. ಇದರಿಂದಾಗಿ ಅಪಾರವಾದ ಹಾನಿಯಾಗಿದೆ. ಕಡಲ ತೀರದಲ್ಲಿ ಅಲೆಗಳ ಅಬ್ಬರೂ ಹೆಚ್ಚಿದೆ. ಮಳೆಯ ಜೊತೆ ಭಾರಿ ಗಾಳಿ ಬೀಸುತ್ತಿದ್ದು, ಜನರು ಆತಂಕಗೊಂಡಿದ್ದಾರೆ.

ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ; ಒಳಹರಿವು ಏರಿಕೆಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ; ಒಳಹರಿವು ಏರಿಕೆ

Heavy Rain Red Alert In Karnataka Karavali

ಮಂಗಳವಾರ ಇಡೀ ದಿನ ಮಳೆ ಸುರಿದಿದೆ. ಇದರಿಂದಾಗಿ ಜನ ಜೀವನ ಬಹುತೇಕ ಅಸ್ತವ್ಯಸ್ತವಾಗಿದೆ. ಮಂಗಳೂರಿನ ಬೋಳೂರಿನಲ್ಲಿ ಮರ ಮತ್ತು 4 ವಿದ್ಯುತ್ ಕಂಬ ಧರೆಗುರುಳಿದೆ. ಕೆಲವು ಕಡೆ ಗುಡ್ಡ ಕುಸಿದ ವರದಿಗಳು ಬಂದಿವೆ.

ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆ ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆ

ಚಾರ್ಮಾಡಿ ಘಾಟ್‌ನ ವಿವಿಧ ಪ್ರದೇಶಗಳಲ್ಲಿ ಮಣ್ಣು ಕುಸಿದಿದೆ. ಬೆಳ್ತಂಗಡಿಯಲ್ಲಿ ವಾಹನದ ಮೇಲೆ ವಿದ್ಯುತ್ ಕಂಬವೊಂದು ಬಿದ್ದಿದೆ. ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ನೆರೆ ಭೀತಿ ಸೃಷ್ಟಿಯಾಗಿದೆ.

ಮಂಗಳವಾರ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 22 ಸೆಂ. ಮೀ. ಮಳೆಯಾಗಿದೆ. ಕಾರ್ಕಳ, ಧರ್ಮಸ್ಥಳದಲ್ಲಿ 8, ಸುಬ್ರಮಣ್ಯ, ಸುಳ್ಯ, ಕುಂದಾಪುರದಲ್ಲಿ 7 ಸೆಂ. ಮೀ. ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಯಾವುದೇ ತೊಂದರೆಯಾದರೆ 1077 ಉಚಿತ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಜಿಲ್ಲಾಡಳಿತ ಹೇಳಿದೆ.

English summary
Indian Meteorological Department (IMD) issued a red alert in Karnataka Karavali. Karavali region witnessed for heavy rain from past three days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X