ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಲು ತಡೆ ನೀಡಿದ ಮಹಾಮಳೆ

|
Google Oneindia Kannada News

ಮಂಗಳೂರು, ಆಗಸ್ಟ್.14: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲಾ ಪ್ರಮುಖ ಸಂಪರ್ಕ ರಸ್ತೆಗಳು ಬಂದ್ ಆಗಿವೆ.

ನನ್ನ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ: ಎಚ್.ಡಿ. ಕುಮಾರಸ್ವಾಮಿ ನನ್ನ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ: ಎಚ್.ಡಿ. ಕುಮಾರಸ್ವಾಮಿ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಉದನೆ ಬಳಿ ಗುಂಡ್ಯಾ ಹೊಳೆಯು ತುಂಬಿ ರಸ್ತೆಯಲ್ಲೇ ಹರಿದ ಪರಿಣಾಮ ಹೆದ್ದಾರಿ ಬಂದ್ ಮಾಡಲಾಗಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಸ್ತೆಯ ಹೊಸ್ಮಠ ಸೇತುವೆಯು ಕಳೆದ ಎರಡು ದಿನಗಳಿಂದ ನಿರಂತರವಾಗಿ ಮುಳುಗಡೆಯಾದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದೆ.

ಉ.ಕ.ಜಿಲ್ಲೆಯಲ್ಲಿ ಭಾರೀ ಮಳೆ, 5 ತಾಲೂಕುಗಳ ಶಾಲೆಗಳಿಗೆ ಆ.13ರಂದು ರಜಾಉ.ಕ.ಜಿಲ್ಲೆಯಲ್ಲಿ ಭಾರೀ ಮಳೆ, 5 ತಾಲೂಕುಗಳ ಶಾಲೆಗಳಿಗೆ ಆ.13ರಂದು ರಜಾ

ಮಾಣಿ- ಮೈಸೂರು ರಾಜ್ಯ ಹೆದ್ದಾರಿ ಕೊಡಗು ಜಿಲ್ಲೆಯ ಕಾರ್ತೋಜೆ ಬಳಿ ರಸ್ತೆಗೆ ಗುಡ್ಡ ಕುಸಿದ ಪರಿಣಾಮ ಆ ರಸ್ತೆಯಲ್ಲೂ ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ ಹೇರಲಾಗಿದೆ.

Heavy rainfall continues throughout the coastal district

ಈ ನಡುವೆ ಮಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಭೇಟಿಗೂ ಕೊಂಚ ತಡೆ ನೀಡಿದೆ. ಉದನೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಹಿನ್ನೆಲೆಯಲ್ಲಿ ಗುಂಡ್ಯಾ-ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.

72ನೇ ಸ್ವಾತಂತ್ರ್ಯ ದಿನಾಚರಣೆ 2018

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಸ್ತೆಯೂ ಮಳೆಯಿಂದಾಗಿ ಮುಚ್ಚಿದೆ‌. ಈ ನಡುವೆ ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಕುಮಾರಧಾರಾ ಸ್ನಾನಘಟ್ಟದ ಬಳಿಯೂ ರಸ್ತೆಗೆ ನೀರು ನುಗ್ಗಿದ ಪರಿಣಾಮ ಸದ್ಯಕ್ಕೆ ಆ ರಸ್ತೆಯೂ ಬ್ಲಾಕ್ ಆಗಿದೆ.

Heavy rainfall continues throughout the coastal district

ಇದೀಗ ಮುಖ್ಯಮಂತ್ರಿಗಳು ಉಪ್ಪಿನಂಗಡಿ-ಪುತ್ತೂರು-ಬೆಳ್ಳಾರೆ-ಗುತ್ತಿಗಾರು ಮಾರ್ಗವಾಗಿ ಸುಬ್ರಹ್ಮಣ್ಯ ಕ್ಕೆ ಸುತ್ತು ಬರಬೇಕಾದಂತಹ ಸ್ಥಿತಿಯ ನಿರ್ಮಾಣವಾಗುವ ಮೂಲಕ ಮುಖ್ಯಮಂತ್ರಿಗಳಿಗೆ ಜಲದಿಗ್ಬಂದನ ಉಂಟಾದಂತಾಗಿದೆ.

English summary
Heavy rainfall continues throughout the coastal district. Including Udupi, Dakshina Kannada district receives heavy rainfall from the morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X