ಕಲ್ಲಡ್ಕ ಶಾಲೆಗಳಿಗಾಗಿ ಸಾಮಾಜಿಕ ಜಾಲತಾಣದಲ್ಲಿ 'ಭಿಕ್ಷಾಂದೇಹಿ' ಆಂದೋಲನ
ಮಂಗಳೂರು, ಆಗಸ್ಟ್ 14: ಕಲ್ಲಡ್ಕದ ಎರಡು ಶಾಲೆಗಳಿಗೆ ಬಿಸಿಯೂಟದ ಅನುದಾನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ .
ಶ್ರೀಕ್ಷೇತ್ರ ಕೊಲ್ಲೂರು ದೇವಾಲಯದಿಂದ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಪುಣಚ ಶ್ರೀದೇವಿ ವಿದ್ಯಾ ಸಂಸ್ಥೆಗೆ ನೀಡಲಾಗುತ್ತಿದ್ದ ಬಿಸಿಯೂಟದ ಅನುದಾನವನ್ನು ರಾಜ್ಯ ಸರ್ಕಾರ ನಿಲ್ಲಿಸುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ 'ಭಿಕ್ಷಾಂದೇಹಿ' ಆಂದೋಲನ ಆರಂಭಿಸಿದ್ದಾರೆ .

"ಶಾಲೆಯ ಬಿಸಿಯೂಟ ಅನುದಾನ ನಿಲ್ಲಿಸಿದ್ದಕ್ಕೆ, ಜೋಳಿಗೆ ಹಾಕಿ ಭಿಕ್ಷೆ ಬೇಡಿಯಾದರು ಹಣ ಒಟ್ಟು ಮಾಡಿ ಮಕ್ಕಳ ಊಟಕ್ಕೆ ವ್ಯವಸ್ಥೆ ಮಾಡುತ್ತೇನೆ," ಎಂದು ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದರು .ಈ ಹಿನ್ನೆಲೆಯಲ್ಲಿ ಉತ್ತೇಜಿತರಾದ ಕೆಲವು ನೆಟ್ಟಿಗರು ಟ್ವಿಟ್ಟರ್ ನಲ್ಲಿ ಭಿಕ್ಷಾಂದೇಹಿ ಹಾಗೂ ಫೇಸ್ ಬುಕ್ ನಲ್ಲಿ 'ಜಸ್ಟೀಸ್ ಫಾರ್ ಕಲ್ಲಡ್ಕ ಸ್ಟೂಡೆಂಟ್ಸ್' ಹ್ಯಾಷ್ ಟ್ಯಾಗ್ ನೊಂದಿಗೆ ಆಂದೋಲನ ಆರಂಭಿಸಿದ್ದಾರೆ .
ಸಂಸ್ಥೆಯ ಬ್ಯಾಂಕ್ ಅಕೌಂಟ್ ನಂಬರ್ ಸಹಿತ ಪೋಸ್ಟರ್ ಗಳು ಟ್ವಿಟರ್ , ಫೇಸ್ ಬುಕ್ ಹಾಗೂ ವಾಟ್ಸಪ್ ಮೂಲಕ ಶೇರ್ ಮಾಡಲಾಗುತ್ತಿದೆ. ಇದಕ್ಕೆ ಭಾರೀ ಬೆಂಬಲ ಕೂಡ ವ್ಯಕ್ತವಾಗುತ್ತಿದೆ .

ಮಾಜಿ ಸಚಿವ ಸಿ.ಟಿ ರವಿ ವೈಯಕ್ತಿಕ ನೆಲೆಯಲ್ಲಿ ಮಕ್ಕಳಿಗೆ ಬಿಸಿಯೂಟಕ್ಕೆ ಒಂದು ಲಕ್ಷ ರೂಪಾಯಿ ನೀಡುವ ಘೋಷಣೆ ಮಾಡಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಒಂದು ಸಾವಿರ ಕೆಜಿ ಅಕ್ಕಿ ನೀಡುವ ಘೋಷಣೆ ಮಾಡಿದ್ದಾರೆ .ಅದಲ್ಲದೆ ಈ ಆಂದೋಲನಕ್ಕೆ ಕೆಲವು ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಸ್ಪಂದನೆ ಮಾಡಿರುವ ಮಾಹಿತಿ ಜಾಲತಾಣದಲ್ಲಿ ಹರಿದಾಡುತ್ತಿದೆ.
-
Foundation of IT ಆಯ್ಕೆ ವೈರಲ್: ಭಾಷಾ ಸಮಾನತೆಗೆ ದಕ್ಷಿಣ ಭಾರತೀಯರ ಪ್ರಶ್ನೆ, ನಾರ್ಥಿ ಮಾರ್ಕ್ಸ್ ಕಾರ್ಡ್ Viral Post -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications