ಕಂಬಳ ಪ್ರಿಯರಿಗೆ ಸಿಹಿಸುದ್ದಿ, ಜಾನಪದ ಕ್ರೀಡೆಗೆ ಹೈಟೆಕ್ ಟಚ್: ಇಲ್ಲಿದೆ ಸಂಪೂರ್ಣ ವಿವರ
ಮಂಗಳೂರು, ಫೆಬ್ರವರಿ 01: ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯು ಕರಾವಳಿಯಾದ್ಯಂತ ಕಂಬಳ ಕ್ರೀಡೆಗೆ ಆಧುನಿಕ ಸ್ಪರ್ಶವನ್ನು ನೀಡಲು ಮುಂದಾಗಿದೆ. ನಿಖರ ಫಲಿತಾಂಶದೊಂದಿಗೆ ಕ್ರೀಡೆಯನ್ನು ನಿಗದಿತ ಸಮಯದಲ್ಲಿ ಮುಕ್ತಾಯಗೊಳಿಸುವ ಸಲುವಾಗಿ ನೂತನ ತಂತ್ರಜ್ಞಾನವುಳ್ಳ ಸ್ವಯಂಚಾಲಿತ ಸಮಯ ಗೇಟ್ ವ್ಯವಸ್ಥೆ ಹಾಗೂ ಫೋಟೋ ಫಿನಿಶ್ ಫಲಿತಾಂಶ ಅಳವಡಿಸಲು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ನಿರ್ಧಾರ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕಂಬಳ ಸಮಿತಿ ಅಧ್ಯಕ್ಷ ಐಕಳ ಬಾವ ದೇವಿ ಪ್ರಸಾದ್ ಶೆಟ್ಟಿ, ಇತ್ತೀಚಿನ ದಿನಗಳಲ್ಲಿ ಕಂಬಳ ಹೆಚ್ಚಿನ ಜನಪ್ರಿಯತೆಯನ್ನು ಗಳಿಸುತ್ತಿದ್ದು, ಭಾಗವಹಿಸುವ ಕೋಣಗಳ ಸಂಖ್ಯೆಯು ಹೆಚ್ಚಾಗಿದೆ. ಆದರೆ ನಿಗದಿತ ಸಮಯದಲ್ಲಿ ಕಂಬಳ ಕ್ರೀಡೆಯನ್ನು ಮುಕ್ತಾಯಗೊಳಿಸಲು ಕಷ್ಟವಾಗುತ್ತಿದೆ.

ಏಕೆಂದರೆ ಕ್ರೀಡೆಯ ಪ್ರಾರಂಭದಲ್ಲಿ ಕೋಣಗಳನ್ನು ಸರಿಯಾದ ಜಾಗದಲ್ಲಿ ನಿಲ್ಲಿಸುವುದು ಹಾಗೂ ಕೋಣಗಳ ಓಟದ ಮುಕ್ತಾಯ ಹಂತದಲ್ಲಿ ಯಾರು ಮೊದಲು ಮುಕ್ತಾಯ ಹಂತವನ್ನು ಮುಟ್ಟಿದರು ಇವೆಲ್ಲವನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಫಲಿತಾಂಶವನ್ನು ನೀಡಲು ಬಹಳ ಸಮಯ ತಗಲುತ್ತಿದೆ. ಇದನ್ನು ಮನಗಂಡು ಈ ನೂತನ ತಂತ್ರಜ್ಞಾನ ಅಳವಡಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ದೇವಿ ಪ್ರಸಾದ್ ಶೆಟ್ಟಿ ಹೇಳಿದ್ದಾರೆ.
ನೂತನ ವ್ಯವಸ್ಥೆಯನ್ನು ಫೆಬ್ರವರಿ 3ರಂದು ನಡೆಯುವ ಐಕಳ ಕಂಬಳದಲ್ಲಿ ಅಳವಡಿಸಲಾಗುವುದು. ಈ ತಂತ್ರಜ್ಞಾನವನ್ನು ಎಲ್ಲಾ ಕಂಬಳಕ್ಕೂ ಅಳವಡಿಸಬೇಕು. ಈ ಮೂಲಕ ಸೂಕ್ತ ಫಲಿತಾಂಶ ದೊರೆಯುವುದರೊಂದಿಗೆ ಸಮಯವೂ ಉಳಿಯಲಿದೆ ಎಂದು ದೇವಿಪ್ರಸಾದ್ ಶೆಟ್ಟಿ ಹೇಳಿದರು.
ಕಂಬಳದಲ್ಲಿ ಆಯಾ ವಿಭಾಗಕ್ಕೆ ಕಂಬಳ ಸಮಿತಿ ಸಮಯವನ್ನು ನಿಗದಿಪಡಿಸಿದ್ದು, ಆ ಅವಧಿಯೊಳಗೆ ಕೋಣವನ್ನು ಬಿಡಬೇಕು. ಒಂದು ವೇಳೆ ಕೋಣ ಬಿಡದಿದ್ದರೆ ಗೇಟ್ ಬೀಳುತ್ತದೆ. ಇದಾದ ನೂರು ಸೆಕೆಂಡ್ನಿಂದ ಹತ್ತು ಸೆಕೆಂಡ್ ವರೆಗೆ ರೆಡ್ ಲೈಟ್, ಹತ್ತರಿಂದ ಒಂದು ಸೆಕೆಂಡ್ವರೆಗೆ ಹಳದಿ ಲೈಟ್, ಝಿರೋ ಸೆಕೆಂಡ್ ಆದಾಗ ಹಸಿರು ಲೈಟ್ ಬೀಳುತ್ತದೆ. ಈ ಅವಧಿಯಲ್ಲಿ ಕೋಣವನ್ನು ಬಿಡಬೇಕು. ಇಲ್ಲದಿದ್ದರೆ ಆ ಕೋಣವನ್ನು ಸ್ಪರ್ಧೆಯಿಂದ ಹೊರಗಿಡಲಾಗುತ್ತದೆ ಎಂದು ದೇವಿಪ್ರಸಾದ್ ವಿವರಿಸಿದ್ದಾರೆ.
ಮತ್ತೊಂದು ಹೊಸ ತಂತ್ರಜ್ಞಾನ ಫೋಟೋ ಫಿನಿಶಿಂಗ್ ಕಂಬಳದಲ್ಲಿ ಅಳವಡಿಸಲಾಗಿದೆ. ಕೋಣಗಳ ಮುಖ ಸ್ಕ್ಯಾನ್ ಮೇಲೆ ನಿಖರ ಫಲಿತಾಂಶವನ್ನು ನೀಡಲಿದೆ. ಈ ತಂತ್ರಜ್ಞಾನ ಕಂಬಳದ ಎಲ್ಲಾ ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ಹೇಳಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications