ವಿಶೇಷ ವರದಿ: ರಾಜ್ಯದ ಎಂಡೋ ಸಂತ್ರಸ್ತರ ರಕ್ಷಣೆಗೆ ಬಂದ ನ್ಯಾಯಾಲಯ
ಮಂಗಳೂರು, ಜೂನ್ 25: ಎಂಡೋಸಲ್ಫಾನ್.. ಈ ಹೆಸರು ಕೇಳಿದಾಕ್ಷಣ ಸಂತ್ರಸ್ತರ ಆರ್ತನಾದ ಕಣ್ಣಮುಂದೆ ಬರುತ್ತದೆ. ರಾಜ್ಯದ ಎಂಡೋಸಲ್ಫಾನ್ ಸಂತ್ರಸ್ತರ ಬದುಕು, ಬದುಕಿಗೆ ಬದುಕೂ ಅಲ್ಲ, ಸಾವಿಗೆ ಸಾವೂ ಅಲ್ಲ ಎಂಬಂತಾಗಿದೆ. ಪ್ರತೀ ಉಸಿರು ಎಳೆಯುವಾಗಲೂ ಅಮಾಯಕ ಸಂತ್ರಸ್ತರ ಕಣ್ಣಂಚಿನಲ್ಲಿ ನೀರು ಜಿನುಗುತ್ತದೆ. ತಾವು ಮಾಡದ ತಪ್ಪಿಗಾಗಿ ಈ ಕ್ಷಣದವರೆಗೆ ನರಕಯಾತನೆ ಅನುಭವಿಸುತ್ತಿರುವ ಎಂಡೋಸಲ್ಫಾನ್ ಸಂತ್ರಸ್ತರ ಬದುಕಿಗೆ ಆಧಾರವಾಗಿರಬೇಕಾದ ಸರ್ಕಾರ ಕಣ್ಮುಚ್ಚಿ ಕೂತಿದೆ. ಆದರೆ, ಇದೀಗ ಎಂಡೋಸಲ್ಫಾನ್ ಸಂತ್ರಸ್ತರ ರಕ್ಷಣೆಗೆ ಸ್ವತ ನ್ಯಾಯಾಲಯವೇ ಮುಂದೆ ಬಂದಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ನೂರಾರು ಎಂಡೋಸಲ್ಪಾನ್ ಸಂತ್ರಸ್ತರ ರಕ್ಷಣೆಗೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ನಿರ್ಧಾರ ಮಾಡಿದ್ದು, ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ನೇತೃತ್ವದಲ್ಲಿ ಎಂಡೋಸಲ್ಪಾನ್ ಸಂತ್ರಸ್ತರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕ್ರಿಯಾ ಯೋಜನೆ ರಚಿಸಲಾಗುತ್ತಿದೆ.

ಸೌಲಭ್ಯಗಳನ್ನು ನೀಡಲು ಕ್ರಿಯಾ ವರದಿ ಸಹಕಾರಿ
ಎಂಡೋಸಲ್ಫಾನ್ ಸಂತ್ರಸ್ತರ ಸಮಸ್ಯೆಗಳು, ಸಂತ್ರಸ್ತರಿಗೆ ನೀಡಬೇಕಾದ ಪರಿಹಾರದ ಕುರಿತು ಸಮಗ್ರ ಕ್ರಿಯಾ ಯೋಜನೆಗೆ ಕರಾವಳಿಯ ಮೂರೂ ಜಿಲ್ಲೆಗಳ ಕಾನೂನು ಪ್ರಾಧಿಕಾರದ ಕಾರ್ಯದರ್ಶಿಗಳು ಸಮಗ್ರ ಕ್ರಿಯಾ ವರದಿ ನೀಡುವಂತೆ ಆದೇಶ ನೀಡಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರಿಗೆ ಪರಿಹಾರ, ಚಿಕಿತ್ಸೆ ಹಾಗೂ ಇತರ ಸೌಲಭ್ಯಗಳನ್ನು ನೀಡಲು ಈ ಕ್ರಿಯಾ ವರದಿ ಸಹಕಾರಿಯಾಗಲಿದೆ.

ಗರ್ಭದಲ್ಲಿರುವ ಶಿಶುಗಳ ಮೇಲೆ ದುಷ್ಪರಿಣಾಮ
1980ರಿಂದ 2000ನೇ ಇಸವಿಯವರೆಗೆ ಎಂಡೋಸಲ್ಫಾನ್ ಎಂಬ ವಿಷಕಾರಿ ರಾಸಾಯನಿಕವನ್ನು ಸರ್ಕಾರ ಜನವಸತಿ ಇರುವ ಪ್ರದೇಶದಲ್ಲಿ ಯಾವುದೇ ಮುನ್ನಚ್ಚರಿಕೆ ನೀಡದೆ ಸಿಂಪಡಣೆ ಮಾಡಿದ್ದು, ಇದರ ಪರಿಣಾಮ, ಕರಾವಳಿಯ 450ಕ್ಕೂ ಹೆಚ್ಚಿನ ಹಳ್ಳಿಗಳ 8600ಕ್ಕಿಂತಲೂ ಅಧಿಕ ಮಂದಿ ಬಾಧಿತರಾಗಿದ್ದರು. ಗರ್ಭದಲ್ಲಿರುವ ಶಿಶುಗಳ ಮೇಲೆ ದುಷ್ಪರಿಣಾಮವಾಗಿ ಸಹಸ್ರಾರು ಮಕ್ಕಳು ಹುಟ್ಟಿನಿಂದಲೇ ವಿಕಲಚೇತನರಾಗಿದ್ದಾರೆ. ಹಿರಿಯರು ಕ್ಯಾನ್ಸರ್, ಅಸ್ತಮಾ, ಎಪಿಲೆಪ್ಸಿ, ಖಿನ್ನತೆ ಹಾಗೂ ಹಾರ್ಮೋನ್ ಸಂಬಂಧಿತ ರೋಗಗಳಿಂದ ನರಳುತ್ತಿದ್ದಾರೆ. ಇದೀಗ ಈ ಮಕ್ಕಳು ಸುಮಾರು 30 ರಿಂದ 40 ವರ್ಷದೊಳಗಿನವರಾಗಿದ್ದು, ಹೆಚ್ಚಿನವರು ಹೆತ್ತವರನ್ನೂ ಕಳೆದುಕೊಂಡಿದ್ದಾರೆ.

ಮಾಸಿಕ 3000 ರೂಪಾಯಿಗಳ ಸಹಾಯಧನ
ಪಾಲನೆಗೆ ಪೋಷಣೆಗೆ ಅವರ ಗುಡಿಸಲುಗಳಲ್ಲಿ ಯಾವುದೇ ವ್ಯವಸ್ಥೆ ಇರುವುದಿಲ್ಲ. ಪಾಲನಾ ಕೇಂದ್ರಗಳನ್ನು ಸ್ಥಾಪಿಸಲು 2013ರಲ್ಲೇ ಸರಕಾರ ಆದೇಶ ಹೊರಡಿಸಿದ್ದರೂ, ಇಂದಿಗೂ ಈ ಆದೇಶದ ಅನುಷ್ಠಾನವಾಗಿಲ್ಲ. ಹೈಕೋರ್ಟ್ 2014ರಲ್ಲಿ ನೀಡಿದ್ದ ತೀರ್ಪಿನಲ್ಲಿ ಶೇಕಡಾ 25 ರಿಂದ ಶೇ. 60ರವರೆಗಿನ ಅಂಗವಿಕಲತೆಯನ್ನು ಹೊಂದಿದ್ದವರಿಗೆ ಮಾಸಿಕ 1500 ರೂಪಾಯಿ ಹಾಗೂ ಶೇಕಡಾ 60ಕ್ಕಿಂತಲೂ ಹೆಚ್ಚಿನ ಅಂಗವಿಕಲತೆ ಉಳ್ಳವರಿಗೆ ಮಾಸಿಕ 3000 ರೂಪಾಯಿಗಳ ಸಹಾಯಧನ ನೀಡಲು ಸೂಚಿಸಲಾಗಿತ್ತು.

ಅಶಕ್ತರಿಗೆ ಆದಾಯವೂ ಇಲ್ಲ
ಆದರೆ ಸುಮಾರು 2000 ಕ್ಕಿಂತಲೂ ಹೆಚ್ಚಿನ ಸಂತ್ರಸ್ತರಿಗೆ ಕ್ಯಾನ್ಸರ್, ಫಿಟ್ಸ್, ಸ್ಕಿಜೋಫ್ರೇನಿಯಾ, ಖಿನ್ನತೆ ಮುಂತಾದ ರೋಗಗಳಿದ್ದರೂ ಅವರ ಅಂಗವಿಕಲತೆ ಶೇ 25ಕ್ಕಿಂತಲೂ ಕಡಿಮೆ ಇರುವುದರಿಂದ ಅವರೆಲ್ಲರೂ ಮಾಸಾಶನದಿಂದ ವಂಚಿತರಾಗಿದ್ದಾರೆ. ಉದ್ಯೋಗ ಮಾಡಲು ಅಶಕ್ತರಾಗಿರುವುದರಿಂದ ಆದಾಯವೂ ಇಲ್ಲದಂತಾಗಿದೆ. ಈ ಎಲ್ಲಾ ವಿಚಾರಗಳು ಕ್ರಿಯಾ ವರದಿಯ ಮುನ್ನೆಲೆಗೆ ಬರುವ ಸಾಧ್ಯತೆಗಳಿವೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications