ನೈತಿಕ ಪೊಲೀಸ್ ಗಿರಿ ವಿರುದ್ಧ ಸ್ಪೆಷಲ್ ಪೊಲೀಸ್ ಟೀಂ: ಹೊಸ ವಿಂಗ್ಗೆ ಸ್ವಾಗತ ಕೋರಿದ ಹಿಂದೂ ಸಂಘಟನೆಗಳು!
ಮಂಗಳೂರು, ಜೂನ್ 07: ನೈತಿಕ ಪೊಲೀಸ್ ಗಿರಿಯ ವಿರುದ್ಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಆ್ಯಂಟಿ ಕಮ್ಯುನಲ್ ವಿಂಗ್ ರಚಿಸುವುದಾಗಿ ಹೇಳಿರುವುದನ್ನು ವಿಎಚ್ಪಿ ಮುಖಂಡ ಶರಣ್ ಪಂಪ್ ವೆಲ್ ಹಾಗೂ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ.
ಈ ವಿಂಗ್ನಿಂದ ಇಸ್ಲಾಮಿಕ್ ಜಿಹಾದಿಗಳಿಂದ ಹಿಂದೂ ಸಮಾಜದ ಮೇಲಿನ ದಬ್ಬಾಳಿಕೆ ನಿಲ್ಲಲಿ. ಜೊತೆಗೆ ಇದು ಕರಾವಳಿಯಲ್ಲಿ ಶಾಂತಿ ನೆಲೆಸಲು ಉಪಕಾರಿಯಾಗಬೇಕು ಎಂದು ಇಬ್ಬರೂ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಈ ಹೊಸ ಯೋಜನೆಯ ಬಗ್ಗೆ ಮಾತನಾಡಿದ ವಿಎಚ್ಪಿ ಮುಖಂಡ ಶರಣ್ ಪಂಪ್ ವೆಲ್, ಲವ್ ಜಿಹಾದ್ನಿಂದ ಪ್ರೀತಿಯ ಬಲೆಗೆ ಬಿದ್ದು, ಮತಾಂತರವಾಗುವ ಹಿಂದೂ ಹೆಣ್ಣು ಮಕ್ಕಳು ಉಳಿಯುವಂತಾಗಬೇಕು. ಜೊತೆಗೆ ಇದೇ ವಿಂಗ್ ಮಾದರಿಯಲ್ಲಿ ಗೋಹತ್ಯೆ, ಅಕ್ರಮ ಗೋಸಾಗಟ ನಿಲ್ಲಿಸಲೂ ಹೊಸ ವಿಂಗ್ ರಚನೆಯಾಗಲಿ.
ಕಮ್ಯುನಲ್ ಅಂದರೆ ಹಿಂದೂ-ಮುಸ್ಲಿಂ ಜಗಳ ಎಂದು ಬಿಂಬಿಸಲಾಗುತ್ತದೆ. ಆದರೆ ಜಿಲ್ಲೆಯಲ್ಲಿ ಹಿಂದೂ-ಮುಸ್ಲಿಂ ಗಲಾಟೆಯಾಗುತ್ತಿಲ್ಲ. ಮುಸಲ್ಮಾನ ಪುಂಡರಿಂದ ಹಿಂದೂ ಯುವಕರು ಪೆಟ್ಟು ತಿನ್ನುತ್ತಿದ್ದಾರೆ. ಇದರ ಹೊರತಾಗಿ ಯಾವುದೇ ಹಿಂದೂ ಮುಸ್ಲಿಂ ಗಲಾಟೆ ನಡೆಯುತ್ತಿಲ್ಲ ಎಂದರು.
ಇನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ದೇಶ ದ್ರೋಹ, ಸಮಾಜ ದ್ರೋಹ ಕೆಲಸ ಮಾಡುತ್ತಿಲ್ಲ. ಹಿಂದೂ ಸಮಾಜದ ಮೇಲೆ ಅನ್ಯಾಯವಾದಾಗ ಪ್ರತಿಭಟಿಸುತ್ತೇವೆ. ನೈತಿಕ ಪೊಲೀಸ್ ಗಿರಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಮಾಡುವುದಿಲ್ಲ. ಸಮಾಜಕ್ಕೆ ತೊಂದರೆಯಾದಾಗ ಪ್ರತಿಕ್ರಿಯೆ ನೀಡಿದ್ದೇವೆ. ಗೃಹ ಸಚಿವರ ತಂಡ ನ್ಯಾಯಯುತವಾಗಿ ನಡೆಯಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಈ ಬಗ್ಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ಈ ವಿಂಗ್ ಅನ್ಯಕೋಮಿನ ಜೋಡಿಗಳ ಸುತ್ತಾಟವನ್ನು ನಿಲ್ಲಿಸಬೇಕು. ತಿರುಗಾಡಲು ಬಿಟ್ಟು ಲವ್ ಜಿಹಾದ್ಗೆ ಅನುವು ಮಾಡಿಕೊಡಬಾರದು. ತಂಗಿ ಅಥವಾ ಅಕ್ಕ ಅಡ್ಡದಾರಿ ಹಿಡಿದಾಗ ಅಣ್ಣ-ತಮ್ಮನಾದವರು ಸರಿಯಾದ ದಾರಿಗೆ ತರುವುದು ಸಹಜ.
ಅದೇ ಕೆಲಸವನ್ನು ಹಿಂದೂ ಸಂಘಟನೆ ಯುವಕರು ಮಾಡುತ್ತಿದ್ದಾರೆ. ಅದನ್ನು ನೈತಿಕ ಪೊಲೀಸ್ ಗಿರಿ ಎಂದು ಹೇಳಲಾಗದು. ಆದರೆ ಹಿಂದೂ ಹುಡುಗಿ ಸ್ವೇಚಾಚ್ಚಾರದಲ್ಲಿ ತೊಡಗಿರುವುದನ್ನು ಪ್ರೋತ್ಸಾಹಿಸುವುದನ್ನು ಮಾಡಿದ್ದಲ್ಲಿ ಮುಂದೆ ಸರಕಾರಕ್ಕೆ ಇದನ್ನು ನಿಭಾಯಿದೋದೇ ಕಷ್ಟವಾದೀತು ಎಂದು ಹೇಳಿದರು.
ಇನ್ನು ಬಜರಂಗದಳ ಮುಖಂಡ ಪುನೀತ್ ಅತ್ತಾವರ ಕೂಡಾ ಗೃಹ ಸಚಿವರ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಈ ಪೊಲೀಸ್ ತಂಡದಿಂದ ಹೆಣ್ಣು ಮಕ್ಕಳ ರಕ್ಷಣೆಯಾಗಲಿ. ಜಿಹಾದ್ನ ಬಲೆಗೆ ಬಿಳುವುದು ತಪ್ಪಲಿ ಎಂದು ಹೇಳಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications