ಚೈತ್ರಾ ಕುಂದಾಪುರ ಮಾನಭಂಗಕ್ಕೆ ಯತ್ನ ಆರೋಪ: ಗುರುಪ್ರಸಾದ್ ಪೊಲೀಸರ ವಶಕ್ಕೆ
ಮಂಗಳೂರು, ಅಕ್ಟೋಬರ್.31: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೋಲೀಸರು ಹಿಂದೂ ಜಾಗರಣ ವೇದಿಕೆ ಮುಖಂಡ ಗುರುಪ್ರಸಾದ್ ಪಂಜ ಅವರನ್ನು ವಶಕ್ಕೆ ಪಡೆದಿದ್ದಾರೆ.
ಗುರುಪ್ರಸಾದ್ ವಿರುದ್ಧ ಚೈತ್ರಾ ಕುಂದಾಪುರ ಮಾನಭಂಗ ಯತ್ನ ಪ್ರಕರಣ ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಗುರುಪ್ರಸಾದ್ ಅವರನ್ನು ಪೊಲೀಸರು ಇಂದು ಬುಧವಾರ ವಶಕ್ಕೆ ಪಡೆದಿದ್ದಾರೆ.
ಫೇಸ್ ಬುಕ್ ನಲ್ಲಿ ಚೈತ್ರಾ ಕುಂದಾಪುರ ಹಾಗೂ ಗುರುಪ್ರಸಾದ್ ನಡುವೆ ಆರಂಭವಾಗಿದ್ದ ಫೇಸ್ ಬುಕ್ ವಾರ್ ಬೀದಿ ಜಗಳಕ್ಕೆ ಎಡೆಮಾಡಿತ್ತು. ಚೈತ್ರಾ ಕುಂದಾಪುರ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗುರುಪ್ರಸಾದ್ ಪಂಜ ಹಾಗೂ ಅತನ ಸ್ನೇಹಿತರು ಮತ್ತು ಚೈತ್ರಾ ಕುಂದಾಪುರ ತಂಡದವರ ನಡುವೆ ಮಾರಾಮಾರಿ ನಡೆದಿತ್ತು.
ಈ ಸಂದರ್ಭದಲ್ಲಿ ಗುರುಪ್ರಸಾದ್ ಪಂಜ ಅವರ ತಲೆಗೆ ಗಂಭೀರ ಗಾಯವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ಚೈತ್ರಾ ಕುಂದಾಪುರ ನೀಡಿದ ಅತ್ಯಾಚಾರ ಯತ್ನ ದೂರಿನ ಮೇಲೆ ಸುಬ್ರಹ್ಮಣ್ಯ ಪೋಲೀಸರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುರುಪ್ರಸಾದ್ ರನ್ನು ಈಗ ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಮತ್ತು ಸಹಚರರ ಬಂಧನ
ಗುರುಪ್ರಸಾದ್ ಪಂಜ ಅವರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ಅಕ್ಟೋಬರ್ 25 ರಂದು ಸುಬ್ರಹ್ಮಣ್ಯ ಪೋಲೀಸರು ಚೈತ್ರಾ ಕುಂದಾಪುರ ಹಾಗೂ ಆಕೆಯ ಆರು ಮಂದಿ ಸಹಚರರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ನ. 3 ರವರೆಗೆ ನ್ಯಾಯಾಂಗ ಬಂಧನ
ಗುರುಪ್ರಸಾದ್ ಪಂಜ ಅವರ ಮೇಲೆ ನಡೆದ ಹಲ್ಲೆ ಪ್ರಕರಣ ವಿಚಾರಣೆ ನಡೆಸುವ ವೇಳೆ ಸುಳ್ಯ ಜೆ ಎಂ ಎಫ್ ಸಿ ನ್ಯಾಯಾಲಯ ಆರೋಪಿಗಳಿಗೆ ನವೆಂಬರ್ 3 ವರೆಗೆ ನ್ಯಾಯಾಂಗ ಬಂಧನದ ತೀರ್ಪು ನೀಡಿದೆ.

ಪ್ರಕರಣ ರಾಜಿಯಲ್ಲಿ ಮುಗಿಸಲು ಯತ್ನ
ಈ ನಡುವೆ ಎರಡೂ ತಂಡಗಳು ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲು ಸಂಘ ಪರಿವಾರದ ಮುಖಂಡರು ಮಂಗಳವಾರ ಎರಡೂ ತಂಡಗಳ ನಡುವೆ ಮಾತುಕತೆಯನ್ನೂ ನಡೆಸಿದ್ದರು. ಮಾತುಕತೆಗೆ ಆಗಮಿಸಿದ್ದ ಎರಡು ತಂಡ ವಿವಾದವನ್ನು ರಾಜಿ ಸಂಧಾನದಲ್ಲಿ ಮುಗಿಸುವ ಇಂಗಿತವನ್ನೂ ವ್ಯಕ್ತಪಡಿಸಿದ್ದವು.

ಗುರುಪ್ರಸಾದ್ ಪಂಜ ವಶಕ್ಕೆ
ಆದರೆ ಈ ನಡುವೆ ಗುರುಪ್ರಸಾದ್ ಪಂಜ ತಂಡ ಒಂದು ದಿನದ ಅವಕಾಶವನ್ನು ನೀಡುವಂತೆ ಮನವಿಯನ್ನೂ ಮಾಡಿದ್ದರು. ಆದರೆ ಇಂದು ಪೋಲೀಸರು ಗುರುಪ್ರಸಾದ್ ಪಂಜ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications