ಮಂಗಳೂರಿನಲ್ಲಿ ಗೋವುಗಳ ರಕ್ಷಣೆಗೆ ನಿರಾಕರಿಸಿದ ಹಿಂದೂ ಸಂಘಟನೆಗಳು!
ಮಂಗಳೂರು, ಡಿಸೆಂಬರ್ 19: ಅಕ್ರಮ ಗೋವುಗಳ ಸಾಗಾಟದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಹೇಳಿಕೊಂಡು ಬಂದ ಹಿಂದೂ ಸಂಘಟನೆಗಳು ಗೋವುಗಳ ರಕ್ಷಣೆಗೆ ನಿರಾಕರಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಇತ್ತೀಚೆಗೆ ಕಂಟೇನರ್ ಲಾರಿ ಒಂದರಲ್ಲಿ 24 ಹೋರಿಗಳು ಹಾಗೂ 7 ಎಮ್ಮೆಗಳನ್ನು ತುಂಬಿಸಿ ಮಂಗಳೂರಿಗೆ ತರುತ್ತಿದ್ದಾಗ ಕಂಕನಾಡಿ ನಗರ ಠಾಣೆ ಪೊಲೀಸರು ದಾಖಲಾತಿ ಇಲ್ಲದ ಕಾರಣಕ್ಕೆ ಅವುಗಳನ್ನು ವಶಕ್ಕೆ ಪಡೆದಿದ್ದರು. ಗೋವುಗಳಿಗೆ ತಾತ್ಕಾಲಿಕವಾಗಿ ನೀರು, ಮೇವು ನೀಡುವುದಕ್ಕಾಗಿ ಪೊಲೀಸರು ಮಂಗಳೂರಿನ ಗೋಶಾಲೆಗಳನ್ನು ಸಂಪರ್ಕಿಸಿದ್ದರು. ಆದರೆ,ಮಂಗಳೂರಿನಲ್ಲಿ ಬಜರಂಗದಳ, ವಿಶ್ವ ಹಿಂದು ಪರಿಷತ್ತಿಗೆ ಸೇರಿದ ಸೇರಿದ ಗೋಶಾಲೆಗಳು ತಮಗೆ ಫಂಡ್ ಬಂದಿಲ್ಲವೆಂದು ಗೋವುಗಳನ್ನು ಸ್ವೀಕರಿಸಲು ನಿರಾಕರಿಸಿವೆ ಎಂದು ಹೇಳಲಾಗಿದೆ.
ಇದರಿಂದ ಕಂಗೆಟ್ಟ ಪೊಲೀಸರು ಕೊನೆಗೆ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಶೆಟ್ಟಿಯವರನ್ನು ಸಂಪರ್ಕಿಸಿ, ಅನಾಥ ಗೋವುಗಳಿಗೆ ತಾತ್ಕಾಲಿಕ ವ್ಯವಸ್ಥೆ ಮಾಡಿದ್ದಾರೆ. ಗೋ ಹತ್ಯೆ ವಿಚಾರದಲ್ಲಿ ಗಲಾಟೆ, ಬೀದಿ ರಂಪಾಟ ಮಾಡುವ ಹಿಂದು ಸಂಘಟನೆಗಳು ಪೊಲೀಸರು ಹಿಡಿದುಕೊಟ್ಟ ಗೋವುಗಳನ್ನು ರಕ್ಷಿಸಲು ನಿರಾಕರಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಮಂಗಳೂರಿನ ಕಸಾಯಿಖಾನೆಗೆ ಸಚಿವ ಯು.ಟಿ.ಖಾದರ್ 15 ಕೋಟಿ ನೀಡಿದ್ದ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಗೋಶಾಲೆಗೆ ಅನುದಾನ ನೀಡದ ಸರಕಾರ ಗೋವು ಕಡಿಯುವ ಕಸಾಯಿಖಾನೆಗೆ ಅನುದಾನ ನೀಡುವುದಾಗಿ ಹಿಂದು ಸಂಘಟನೆಗಳು ಆರೋಪಿಸಿದ್ದವು. ಆ ಬಳಿಕ ಉಸ್ತುವಾರಿ ಸಚಿವ ಯು.ಟಿ.ಖಾದರ್, ವಿಶ್ವ ಹಿಂದು ಪರಿಷತ್ತಿಗೆ ಸೇರಿದ ಪಜೀರು ಗೋಶಾಲೆಗೆ 12 ಲಕ್ಷ ಸೇರಿದಂತೆ ಮಂಗಳೂರಿನ ವಿವಿಧ ಗೋಶಾಲೆಗಳಿಗೆ 25 ಲಕ್ಷ ರೂಪಾಯಿ ಅನುದಾನ ನೀಡಿದ್ದರು.

ಹೀಗಿದ್ದರೂ, ಪೊಲೀಸರು ಈಗ ಕಸಾಯಿಖಾನೆಗೆ ಒಯ್ಯುತ್ತಿದ್ದ ಗೋವುಗಳನ್ನು ತಡೆದು ರಕ್ಷಿಸಿದ್ದ ಗೋವುಗಳನ್ನು ಗೋಶಾಲೆಯಲ್ಲಿ ಸಲಹಲು ನಿರಾಕರಿಸಿದ್ದು ಸಂಘಟನೆಗಳ ದ್ವಂದ್ವ ನೀತಿಯನ್ನು ತೋರಿಸುತ್ತಿವೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಮಂಗಳೂರು ಹೊರವಲಯದ ಪಜೀರು ಗೋಶಾಲೆ ಸರಕಾರದಿಂದ ಹತ್ತು ಎಕರೆ ಗೋಮಾಳ ಭೂಮಿಯನ್ನು ಪಡೆದು ನಿರ್ಮಿಸಲ್ಪಟ್ಟ ಗೋಶಾಲೆಯಾಗಿದ್ದು ಗೋವುಗಳ ಪಾಲನೆ ಉದ್ದೇಶದಿಂದಲೇ ಸ್ಥಾಪನೆಯಾಗಿತ್ತು ಅನ್ನುವುದು ವಿಶೇಷ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications