Get Updates
Get notified of breaking news, exclusive insights, and must-see stories!

ಮಳಲಿ ಮಸೀದಿ ಮಣ್ಣನ್ನು ಗಣಯಾಗಕ್ಕೆ ಸಮರ್ಪಿಸಿದ ಹಿಂದೂ ಸಂಘಟನೆಗಳು, ಇಲ್ಲಿದೆ ವಿವರ

ಹಿಂದೂ ಸಂಘಟನೆಗಳು ಮಂಗಳೂರಿನ ಹೊರವಲಯದಲ್ಲಿರುವ ಮಳಲಿ ಮಸೀದಿ ಮಣ್ಣನ್ನು ಗಣಯಾಗಕ್ಕೆ ಸಮರ್ಪಿಸಿವೆ.

ಮಂಗಳೂರು, ಮಾರ್ಚ್, 16: ಮಂಗಳೂರು ನಗರದ ಹೊರವಲಯದಲ್ಲಿರುವ ಮಳಲಿ ಮಸೀದಿಯ ವಿವಾದ ಪ್ರಕರಣದ ಹಿನ್ನೆಲೆ, ತಾಂಬೂಲ ಪ್ರಶ್ನಾ ಚಿಂತನೆಯಲ್ಲಿ ಹಿಂದೂ ಸಂಘಟನೆಗಳು ಇತ್ತೀಚೆಗೆ ಮಂದಿರ ನಿರ್ಮಾಣಕ್ಕೆ ಗಣಯಾಗ ನಡೆಸಿವೆ. ಮಳಲಿಯ‌ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ಈ ಗಣಯಾಗ ಪೂಜೆ ನೆರವೇರಿದೆ.

ದೇವಾಲಯ ಶೈಲಿಯ ಕಟ್ಟಡ ಪತ್ತೆ

ಕಳೆದ ವರ್ಷ ಮಳಲಿಯಲ್ಲಿರುವ ಜುಮ್ಮಾ ಮಸೀದಿಯ ನವೀಕರಣದ ವೇಳೆ ಹಿಂದೂ ದೇವಾಲಯ ಶೈಲಿಯ ಕಟ್ಟಡ ಪತ್ತೆಯಾಗಿತ್ತು. ಈ ವೇಳೆ ಹಿಂದೂ ಸಂಘಟನೆಗಳು ಮಧ್ಯಪ್ರವೇಶಿಸಿದ ಹಿನ್ನೆಲೆಯಲ್ಲಿ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.

Hindu organizations dedicated soil of Malali Masjid for Ganayag

ಅಲ್ಲದೆ ಹಿಂದೂ ಸಂಘಟನೆಗಳಿಂದ ಮಳಲಿ ಮಸೀದಿ ಸಮೀಪದ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ 2022ರ ಮೇ ತಿಂಗಳಲ್ಲಿ ತಾಂಬೂಲ ಪ್ರಶ್ನಾ ಚಿಂತನೆಯನ್ನು ನೆರವೇರಿಸಲಾಗಿತ್ತು. ಈ ವೇಳೆ ವರ್ಷದ ಒಳಗೆ ಗಣಯಾಗ ನಡೆಸುವಂತೆ ತಾಂಬೂಲ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಿತ್ತು.

Hindu organizations dedicated soil of Malali Masjid for Ganayag

ಮಾರ್ಚ್ 14ರಂದು ಗಣಯಾಗ

ಅದರಂತೆಯೇ ಮಾರ್ಚ್ 14ರಂದು ಈ ಗಣಯಾಗ ನಡೆದಿತ್ತು. ಈ ಗಣಯಾಗದಲ್ಲಿ ಶಾಸಕ ಡಾ‌.ವೈ.ಭರತ್ ಶೆಟ್ಟಿ, ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ. ತಾಂಬೂಲ ಪ್ರಶ್ನೆಯಲ್ಲಿ ಕಂಡುಬಂದಂತೆ ಈ ಗಣಯಾಗಕ್ಕೆ ಮಳಲಿ ಮಸೀದಿ ಪ್ರದೇಶದ ಮಣ್ಣನ್ನು ಸಮರ್ಪಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಗಣಯಾಗ ನಡೆಸುವ ವೇಳೆ ಗೌಪ್ಯತೆ ಕಾಪಾಡುವ ಹಿನ್ನೆಲೆಯಲ್ಲಿ ಹೆಚ್ಚು ಪ್ರಚಾರ ಮಾಡಲಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+