ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಏನಾಗ್ತಿದೆ?, ಹಿಂಜಾವೇ ಕಾರ್ಯಕರ್ತನ ಹತ್ಯೆಗೆ ಯತ್ನ

|
Google Oneindia Kannada News

ಮಂಗಳೂರು, ಜನವರಿ 09: ಇತ್ತೀಚೆಗಷ್ಟೇ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯಿಂದ ಪ್ರಕ್ಷುಬ್ಧವಾಗಿದ್ದ ಕರಾವಳಿ, ಮತ್ತೊಮ್ಮೆ ಅಶಾಂತಿಯಲ್ಲಿ ಬೇಯುತ್ತಿದೆ.

ದಾಳಿಗೆ ಪ್ರತಿ ದಾಳಿಗಳು ಮುಂದುವರೆದಿವೆ. ದೀಪಕ್ ರಾವ್ ಮತ್ತು ಬಶೀರ್ ಹತ್ಯೆಯ ಕಹಿ ನೆನಪುಗಳು ಮಾಸುವ ಮುನ್ನವೇ ಮತ್ತೊಂದು ಕೊಲೆ ಯತ್ನ ನಡೆದಿದೆ. ಸೂರತ್ಕಲ್ ನಲ್ಲಿ ಸೋಮವಾರ ರಾತ್ರಿ (ಜನವರಿ 8) ಹಿಂದೂ ಜಾಗರಣ ವೇದಿಕೆಯ ಮುಖಂಡ ಭರತ್ ಅಗರಮೇಲು ಎನ್ನುವರ ಕೊಲೆ ಯತ್ನ ನಡೆದಿದೆ.

ಪ್ರತೀಕಾರ ದಾಳಿಯ ಭಯ, ಸಂಜೆಯಾಗುತ್ತಿದ್ದಂತೆ ಮಂಗಳೂರು ಸ್ತಬ್ಧಪ್ರತೀಕಾರ ದಾಳಿಯ ಭಯ, ಸಂಜೆಯಾಗುತ್ತಿದ್ದಂತೆ ಮಂಗಳೂರು ಸ್ತಬ್ಧ

ಭರತ್ ಸೋಮವಾರ ರಾತ್ರಿ ತಮ್ಮ ಮನೆಯತ್ತ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದಾರೆ. ತಲ್ವಾರ್ ಹಿಡಿದುಕೊಂಡು ಬರುತ್ತಿದ್ದಂತೆಯೇ ಭರತ್ ಅಲ್ಲಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.

HJV member has alleged that four miscreants tried on attack him in Suratkal

ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಒಮ್ಮೆ ಹೋದ ಜೀವ ಮರಳಿ ಬಾರದು. ಹಾಗಾಗಿ ಪ್ರತೀಕಾರ ಮತ್ತು ಸೇಡನ್ನು ಬದಿಗಿರಿಸಿ ಎಲ್ಲರೂ ಶಾಂತಿ- ಸಾಮರಸ್ಯದಿಂದ ಬಾಳೋದು ಉತ್ತಮ ಎನ್ನುವುದು ನಮ್ಮ ಅಭಿಪ್ರಾಯ.

English summary
A man has alleged that four miscreants tried on attack him in Suratkal on the night of Monday, January 8. Bharat, co-convenor of Hindu Jagarana Vedike (HJV), is the complainant.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X