Mangalore University: ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್
ಮಂಗಳೂರು, ಏಪ್ರಿಲ್ 21: ತುಳು ರಂಗಭೂಮಿಯ ಅಪ್ರತಿಮ ಕಲಾವಿದ ದೇವದಾಸ್ ಕಾಪಿಕಾಡ್ಗೆ ಮಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದೆ.
ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವದ ಹಿನ್ನಲೆಯಲ್ಲಿ ದೇವದಾಸ್ ಕಾಪಿಕಾಡ್ ಸೇರಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ವಿ. ಹೆಗ್ಗಡೆ ಮತ್ತು ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಏಪ್ರಿಲ್ 23ರಂದು ಕೋಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತದೆ.
ದೇವದಾಸ್ ಕಾಪಿಕಾಡ್ ಆಲ್ರೌಂಡರ್ ಕಲಾವಿದರಾಗಿದ್ದಾರೆ. ತುಳು ರಂಗಭೂಮಿ, ತುಳು ಚಿತ್ರರಂಗದಲ್ಲಿ ಅತೀ ಪ್ರಸಿದ್ಧಿ ಗಳಿಸಿದ ನಟರಾಗಿದ್ದಾರೆ. ಇದಷ್ಟೇ ಅಲ್ಲದೇ ಬರಹಗಾರ, ನಿರ್ದೇಶಕ, ಕಥೆಗಾರ, ಗೀತ ರಚನೆಕಾರ, ಗಾಯಕ, ನಿರ್ಮಾಪಕ, ಹಾಸ್ಯನಟನಾಗಿಯೂ ದೇವದಾಸ್ ಕಾಪಿಕಾಡ್ ತಮ್ಮ ಪ್ರತಿಭಾ ಪ್ರದರ್ಶನ ಮಾಡಿದ್ದಾರೆ.

ಕಳೆದ 30 ವರ್ಷಗಳಿಂದ ತುಳು ರಂಗಭೂಮಿಯಲ್ಲಿ ದೇವದಾಸ್ ಕಾಪಿಕಾಡ್ ಸಕ್ರಿಯರಾಗಿದ್ದಾರೆ. 1989ರಲ್ಲಿ ದೇವದಾಸ್ ಕಾಪಿಕಾಡ್ "ನಲಗೆ ಬಲೇ ಚಾ ಪರ್ಕ' ಎಂಬ ನಾಟಕ ಜೀವನದ ಬಹು ದೊಡ್ಡ ತಿರುವನ್ನು ನೀಡಿತು. ಆ ಬಳಿಕ ಕಾಪಿಕಾಡ್ ಇದೇ ನಾಟಕದ ಹೆಸರನ್ನು ಇಟ್ಟುಕೊಂಡು ನಾಟಕ ತಂಡವನ್ನು ರಚಿಸಿ ಗೆಲುವಿನ ನಾಗಲೋಟವನ್ನೇ ಮಾಡಿದ್ದಾರೆ.
ತುಳು ರಂಗಭೂಮಿಯಲ್ಲಿ ದೇವದಾಸ್ ಕಾಪಿಕಾಡ್ 55 ನಾಟಕಗಳನ್ನು ರಚಿಸಿ ನಿರ್ದೇಶನ ಮಾಡಿದ್ದಾರೆ. ಜಗತ್ತಿನಾದ್ಯಾಂತ 8000ಕ್ಕೂ ಅಧಿಕ ನಾಟಕ ಪ್ರದೇಶನವನ್ನು ದೇವದಾಸ್ ಕಾಪಿಕಾಡ್ ನೀಡಿದ್ದಾರೆ. ತುಳುನಾಡಿನಲ್ಲಿ ಸರ್ವಮತದ ಜನರ ಮೊಗದಲ್ಲಿ ನಗು ಅರಳಿಸಿದ ಕೀರ್ತಿ ದೇವದಾಸ್ ಕಾಪಿಕಾಡ್ರವರದ್ದಾಗಿದೆ.
ಯುವ ಕಲಾವಿದರ ಮಾಸ್ಟರ್ ಆಗಿರುವ ದೇವದಾಸ್ ಕಾಪಿಕಾಡ್ ತುಳು ಚಿತ್ರರಂಗದಲ್ಲೂ ಛಾಪು ಮೂಡಿಸಿದ್ದಾರೆ. ಬೊಳ್ಳಿ ಮೂವೀಸ್ ಎಂಬ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವನ್ನೂ ದೇವದಾಸ್ ಕಾಪಿಕಾಡ್ ಮಾಡಿದ್ದಾರೆ.
ದೇವದಾಸ್ ಕಾಪಿಕಾಡ್ ಅದ್ಭುತ ಪ್ರತಿಭೆಯನ್ನು ಸ್ಯಾಂಡಲ್ವುಡ್ ಖ್ಯಾತ ನಟ ರಮೇಶ್ ಅರವಿಂದ್ ಸೇರಿದಂತೆ ದಿಗ್ಗಜ ನಟರು ಮೆಚ್ಚಿಕೊಂಡಿದ್ದಾರೆ. ತುಳು ರಂಗಭೂಮಿ ಮತ್ತು ಚಲನಚಿತ್ರೋದ್ಯಮಕ್ಕೆ ನೀಡಿದ ಕೊಡುಗೆಗಳನ್ನು ಗುರುತಿಸಿ ಸರ್ಕಾರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಾದೇಶಿಕ ಭಾಷೆಯ ಬೆಳವಣಿಗೆಗೆ ನೀಡಿದ ಅತ್ಯಮೂಲ್ಯ ಸೇವೆಯನ್ನು ಗಮನಿಸಿ ಇದೀಗ ಮಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications