ಜ.16ರಿಂದ ಮಂಗ್ಳೂರಲ್ಲಿ ಆರೋಗ್ಯ ಶ್ರೀ ಯೋಜನೆ ಸೇವೆ ಸ್ಥಗಿತ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಭಾಗ್ಯ ಸೇವೆಗಳನ್ನು ದ.ಕ ಜಿಲ್ಲೆಯಲ್ಲಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಸರ್ಕಾರ ಬಾಕಿ ಮೊತ್ತ ಹಣವನ್ನು ಆಸ್ಪತ್ರೆಗಳಿಗೆ ನೀಡದಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮಂಗಳೂರು, ಜನವರಿ. 14 : ಬಿಪಿಎಲ್ ಕಾರ್ಡುದಾರರಿಗೆ ನೀಡಲಾಗುತ್ತಿದ್ದ ವಾಜಪೇಯಿ ಆರೋಗ್ಯ ಶ್ರೀ, ರಾಜೀವ್ ಆರೋಗ್ಯ ಭಾಗ್ಯ ಮತ್ತು ಜೋತಿ ಸಂಜೀವಿನಿ ಎಂಬ ಆರೋಗ್ಯ ಭಾಗ್ಯಗಳನ್ನು ಸ್ಥಗಿತಗೊಳಿಸಲು ದಕ್ಷಿಣ ಕನ್ನಡ ಫೆಡರೇಷನ್ ಆಫ್ ಹಾಸ್ಪಿಟಲ್ ಅಸೋಸಿಯೇಷನ್ ನಿರ್ಧರಿಸಿದೆ.
ರಾಜ್ಯ ಸರ್ಕಾರವು ಆಸ್ಪತ್ರೆಗಳಿಗೆ ಈ ಮೂರು ಆರೋಗ್ಯ ಭಾಗ್ಯದ ಬಾಕಿ ಮೊತ್ತವನ್ನು ನೀಡದೆ ಇರುವುದುರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಗಂಭೀರ ಖಾಯಿಲೆಗಳಿಂದ ಬಳಲುವ ಬಿ.ಪಿ.ಎಲ್ ಕಾರ್ಡುದಾರರ ಆರೋಗ್ಯ ರಕ್ಷಣೆಗಾಗಿ ಕರ್ನಾಟಕ ಸರ್ಕಾರ ಈ ಮೂರು ಆರೋಗ್ಯ ಯೋಜನೆಯನ್ನು ರೂಪಿಸಿತ್ತು.
ಆದರೆ, ಇದೀಗ ಬಡವರ ಪಾಲಿಗೆ ಸಂಜೀವಿನಿಯಾಗಿದ್ದ ಈ ಆರೋಗ್ಯ ಯೋಜನೆಗಳಲ್ಲಿ ಚಿಕಿತ್ಸೆ ಪಡೆದವರ ವೆಚ್ಚವನ್ನು ಸರ್ಕಾರ ಪಾವತಿ ಮಾಡದೆ ಕೋಟ್ಯಾಂತರ ರೂ. ಬಾಕಿ ಇರಿಸಿಕೊಂಡಿರುವುದರಿಂದ ಜನವರಿ 16ರಿಂದ ಸ್ಥಗಿತಗೊಳಿಸಲು ಫೆಡರೇಷನ್ ಆಫ್ ಹಾಸ್ಪಿಟಲ್ ಅಸೋಸಿಯೇಷನ್ ನಿರ್ಧರಿಸಿದೆ.

ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಸರಕಾರ ಜಾರಿಗೆ ತಂದ ಆರೋಗ್ಯ ಯೋಜನೆಗಳಲ್ಲಿ ವಾಜಪೇಯಿ ಆರೋಗ್ಯಶ್ರೀ ಯೋಜನೆ ಬಹಳ ಮಹತ್ವದ್ದು. ಈ ಯೋಜನೆಯನುಸಾರ ಬಡತನ ರೇಖೆಯ ಕೆಳಗಿನ ಜನರಿಗೆ ತೆರೆದ ಹೃದಯದ ಶಸ್ತ್ರ ಚಿಕಿತ್ಸೆ, ಬೈಪಾಸ್ ಸರ್ಜರಿ, ಹೃದಯದ ಶಸ್ತ್ರಚಿಕಿತ್ಸೆಗಳು ಮತ್ತಿತರ ದೊಡ್ಡ ಮಟ್ಟದ ಶಸ್ತ್ರ ಚಿಕಿತ್ಸೆಗಳನ್ನು ಸರಕಾರದ ಸೂಚಿತ ಆಸ್ಪತ್ರೆಗಳಲ್ಲಿ ಉಚಿತವಾಗಿ ಮಾಡಿಸಿಕೊಳ್ಳಬಹುದು.
ಹೆಚ್ಚಿನೆಲ್ಲ ಶಸ್ತ್ರಚಿಕಿತ್ಸೆಗಳ ಸಂಪೂರ್ಣ ಪ್ಯಾಕೇಜ್ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿ ಬರುತ್ತದೆ. ಇದರ ಜತೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲಭ್ಯವಿದ್ದ ರಾಜೀವ್ ಆರೋಗ್ಯ ಭಾಗ್ಯ ಯೋಜನೆ ಮತ್ತು ಜ್ಯೋತಿ ಸಂಜೀವಿನಿ ಯೋಜನೆಗಳು ಸ್ಥಗಿತಗೊಳ್ಳಲಿವೆ.
ಸರಕಾರ ಬಾಕಿ ಇರಿಸಿಕೊಂಡಿರುವ ಹಣವನ್ನು ಪಾವತಿಸುವವರಿಗೆ ಯೋಜನೆ ಸ್ಥಗಿತಗೊಳ್ಳಲಿದೆ. ಅಲ್ಲದೆ ತಮ್ಮ ಪ್ರಮುಖ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ನರ್ಸಿಂಗ್ ಹೊಮ್ ಆಂಡ್ ಹಾಸ್ಪಿಟಲ್ ಅಸೋಸಿಯೇಷನ್ ನ ಅಧ್ಯಕ್ಷ ಡಾ. ಯೂಸಫ್ ಕುಂಬ್ಳೆ ತಿಳಿಸಿದ್ದಾರೆ.
ರಾಜ್ಯಾದ್ಯಂತ ಸುಮಾರು 200 ಕೋಟಿಯಷ್ಟು ಹಣ ಬಾಕಿಯಿದ್ದು , ದ.ಕ ಮತ್ತು ಉಡುಪಿ ಜಿಲ್ಲೆಗಳಿಗೆ ಸುಮಾರು 60 ಕೋಟಿಯಷ್ಟು ಚಿಕಿತ್ಸಾ ವೆಚ್ಚ ಬಾಕಿಯಿದೆ. ಇದು ಪಾವತಿಯಾಗಲೇ ಬೇಕು.
ಕಳೆದ ಎರಡು ತಿಂಗಳಿನಿಂದ ಬಾಕಿ ಹಣವನ್ನು ಪಾವತಿಸುವಂತೆ ಸರಕಾರದ ಗಮನ ಸೆಳೆಯಲಾಗಿದ್ದರೂ ಸ್ಪಂದನೆಯಿಲ್ಲ ಎಂದು ಎ. ಜೆ. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ತಿಳಿಸಿದರು.
ಈಗಾಗಲೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ತೊಂದರೆ ಆಗುವುದನ್ನು ತಪ್ಪಿಸಲು ಅವರ ಚಿಕಿತ್ಸೆಯನ್ನು ಮುಂದುವರೆಸಲಾಗುವುದು.
ಆದರೆ, ಹೊಸ ರೋಗಿಗಳು ಬಂದರೆ ಅವರಿಗೆ ಈ ಯೋಜನೆಯಡಿ ಸೇವೆ ನೀಡುವುದಿಲ್ಲ ಎಂದು ಫೆಡರೇಷನ್ ಆಫ್ ಹಾಸ್ಪಿಟಲ್ ಅಸೋಸಿಯೇಷನ್ ನಿಖರವಾಗಿ ತಿಳಿಸಿದೆ. ಇದರಿಂದ ಬಡಪಾಯಿ ಜನರಿಗೆ ದಿಕ್ಕು ತೋಚದಂತಾಗಿದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications