ಮಂಗಳೂರು : ಬಾವಿಯಿಂದ ಬಿಸಿನೀರ ಬುಗ್ಗೆ, ಜನರಿಗೆ ಕುತೂಹಲ
ಮಂಗಳೂರು, ಆಗಸ್ಟ್ 29 : ಪೊಳಲಿ ರಾಜರಾಜೇಶ್ವರಿ ದೇವಾಸ್ಥನದ ಸಮೀಪದ ಮನೆಯೊಂದರ ಬಾವಿಯಲ್ಲಿ ಬಿಸಿನೀರಿನ ಬುಗ್ಗೆ ಕಾಣಿಸಿಕೊಂಡು ಬಾವಿಯ ಸಿಹಿನೀರು ಬಿಸಿನೀರಾಗಿ ಪರಿವರ್ತಿತವಾದ ಘಟನೆ ಸೋಮವಾರ ನಡೆದಿದೆ.
ಬಿಸಿ ನೀರಿನ ಬುಗ್ಗೆ ನೋಡಲು ಬ್ಯಾಂಡ್ ವಾದಕರಾಗಿರುವ ಮೋಹನ್ ದೇವಾಡಿಗ ಎಂಬವರ ಮನೆಯ ಬಾವಿಯತ್ತ ಕುತೂಹಲಿಗರ ದಂಡೇ ಆಗಮಿಸುತ್ತಿದ್ದು, ಅಕ್ಕಪಕ್ಕದ ಗ್ರಾಮಗಳ ಜನರು ಇದೊಂದು ಪವಾಡವೆಂದು ಹೇಳುತ್ತಿದ್ದಾರೆ. ಸದ್ಯ, ಮನೆಯ ಬಾವಿ ಕುತೂಹಲದ ಕೇಂದ್ರ ಬಿಂದುವಾಗಿದೆ.

ಮೋಹನ್ ಎಂಬುವವರ ಮನೆಯ ಅಂಗಳದಲ್ಲಿ ವರ್ಷ ಪೂರ್ತಿ ನೀರು ದೊರೆಯುವ ಸಿಹಿನೀರಿನ ಬಾವಿಯಿದ್ದು, ಇಂದು ಮುಂಜಾನೆ ಮನೆಯ ನಿತ್ಯ ಕೆಲಸಗಳಿಗಾಗಿ ಬಾವಿಯ ನೀರು ಸೇದಿದಾಗ ಅಚ್ಚರಿ ಎದುರಾಗಿದೆ. ಬಾವಿಯ ನೀರು ತಣ್ಣಗಿರದೆ ಬಿಸಿಯಾಗಿತ್ತು.
ಬಳಿಕ ಮನೆಮಂದಿ ಎಲ್ಲರೂ ಅಚ್ಚರಿಗೊಂಡು ಮತ್ತೆ ಮತ್ತೆ ಬಾವಿಯಿಂದ ನೀರು ಸೇದಿ ಮೇಲಕ್ಕೆ ತೆಗೆದಿದ್ದು, ಈ ವೇಳೆ ಬಾವಿಯ ನೀರು ಬಿಸಿಯಾಗಿದ್ದನ್ನು ಕಂಡು ಆಶ್ಚರ್ಯಗೊಂಡರು. ಈ ಸುದ್ದಿ ಗ್ರಾಮದೆಲ್ಲೆಡೆ ಹಬ್ಬಿದ್ದು, ಅಕ್ಕಪಕ್ಕದ ಮನೆಯವರು ಆಗಮಿಸಿ ಪರೀಕ್ಷೆ ನಡೆಸಿದ್ದು, ಈ ವೇಳೆಯೂ ಬಾವಿಯ ನೀರು ಬಿಸಿಯಾಗಿರುವುದು ಬೆಳಕಿಗೆ ಬಂದಿದೆ.

ಕೆಲವೇ ತಾಸಿನಲ್ಲಿ ವಿಷಯ ತಿಳಿದ ಪೊಳಲಿ, ಕರಿಯಂಗಳ, ಕೈಕಂಬ, ಗುರುಪುರ, ಕಾಜೋಳ, ಅಡ್ಡೂರು, ಬಡಕಬೈಲು ಕಡೆಯಿಂದ ಜನರ ದಂಡು ಬಾವಿಯತ್ತ ಆಗಮಿಸಿದ್ದು ಸ್ಥಳದಲ್ಲಿ ಗನಜಂಗುಳಿ ಸೇರಿದೆ.
ದೇವಾಲಯಕ್ಕೆ ಸಂಬಂಧವಿಲ್ಲ : ಬಾವಿಯಲ್ಲಿ ಬಿಸಿ ನೀರು ಕಂಡು ಬಂದಿದ್ದು, ಇದು ಗಂದಕದ ಪ್ರಭಾವದಿಂದ ಎಂಬುವುದು ತಿಳಿದು ಬಂದಿದೆ. ಈ ಬಾವಿಗೂ ದೇಗುಲಕ್ಕು ಯಾವುದೇ ಸಂಬಂಧವಿಲ್ಲ ಹಾಗೂ ಈ ಬಾವಿಯ ನೀರನ್ನು ದೇವಸ್ಥಾನಕ್ಕೆ ಬಳಸುತ್ತಿಲ್ಲ ಎಂದು ಶ್ರೀ ಕ್ಷೇತ್ರಕ್ಕೆ ಸಂಬಂಧ ಪಟ್ಟವರು ಹಾಗೂ ಸ್ಥಳೀಯರು ತಿಳಿಸಿದ್ದಾರೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications