ನನ್ಮಗಂದ್, ಓಟು ಕೇಳಲ್ಲ. ಶಾಸಕನಾಗಬೇಕಿದ್ರೆ ಓಟ್ ಹಾಕಿ ಗೆಲ್ಸಿ ಅಷ್ಟೆ!
Recommended Video

ಮಂಗಳೂರು, ಏಪ್ರಿಲ್ 11: "ನಾನು ರಾಜಕೀಯಕ್ಕೆ ಈಗಾಗಲೇ ಎಂಟ್ರಿ ಕೊಡ್ತಿದ್ದೇನೆ . ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಎಂಎಲ್ಎ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ಆದರೆ ಚುನಾವಣೆಗೆ ನಾನು ಯಾರ ಮುಂದೂ ತಲೆ ತಗ್ಗಿಸಿ ಕೈ ಮುಗಿದು ಓಟು ಕೇಳಲ್ಲ. ನಾನು ಶಾಸಕನಾಗಿ ನಿಮಗೆ ಬೇಕಾದರೆ ನನಗೆ ಮತ ಹಾಕಿ." ಈ ರೀತಿ ಡೈಲಾಗ್ ಹೊಡೆದಿದ್ದು ಬೇರೆ ಯಾರು ಅಲ್ಲ. ಹುಚ್ಚಾ ವೆಂಕಟ್ . ಇನ್ಯಾರು ತಾನೆ ಈ ರೀತಿ ಡೈಲಾಗ್ ಬಿಡಲು ಸಾಧ್ಯ ಹೇಳಿ!
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಹುಚ್ಚಾ ವೆಂಕಟ್, "ಒಂದಲ್ಲ ಒಂದು ದಿನ ನಾನು ಈ ದೇಶದ ಪ್ರಧಾನ ಮಂತ್ರಿ ಆಗೇ ಆಗುತ್ತೇನೆ. ನಾನು ಈ ಬಾರಿ ಚುನಾವಣೆಗೆ ನಿಂತಿದ್ದೇನೆ. ಆದರೆ ಓಟ್ ಗಾಗಿ ನಾನು ಡ್ರಿಂಕ್ಸ್, ಸೀರೆ, ಹಣ ಕೊಡಲ್ಲ. ಓಟು ಕೇಳಲ್ಲ. ಮನೆ - ಮನೆಗೆ ತೆರಳಿ ಪ್ರಚಾರ ಮಾಡಲ್ಲ. ನಾನು ಯಾರ ಮುಂದೆನೂ ಕೈಯೂ ಮುಗಿಯಲ್ಲ. ನಾನ್ಯಾಕೆ ಬೇರೆ ರಾಜಕೀಯ ವ್ಯಕ್ತಿಗಳ ತರಹ ಕೈಮುಗಿಲಿ? ನಿಮಗೆ ನಾನು ಶಾಸಕನಾಗಿ ಬೇಕಂದ್ರೆ ಓಟ್ ಕೊಟ್ಟು ಗೆಲ್ಲಿಸಿ," ಎಂದು ಹೇಳಿದರು.

ಚುನಾವಣೆಗೆ ನಿಂತಿದ್ದೇನೆ ಅಂದ್ರೆ ದುಡ್ಡು ಕೊಟ್ಟು ತಮಟೆ ಬಡಿಯೋ ಕೆಲಸಾನೂ ನಾನು ಮಾಡಲ್ಲ. ಒಂದು ಸಲ ಡ್ರಿಂಕ್ಸ್ , ಸೀರೆ, ಹಣ ತೆಗೊಂಡ್ರೆ ಹೆಚ್ಚೆಂದರೆ ಒಂದು ತಿಂಗಳು ಉಪಯೋಗವಾಗಬಹುದು. ಆದರೆ, ಬಳಿಕ 5 ವರ್ಷ ಕಷ್ಟಪಡಬೇಕಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.
ಬಿಗ್ ಬಾಸ್ ನಿಂದ ಬಂದ ಮೇಲೆ ನನ್ನ ಹುಚ್ಚ ವೆಂಕಟ್ ಚಿತ್ರ ಸೂಪರ್ ಹಿಟ್ ಆಗಿದೆ ಎಂದು ಹೇಳಿದ ಅವರು, ಕರಾವಳಿ ಮೀನು ಗಾರಿಕೆ ಬಗ್ಗೆ ಪ್ರಸ್ತಾಪಿಸಿದರು. "ಮೀನುಗಾರಿಕೆ ನಡೆಸುವವರು ಮೀನು ಹಿಡಿಯಲು ಹೋಗಿ ಯಾಕೆ ಲೈಫ್ ನಲ್ಲಿ ರಿಸ್ಕ್ ತೆಗೋಬೇಕು? ವ್ಯವಸಾಯ ಕೂಡಾ ಮಾಡಬಹುದು ಅಲ್ವಾ?" ಎಂದು ವಿಚಿತ್ರ ಸಲಹೆ ನೀಡಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
"ಯಾರೋ ಮೀನು ತಿನ್ನಬೇಕೆಂದು ನೀವ್ಯಾಕೆ ಜೀವನ ರಿಸ್ಕ್ ಮಾಡ್ಕೋಬೇಕು. ಇಷ್ಟು ವರ್ಷ ಸರಕಾರಕ್ಕೆ ಹಣ ಕಟ್ಟಿದ್ದೇವೆಂದು ಸರಕಾರಕ್ಕೆ ಹೇಳಿ. ಸರಕಾರದಿಂದ ಸಹಾಯ ಪಡೆದು ವ್ಯವಸಾಯ ಮಾಡಿ," ಎಂದು ಅವರು ಮೀನುಗಾರರಿಗೆ ಆಗ್ರಹಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications