ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಬ್ರಹ್ಮಣ್ಯದಲ್ಲಿ ನೂರಾರು ಮೀನುಗಳ ಮಾರಣ ಹೋಮ: ವಿಷ ಬೆರಕೆ ಶಂಕೆ

|
Google Oneindia Kannada News

ಮಂಗಳೂರು, ಫೆಬ್ರವರಿ 11:ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪಕ್ಕದಲ್ಲೇ ಹರಿಯುವ ಪುಣ್ಯನದಿ ದರ್ಪಣ ತೀರ್ಥದಲ್ಲಿ ನೂರಾರು ಮೀನುಗಳು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದರ್ಪಣ ತೀರ್ಥ ನದಿಯ ಕೆಳಭಾಗದಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ನದಿ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲೇ ಇರುವ ದರ್ಪಣ ತೀರ್ಥ ನದಿ ಕುಮಾರಧಾರಾದ ಉಪನದಿ. ಕುಮಾರ ಪರ್ವತದಿಂದ ಹರಿದು ಬರುವ ಈ ನದಿಯೂ ಆದಿಸುಬ್ರಹ್ಮಣ್ಯ ಭಾಗದ ಮೂಲಕ ದೇವಸ್ಥಾನದ ಪಕ್ಕದಲ್ಲೇ ಹರಿದು ಕುಮಾರಧಾರಾ ಸೇರುತ್ತದೆ.ಇವೆರಡೂ ಸೇರಿ ಹರಿಯುವ ರುದ್ರಪಾದ ಬಳಿ ನದಿ ನೀರಿನಲ್ಲಿ ಮೀನುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ.

Hundreds of fishes died in Kukke Subramanya

ಚಾಮರಾಜನಗರದ ಕೆರೆಯಲ್ಲಿ ಮೀನುಗಳ ಮಾರಣಹೋಮ!ಚಾಮರಾಜನಗರದ ಕೆರೆಯಲ್ಲಿ ಮೀನುಗಳ ಮಾರಣಹೋಮ!

ಪರಿಸರದಲ್ಲಿ ಮೀನುಗಳು ಸತ್ತು ದುರ್ವಾಸನೆ ಹರಡಿವೆ. ನದಿ ನೀರು ಬತ್ತಿ ಕಲುಷಿತಗೊಂಡು ಜಲಚರಗಳು ಸತ್ತಿರುವ ಸಂಶಯವೂ ಇದೆ. ಬಿಸಿಲ ಬೇಗೆ ಕೂಡ ಹೆಚ್ಚಾಗಿರುವ ಕಾರಣ ನದಿಯಲ್ಲಿ ನೀರಿನ ಪ್ರಮಾಣ ಕೂಡ ಕಡಿಮೆಗೊಂಡಿದೆ. ತಾಪದಿಂದ ನೀರು ಬಿಸಿಗೊಂಡು ಆಮ್ಲಜನಕ ಕಡಿಮೆಯಾಗಿ ಮೀನುಗಳು ಸತ್ತಿರುವ ಬಗ್ಗೆಯೂ ಸಂಶಯ ವ್ಯಕ್ತಪಡಿಸಲಾಗಿದೆ.

English summary
Hundred of fishes died in Darpana Thirtha river at Kukke Subramanya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X