Ullal JDS Candidate: ಬೆದರಿಕೆ ಹಿನ್ನೆಲೆ ನಾಮಪತ್ರ ವಾಪಸ್ ಪಡೆದಿದ್ದೇನೆ: ಉಲ್ಲಾಳದ ಜೆಡಿಎಸ್ ಅಭ್ಯರ್ಥಿ ಸ್ಪಷ್ಟನೆ
ಮಂಗಳೂರು, ಏಪ್ರಿಲ್, 24: ಉಳ್ಳಾಲದ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಾಸ್ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಜೆ.ಡಿ.ಎಸ್ ನಾಯಕರು ಸುದ್ದಿಗೋಷ್ಟಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅಲ್ತಾಫ್ ಕುಂಪಲ, ನಾನು ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೆ. ಆದರೆ ಹಿಂದಿನ ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ವಾಪಸ್ ಬರುತ್ತಿರುವ ವೇಳೆ ನನಗೆ ನಾಮಪತ್ರ ವಾಪಸ್ ಪಡೆಯುವಂತೆ ಗೊಂಪೊಂದು ಧಮ್ಕಿ ಹಾಕಿತ್ತು ಎಂದಿದ್ದಾರೆ.
ಕಾಂಗ್ರೆಸ್ನ ಉಸ್ಮಾನ್ ಕಲ್ಲಾಪು ಸೇರಿ ಹಲವರು ನನ್ನನ್ನ ಕರೆದುಕೊಂಡು ಹೋಗಿ ಬೆದರಿಕೆ ಹಾಗೂ ಧಮ್ಕಿ ಹಾಕಿ ನಾಮಪತ್ರ ವಾಪಸ್ ಪಡೆಯುವಂತೆ ಸಹಿ ಹಾಕಿಸಿದ್ದಾರೆ. ಆಗ ನಾನು ಯಾವುದೇ ಆಮಿಷಗಳಿಗೆ ಒಳಗಾಗಿಲ್ಲ, ಒತ್ತಡದಿಂದ ನಾಮಪತ್ರ ವಾಪಾಸ್ ಪಡೆದಿದ್ದೇನೆ ಎಂದು ಉಳ್ಳಾಲದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಸ್ಪಷ್ಟನೆ ನೀಡಿದ್ದಾರೆ.

ನಂತರ ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ.ಸದಾಶಿವ ಮಾತನಾಡಿ, ನಾವು ಎಂಟು ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದ್ದೇವೆ. ಹಾಗೆಯೇ ಎಲ್ಲವೂ ಸಿಂಧುವಾಗಿ ಸ್ವೀಕಾರವಾಗಿದೆ ಎಂದರು. ಮಂಗಳೂರು ಉತ್ತರದಲ್ಲಿ ಪ್ರಭಾವಿ ನಾಯಕ ಮೊಯಿದ್ದೀನ್ ಬಾವಾ ಸ್ಪರ್ಧೆ ಮಾಡಿದ್ದಾರೆ. ಅಲ್ಲದೆ ಮತ್ತೊಂದೆಡೆ ಜನಸಾಮಾನ್ಯರಿಗೆ ಬೇಕೆನಿಸಿದ ಸಾಮಾಜಿಕ ಕಳಕಳಿಯ ವ್ಯಕ್ತಿ ಆಗಿದ್ದರಿಂದ ಕ್ಷೇತ್ರದಲ್ಲಿ ಅಲ್ತಾಫ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೆವು.
ಅಲ್ತಾಫ್ ಅವರಿಗೆ ಜನರ ಪ್ರೀತಿ, ವಿಶ್ವಾಸ ಇದೆ. ಅವರು ಏಪ್ರಿಲ್ 20ರಂದು ಉಳ್ಳಾಲದಲ್ಲಿ ನಾಮಪತ್ರ ಸಲ್ಲಿಸಿದ್ದರು. ಮುಂದೆ ಅವರ ಹಬ್ಬದ ದಿನ ಮಸೀದಿಯಲ್ಲಿ ಪ್ರಾರ್ಥನೆ ಮಾಡಿ ಹೊರ ಬರುತ್ತಾ ಇದ್ದರು. ಆ ವೇಳೆ ಯಾರೋ ಅವರನ್ನು ಕರೆದುಕೊಂಡು ಹೋಗಿ ಪತ್ರಕ್ಕೆ ಸಹಿ ಹಾಕಿಸಿ ಚುನಾವಣಾಧಿಕಾರಿ ಎದುರು ನಿಲ್ಲಿಸಿ ನಾಮಪತ್ರ ವಾಪಸ್ ತೆಗೆಸಿದ್ದಾರೆ ಎಂದರು.
ಸಜ್ಜನ ವ್ಯಕ್ತಿ ಕುಟುಂಬದಿಂದ ಬಂದ ವ್ಯಕ್ತಿ ಆದ್ದುದರಿಂದ ಅವರು ಬೆದರಿಕೆಗೆ ಒಳಗಾಗಿ ನಾಮಪತ್ರ ವಾಪಸ್ ಪಡೆದಿದ್ದಾರೆ.
ಇಂತಹ ಘಟನೆ ಇಡೀ ಜಿಲ್ಲೆಗೆ ಒಂದು ಕಪ್ಪು ಚುಕ್ಕೆಯಾಗಿದೆ. ಒಬ್ಬ ಸಾಮಾನ್ಯ ವ್ಯಕ್ತಿಯನ್ನು ಎದುರಿಸಲಾಗದವರು ಎಂತಹ ನಾಯಕ? ಇದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಅಲ್ಲದೆ ಈಗಾಗಲೇ ಪೊಲೀಸ್ ಕಮಿಷನರ್ ಹಾಗೂ ಚುನಾವಣಾಧಿಕಾರಿಗೆ ದೂರು ನೀಡಿದ್ದು, ಕಾನೂನು ಮೂಲಕ ಹೋರಾಟ ಮಾಡುತ್ತೇವೆ ಎಂದರು.
ಇದು ಒಬ್ಬ ಪ್ರಭಾವಿ ಮತ್ತು ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯ ಷಡ್ಯಂತ್ರ ಆಗಿದೆ. ಈ ಸಂಬಂಧ ಸೂಕ್ತ ತನಿಖೆ ಆಗಲಿ ಎಂದು ಒತ್ತಾಯಿಸಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications