ಶರತ್ ಹತ್ಯೆ ಪ್ರಕರಣದ ಸ್ಫೋಟಕ ಮಾಹಿತಿ ನನ್ನ ಬಳಿ ಇದೆ: ಸ್ವಾಮೀಜಿ
ಮಂಗಳೂರು, ಜುಲೈ 14: ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣದ ಷಡ್ಯಂತ್ರದ ಬಗೆಗಿನ ಸ್ಫೋಟಕ ಮಾಹಿತಿಯನ್ನು ತನಿಖಾ ದಳಕ್ಕೆ ನೀಡುವುದಾಗಿ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಶರತ್ ಸಾವಿನ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ. ಈ ಸಂಬಂಧ ನನ್ನ ಬಳಿ ಸ್ಫೋಟಕ ಮಾಹಿತಿಯಿದ್ದು, ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದ್ದೇ ಆದಲ್ಲಿ ಆ ಮಾಹಿತಿಯನ್ನು ತನಿಖಾ ಸಂಸ್ಥೆಗೆ ನೀಡುತ್ತೇನೆ ಎಂದು ಹೇಳಿದರು.

ಐಪಿಎಸ್ ಅಧಿಕಾರಿಯೊಬ್ಬರನ್ನು ನನ್ನ ಸಹಚರರ ಮುಂದೆ ನಿಲ್ಲಿಸಿ, ವ್ಯಕ್ತಿಯೊಬ್ಬರ ಮೇಲೆ ಆ ಸೆಕ್ಷನ್ - ಈ ಸೆಕ್ಷನ್ ಹಾಕಿ ಎನ್ನುವಂತಹ ಜನಪ್ರತಿನಿಧಿ ಇದ್ದಾರೆ. ಹೀಗಿರುವಾಗ ರಾಜ್ಯ ಪೊಲೀಸರಿಗೆ ನನ್ನ ಬಳಿಯಿರುವ ಮಾಹಿತಿಯನ್ನು ನೀಡಿದ್ದೇ ಆದಲ್ಲಿ, ಅದನ್ನು ತಿರುಚುವ ಅಥವಾ ಮುಚ್ಚಿಡುವ ಪ್ರಯತ್ನವನ್ನು ನಡೆಸಬಹುದು ಎಂಬ ಅನುಮಾನ ವ್ಯಕ್ತಪಡಿದರು.
ಆ ಕಾರಣಕ್ಕೆ ನನ್ನ ಬಳಿಯಿರುವ ಮಾಹಿತಿಯನ್ನು ಪೊಲೀಸರಿಗೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಮುಂದಿನ ದಿನಗಳಲ್ಲಿ ಈ ಸಂಬಂಧ ಕೇಂದ್ರ ಗ್ರಹಸಚಿವರು ಹಾಗೂ ಪ್ರಧಾನಿ ಬಳಿಗೆ ತೆರಳುವುದಾಗಿಯೂ ಇದೇ ಸಂದರ್ಭದಲ್ಲಿ ಹೇಳಿದರು.

ಶರತ್ ಶವಯಾತ್ರೆಯ ಮೆರವಣಿಗೆಯಲ್ಲಿ ನನ್ನ ವಾಹನಕ್ಕೂ ಹಾನಿಯಾಗಿದ್ದು, ಘಟನೆಗೆ ನಾನು ಸಾಕ್ಷಿಯಾಗಿದ್ದರೂ ಏಕಾಏಕಿ ಹಿಂದೂ ಸಂಘಟನೆಗಳ ಮುಖಂಡರ ವಿರುದ್ಧ ಗಂಭೀರ ಪ್ರಕರಣ ದಾಖಲಿಸುವುದು ಷಡ್ಯಂತ್ರವಾಗಿದೆ ಎಂದು ಅವರು ಆರೋಪಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications