ಉಪೇಂದ್ರ ಕೆಪಿಜೆಪಿಗೆ 224 ಮಂದಿ ಸಿಎಂ ಬೇಕಿದ್ದಾರೆ
ಮಂಗಳೂರು, ಡಿಸೆಂಬರ್ 5: "ರಾಜ್ಯದಲ್ಲಿ ಜನರ ಮಧ್ಯೆ ಕೆಲಸ ಮಾಡುವ 224 ಜನ ಸಿಎಂ ನನಗೆ ಬೇಕಿದ್ದಾರೆ. ಅವರು ತಮ್ಮ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳಂತೆ ಜನರ ಸಮಸ್ಯೆಗಳನ್ನು ಪರಿಹರಿಸಬೇಕು" ಎಂದು ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷ (ಕೆಪಿಜೆಪಿ) ಸಂಸ್ಥಾಪಕ- ನಟ ಉಪೇಂದ್ರ ತಿಳಿಸಿದರು.
ಕೆಪಿಜೆಪಿಯ ಪ್ರಚಾರದ ಸಲುವಾಗಿ ಇಲ್ಲಿಗೆ ಭೇಟಿ ನೀಡಿದ ಅವರು ಮಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಿರುವ ರಾಜಕೀಯ ವ್ಯವಸ್ಥೆಯ ವ್ಯತಿರಿಕ್ತವಾಗಿ ಕೆಪಿಜೆಪಿಯನ್ನು ಆರಂಭಿಸಿದ್ದೇವೆ ಎಂದು ತಿಳಿಸಿದರು.

ಒಬ್ಬ ಕಾರ್ಮಿಕನಾಗಿ ಜನರ ಮುಂದೆ ಹೋಗುತ್ತಿದ್ದೇನೆ. ನನ್ನ ಯೋಚನೆಗಳನ್ನು ಮುಂದಿಟ್ಟು ಅವರೊಂದಿಗೆ ಮಾತನಾಡುತ್ತಿದ್ದೇನೆ. ಸಮಾಜದಲ್ಲಿನ ಪ್ರಜ್ಞಾವಂತರು ಪಕ್ಷಕ್ಕೆ ಬನ್ನಿ ಎಂದು ಅವರು ಕರೆ ನೀಡಿದರು.
ಎಲ್ಲಿ ಸತ್ಯ ಇರುತ್ತದೋ ಅಲ್ಲಿ ಧರ್ಮ ಇರುತ್ತದೆ. ಸತ್ಯ ಇದ್ದಲ್ಲಿ ಧರ್ಮದ ಅಗತ್ಯ ಇರುವುದಿಲ್ಲ. ಅನ್ಯಾಯವನ್ನು ಪ್ರತಿಭಟಿಸುವ ಮನಸ್ಥಿತಿ ನಮ್ಮಲ್ಲಿ ಇಲ್ಲದಂತಾಗಿದೆ. ಶಿಕ್ಷಣ, ವೈದ್ಯಕೀಯ ವ್ಯವಸ್ಥೆ ಉಚಿತವಾಗಿ ಸಿಕ್ಕಿದರೆ ಯಾರೂ ಭೃಷ್ಟಾಚಾರಿಗಳು ಆಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಈ ದೇಶದಲ್ಲಿ ಶೇ 80ರಷ್ಟು ಒಳ್ಳೆಯವರಿದ್ದಾರೆ. ಆ 80ರಷ್ಟು ಜನರ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಕೆಪಿಜೆಪಿಯ ಒಬ್ಬೊಬ್ಬ ಅಭ್ಯರ್ಥಿಯು ಮುಖ್ಯಮಂತ್ರಿಯಂತೆ ಕೆಲಸ ಮಾಡಬೇಕು. ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಯುವ ಮೊದಲು ರಾಜ್ಯಗಳಲ್ಲಿ ವಿಧಾನ ಸಭೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಏಕ ಕಾಲಕ್ಕೆ ನಡೆಯಬೇಕು ಎಂದು ಅವರು ಹೇಳಿದರು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications