ಈಗಲೂ ಹೇಳ್ತೇನೆ, ದುರಹಂಕಾರ ಬಿಟ್ಟರೆ ಸಿದ್ದರಾಮಯ್ಯ ಉಳೀತಾರೆ: ಪೂಜಾರಿ
Recommended Video

ಮಂಗಳೂರು, ಮೇ 9: ಪತ್ರಿಕಾಗೋಷ್ಠಿಗಳಿಂದ ದೂರ ಉಳಿದಿದ್ದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೆಪಿಸಿಸಿ ಅಧ್ಯಕ್ಷ ಬಿ ಜನಾರ್ದನ ಪೂಜಾರಿ ಮತ್ತೆ ಮೈಕ್ ಎತ್ತಿಕೊಂಡಿದ್ದಾರೆ. ಕಾಂಗ್ರೆಸ್ ಕಚೇರಿಗಳಿಂದ ದೂರ ಉಳಿದಿದ್ದ ಪೂಜಾರಿ ಇಂದು ಕಾಂಗ್ರೆಸ್ ಕಚೇರಿಯಲ್ಲೇ ಮಾಧ್ಯಮಗೋಷ್ಠಿ ನಡೆಸಿದರು.
ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಜನಾರ್ದನ ಪೂಜಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಿವಿಮಾತು ಹೇಳಿದರು. "ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾನು ಸಲಹೆಗಳನ್ನು ಕೊಟ್ಟಿದ್ದು ನಿಜ. ದುರಹಂಕಾರಿ ಮನೋಭಾವ ಬದಲಿಸದಿದ್ದರೆ ಸೋಲುತ್ತಾರೆ ಎಂದು ಹೇಳಿದ್ದೆ. ಪಕ್ಷಕ್ಕಿಂತ ತಾನೇ ದೊಡ್ಡವನೆಂದು ನಡೆದುಕೊಂಡರೆ ಉಳಿಗಾಲವಿಲ್ಲ ಎಂದಿದ್ದೆ. ಈಗಲೂ ಹೇಳುತ್ತೇನೆ, ದುರಹಂಕಾರ ಬಿಟ್ಟರೆ ಸಿದ್ದರಾಮಯ್ಯ ಉಳೀತಾರೆ," ಎಂದು ಅಭಿಪ್ರಾಯಪಟ್ಟಿದ್ದಾರೆ.
"ದುರಹಂಕಾರ ಬಿಡದಿದ್ದರೆ ಸೋಲುತ್ತಾರೆ. ನಾನು ಸಲಹೆ ಕೊಟ್ಟಿದ್ದು ಕಾಂಗ್ರೆಸ್ ನ ಉಳಿವಿಗೆ ಮಾತ್ರ," ಎಂದು ಹೇಳಿದ ಪೂಜಾರಿ ಸಿದ್ದರಾಮಯ್ಯ ಆಡಳಿತವನ್ನು ಮನಸಾರೆ ಹೊಗಳಿದ್ದಾರೆ. "ಸಿದ್ದರಾಮಯ್ಯ ಆಡಳಿತವನ್ನು ಒಳ್ಳೆಯದಾಗಿ ನಡೆಸಿದ್ದಾರೆ. ಮುಂದೇ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗುತ್ತಾರೆ," ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಹರೀಶ್ ಕುಮಾರ್ ವಿರುದ್ಧ ಆಕ್ರೋಶ
ಜನಾರ್ದನ ಪೂಜಾರಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗ ಮಧ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಎದ್ದು ಹೊರ ನಡೆದರು. ಕಾಂಗ್ರೆಸ್ ನಾಯಕ ಪಿ ಚಿದಂಬರಂನ್ನು ಸ್ವಾಗತಿಸಲು ಅವರು ಹೊರಟು ಹೋಗಿದ್ದು ಪೂಜಾರಿ ಕಣ್ಣು ಕೆಂಪಗಾಗಿಸಿತು.
"ಹರೀಶ್ ಕುಮಾರ್ ಯಾಕೆ ಎದ್ದು ಹೋದ್ರು? ನನಗಿಂತ ಚಿದಂಬರಂ ಮುಖ್ಯ ಆಯ್ತಾ? ಚಿದಂಬರಂ ಚುನಾವಣಾ ಸಮಯದಲ್ಲಿ ಮಾತ್ರಾ ಬರ್ತಾರೆ. ಚಿದಂಬರಂ ಬಗ್ಗೆ ಬಿಜೆಪಿಯವರು ಹೇಳಿದ್ರೆ ಕಾಂಗ್ರೆಸ್ ಸರ್ವನಾಶ ಆಗುತ್ತದೆ. ಹರೀಶ್ ಕುಮಾರ್ ಯಾಕೆ ಇಲ್ಲಿ ಆಟ ಆಡೋಕೆ ಬಂದಿದ್ದಾ," ಎಂದು ತುಳುವಿನಲ್ಲೇ ಕಾಂಗ್ರೆಸ್ ಮುಖಂಡರ ಬಳಿ ಆಕ್ರೋಶ ಹೊರಹಾಕಿದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?










Click it and Unblock the Notifications