ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂದಿನ ಯಾವುದೇ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಶಕುಂತಲಾ ಶೆಟ್ಟಿ

|
Google Oneindia Kannada News

ಮಂಗಳೂರು, ಮೇ 17: ಇನ್ನು ಮುಂದೆ ಯಾವುದೇ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಹೀಗಂತ ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿಯ ಅಭ್ಯರ್ಥಿ ಸಂಜೀವ ಮಠಂದೂರು ಅವರ ಎದುರು ಸೋಲು ಅನುಭವಿಸಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ಪುತ್ತೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ನಾನು ಇದುವರೆಗೆ ನಾಲ್ಕು ಬಾರಿ ಸೋತಿದ್ದೇನೆ. ಆದ್ದರಿಂದ ಈ ಬಾರಿಯ ಸೋಲಿನಿಂದ ತಾನು ಕಂಗೆಟ್ಟಿಲ್ಲ ಎಂದು ಹೇಳಿದರು. ಆದರೆ ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ಮುಂದೆ ಯಾವ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದವರು, ಸೋತವರುದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದವರು, ಸೋತವರು

ಚುನಾವಣಾ ಸಂದರ್ಭದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಭೇಟಿ ನೀಡಿದ್ದೆ. ಮುಂದೆಯೂ ಭೇಟಿ ನೀಡುತ್ತೇನೆ ಎಂದು ಅವರು ಹೇಳಿದರು.

I will not contest elections anymore: Shakunthala Shetty

ಸದ್ಯದಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗುವುದೆಂದು ಹೇಳಿದ ಅವರು ಮುಂದಿನ ಬಾರಿ ವಿಧಾನಸಭೆ ಚುನಾವಣೆಗೆ ಹೊಸ ಸಮರ್ಥ ಅಭ್ಯರ್ಥಿಯನ್ನು ಹುಡುಕಿ ಒಗ್ಗಟ್ಟಿನಿಂದ ಗೆಲ್ಲಿಸುತ್ತೇವೆ ಎನ್ನುವ ವಿಶ್ವಾಸವಿದೆ ಎಂದು ಅವರು ಹೇಳಿದರು.

English summary
Karnataka assembly elections 2018: Speaking to congress workers in Puttur former MLA Shakuntala Shetty announced that She will not going to contest any election in future.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X