ನಾನು ಕೆಸರಿನ ಓಟಗಾರ, ಟ್ರ್ಯಾಕ್ನಲ್ಲಿ ಓಡುವುದಿಲ್ಲ: ಕಂಬಳ ವೀರ ಶ್ರೀನಿವಾಸ್ ಗೌಡ
Recommended Video
ಮಂಗಳೂರು, ಫೆಬ್ರವರಿ 17: ಕಂಬಳದಲ್ಲಿ 145 ಮೀಟರ್ ದೂರವನ್ನು ಕೇವಲ 13.61 ಸೆಕೆಂಡ್ ನಲ್ಲಿ ಓಡಿ ಕರ್ನಾಟಕದ ಉಸೇನ್ ಬೋಲ್ಟ್ ಎನಿಸಿಕೊಂಡಿರುವ ಶ್ರೀನಿವಾಸ್ ಗೌಡ ಅವರು ರನ್ನಿಂಗ್ ಟ್ರ್ಯಾಕ್ನಲ್ಲಿ ಓಡಲು ನಿರಾಕರಿಸಿದ್ದಾರೆ.
ಶ್ರೀನಿವಾಸ್ ಗೌಡ ಅವರ ಕಂಬಳದ ಓಟ ರಾಷ್ಟ್ರದಾದ್ಯಂತ ಸುದ್ದಿ ಮಾಡಿತ್ತು. ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜುಜು ಅವರೇ ಟ್ವೀಟ್ ಮಾಡಿ, 'ಶ್ರೀನಿವಾಸ್ ಗೌಡ ಅವರಿಗೆ ಸೂಕ್ತ ತರಬೇತಿ ನೀಡಿ, ಅವರನ್ನು ಓಟದ ಪರೀಕ್ಷೆಗೆ ಒಳಪಡಿಸಿ' ಎಂದು ಸೂಚನೆ ನೀಡಿದ್ದರು. ಕೇಂದ್ರ ಮಾಜಿ ಸಚಿವ ಶಶಿ ತರೂರ್ ಸಹ ಶ್ರೀನಿವಾಸ್ ಗೌಡ ಅವರ ಬಗ್ಗೆ ಟ್ವೀಟ್ ಮಾಡಿ ಅವರನ್ನು ಉಸೇನ್ ಬೋಲ್ಟ್ ಗೆ ಹೋಲಿಸಿದ್ದರು. ಆನಂದ್ ಮಹೀಂದ್ರಾ, ಶ್ರೀನಿವಾಸ್ ಗೌಡ ಅವರ ಪ್ರತಿಭೆಯನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದ್ದರು.
ಆದರೆ ಶ್ರೀನಿವಾಸ್ ಗೌಡ ಅವರು ತಾವು ರನ್ನಿಂಗ್ ಟ್ರ್ಯಾಕ್ನಲ್ಲಿ ಓಡುವುದಿಲ್ಲ, ಬದಲಿಗೆ ಕಂಬಳದಲ್ಲಿಯೇ ಓಡುತ್ತೇನೆ' ಎಂದು ಹೇಳಿದ್ದಾರೆ. 'ನಾನು ರನ್ನಿಂಗ್ ಟ್ರ್ಯಾಕ್ ಓಟಗಾರನಲ್ಲ, ಅದಕ್ಕೆ ಬೇಕಾಗಿರುವ ಕೌಶಲ್ಯ ಬೇರೆ ಕಂಬಳಕ್ಕೆ ಬೇಕಾಗಿರುವ ಕೌಶಲ್ಯ ಬೇರೆ' ಎಂದು ಹೇಳಿದ್ದಾರೆ.

'ಟ್ರ್ಯಾಕ್ ನಲ್ಲಿ ಓಡುವವರು ಕಂಬಳ ಓಡಲಾರರು'
'ರನ್ನಿಂಗ್ ಟ್ರ್ಯಾಕ್ನಲ್ಲಿ ಓಡುವವರು ಕಂಬಳ ಓಡಲಾರರು, ಅಂತೆಯೇ ಕಂಬಳ ಓಟಗಾರರು ರನ್ನಿಂಗ್ ಟ್ರ್ಯಾಕ್ನಲ್ಲಿ ಓಡಲಾರರು. ಟ್ರ್ಯಾಕ್ನಲ್ಲಿ ಮುಂಗಾಲು ಬಳಸಿ ಓಡಬೇಕು, ಕಂಬಳದಲ್ಲಿ ಹಿಮ್ಮಡಿ ಬಳಸಿ ಓಡಬೇಕು, ಎರಡೂ ಬೇರೆ, ಬೇರೆ, ನಾನು ರನ್ನಿಂಗ್ ಟ್ರ್ಯಾಕ್ನಲ್ಲಿ ಓಡುವುದಿಲ್ಲ, ಬದಲಿಗೆ ಕಂಬಳದಲ್ಲಿಯೇ ಸಾಧನೆ ಮಾಡುತ್ತೇನೆ' ಎಂದು ಶ್ರೀನಿವಾಸ್ ಗೌಡ ಹೇಳಿದ್ದಾರೆ.

ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿರುವ ಗೌಡ
'ಕಂಬಳ ವೀರ' ಶ್ರೀನಿವಾಸ್ ಗೌಡ ಅವರ ಸಾಧನೆ ಯಡಿಯೂರಪ್ಪ ಅವರನ್ನೂ ತಲುಪಿದ್ದು, ಮುಖ್ಯಮಂತ್ರಿಗಳ ಕಚೇರಿಯಿಂದ ಕಂಬಳ ವೀರನಿಗೆ ಬುಲಾವ್ ಬಂದಿದೆ. ಶ್ರೀನಿವಾಸ್ ಗೌಡ ಅವರು ಇಂದು ಅಥವಾ ನಾಳೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಗೌಡ ಅವರಿಗೆ ಸರ್ಕಾರಿ ಕೆಲಸದ ಭರವಸೆ ಸಿಗುವ ಸಾಧ್ಯತೆಯೂ ಇದೆ.

ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ಗೌಡ ಭೇಟಿ
ನಿನ್ನೆ ಕಾರ್ಮಿಕ ಇಲಾಖೆಯ ಕೆಲವು ಅಧಿಕಾರಿಗಳು ಶ್ರೀನಿವಾಸ್ ಗೌಡ ಅವರನ್ನು ಭೇಟಿ ಆಗಿದ್ದರು. ಕಾರ್ಮಿಕನೂ ಆಗಿರುವ ಶ್ರೀನಿವಾಸ್ ಗೌಡ ಅವರಿಗೆ ಇಲಾಖೆವತಿಯಿಂದ ಸೌಲಭ್ಯಗಳ ಮಾಹಿತಿ ನೀಡಿದರು. ಹಾಗೂ ಸೌಲಭ್ಯಗಳ ಬರವಸೆ ನೀಡಿದ್ದಾರೆ.

ಕಟ್ಟಡ ನಿರ್ಮಾಣ ಕಾರ್ಮಿಕರಾಗಿರುವ ಶ್ರೀನಿವಾಸ್ ಗೌಡ
ಕಂಬಳದ ಸಮಯದಲ್ಲಿ ಕಂಬಳ ಓಡುವ ಶ್ರೀನಿವಾಸ್ ಗೌಡ ಸಾಮಾನ್ಯ ದಿನಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತ್ತಾರೆ. ಕಂಬಳ ಅಕಾಡೆಮಿಯಲ್ಲಿ ತರಬೇತಿಯನ್ನೂ ಶ್ರೀನಿವಾಸ್ ಗೌಡ ಪಡೆದಿದ್ದಾರೆ. ಕರಾವಳಿಯ ಸ್ಟಾರ್ ಕಂಬಳ ಓಟಗಾರರಾಗಿರುವ ಅವರು ಈಗ ದೇಶದ ಸ್ಟಾರ್ ಜನಪದ ಕ್ರೀಡಾ ಸ್ಟಾರ್.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications