ಮಂಗಳೂರಿನಲ್ಲಿ ಯೋಗಿ ಸರಕಾರ ಮಾಡೆಲ್;ಅಕ್ರಮ ಗೋಮಾಂಸ ಆರೋಪಿ ಆಸ್ತಿ ಮುಟ್ಟುಗೋಲು
ಮಂಗಳೂರು, ಜುಲೈ 9: ನಗರದ ಅಡ್ಯಾರ್ನ ಕೋಟೆ ಎಂಬಲ್ಲಿ ಅಕ್ರಮ ಗೋಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪಿ ಬಾತೀಶ್ ಎಂಬಾತನ ಆಸ್ತಿ ಮುಟ್ಟುಗೋಲು ಹಾಕುವ ಬಗ್ಗೆ ಮಂಗಳೂರು ವಿಭಾಗ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ.
ಅಕ್ರಮ ಗೋ ಹತ್ಯೆ ಪ್ರಕರಣಗಳನ್ನು ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ 2020ರನ್ವಯ ಕ್ರಮ ಕೈಗೊಳ್ಳುವಂತೆ ಶಾಸಕ ಡಾ.ಭರತ್ ಶೆಟ್ಟಿ ವೈ. ಯವರ ಸೂಚನೆಯ ಮೇರೆಗೆ ಇದೀಗ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಕಾರ್ಯಪ್ರವೃತ್ತವಾಗಿದ್ದು, ಗೋಹತ್ಯೆ ಪ್ರಕರಣದಲ್ಲಿ ಮೊದಲ ಆಸ್ತಿ ಮುಟ್ಟುಗೋಲಿಗೆ ನೋಟಿಸ್ ಜಾರಿಗೊಳಿಸಿದೆ.
ಆರೋಪಿ ಬಾತಿಶ್ ಅಕ್ರಮವಾಗಿ ಜಾನುವಾರುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಜುಲೈ 3ರಂದು ಕಂಕನಾಡಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 95 ಕೆಜಿ ಜಾನುವಾರು ಮಾಂಸ, ತೂಕದ ಯಂತ್ರಗಳು, ಕತ್ತಿ, ಮರದ ದಿಮ್ಮಿ, ಪ್ಲಾಸ್ಟಿಕ್ ಸಾಮಾಗ್ರಿಗಳು, ಕಬ್ಬಿಣದ ಕೊಕ್ಕೆಗಳನ್ನು ವಶಪಡಿಸಿಕೊಂಡಿದ್ದರು. ಈತ ಎ.ಕೆ.ಖಾಲಿದ್ ಎಂಬವರ ಮನೆಗೆ ಹೊಂದಿಕೊಂಡಿರುವ ಶೆಡ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ. ದಾಳಿ ವೇಳೆ ಆರೋಪಿ ಪರಾರಿಯಾಗಿದ್ದ.

ಆರೋಪಿ ಬಾತೀಶ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿದೆ. ಜು.12 ರಂದು ಮಧ್ಯಾಹ್ನ 3ಗಂಟೆಗೆ ಸಹಾಯಕ ಆಯುಕ್ತರ ನ್ಯಾಯಲಯದಲ್ಲಿ ವಿಚಾರಣೆ ನಡೆಯಲಿದೆ. ಈತ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಕಡಿದು ಮಾರಾಟ ಮಾಡಿರುವ ಸ್ಥಳ, ಶೆಡ್, ಕತ್ತಿ, ತೂಕಯಂತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಸೊತ್ತು ಮೌಲ್ಯಮಾಪನ ಮಾಡಿ ವರದಿ ಸಲ್ಲಿಕೆಗೆ ಆದೇಶ ನೀಡಲಾಗಿದೆ.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಾಂ 8 (5) ಅಡಿಯಲ್ಲಿ ಕಾಯ್ದೆಯನ್ನು ಉಲ್ಲಂಘಿಸಿ ಗೋಹತ್ಯೆ, ಅಕ್ರಮ ಗೋಸಾಗಾಟ, ಅಕ್ರಮ ಕಸಾಯಿ ಖಾನೆಯನ್ನು ನಡೆಸುತ್ತಿದ್ದ ಆರೋಪಿಗಳ ಸ್ವತ್ತುಗಳನ್ನು, ಅಕ್ರಮ ಕಸಾಯಿ ಖಾನೆ ಆಗುತ್ತಿದ್ದ ಜಾಗ, ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಮುಟ್ಟುಗೋಲು ಹಾಕಲು ಸಂಪೂರ್ಣ ಗೋಹತ್ಯಾ ನಿಷೇಧ ಕಾಯ್ದೆಯಲ್ಲಿ ಅಧಿಕಾರ ನೀಡಲಾಗಿದೆ
ಅರ್ಕುಳ ಗ್ರಾಮದ ಅರ್ಕುಳ ಕೋಟೆಯ ನಿವಾಸಿ ಎ.ಕೆ. ಖಾಲಿದ್ ಮನೆಗೆ ತಾಗಿಕೊಂಡಿದ್ದ ಶೆಡ್ ನಲ್ಲಿ ನಡೆಸುತ್ತಿದ್ದ ಅಕ್ರಮ ಕಸಾಯಿಖಾನೆ ಮತ್ತು ಅಲ್ಲಿ ಗೋಹತ್ಯೆಗೆ ಬಳಸಿದ ಸ್ವತ್ತುಗಳನ್ನು ಮುಟ್ಟುಗೋಲು ಹಾಕುವ ಪ್ರಕ್ರಿಯೆಯನ್ನು ಪೊಲೀಸ್ ಅಧಿಕಾರಿಗಳು ಆರಂಭಿಸಿದ್ದಾರೆ. ಖಾಲಿದ್ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ನಮ್ಮ ರಾಜ್ಯ ಸರಕಾರ ಜಾರಿಗೆ ತಂದಿರುವ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಲ್ಲಿ ಅದರ ಉದ್ದೇಶ ಈಡೇರಿದಂತಾಗುತ್ತದೆ. ಆರೋಪಿಗಳ ಸ್ವತ್ತುಗಳನ್ನು ಮುಟ್ಟುಗೋಲು ಹಾಕಲು ಅಧಿಕಾರಿಗಳಿಗೆ ಕಾಯ್ದೆಯಲ್ಲಿಯೇ ಅಧಿಕಾರ ನೀಡಲಾಗಿದೆ. ಅದನ್ನು ಅಧಿಕಾರಿಗಳು ಖಡಕ್ಕಾಗಿ ಬಳಸುವ ಮೂಲಕ ಗೋಹಂತಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಗೋಹಂತಕರ ವಿರುದ್ಧ ನಿರ್ದಾಕ್ಷಿಣವಾಗಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದ್ದು, ಕಾಯ್ದೆಯಲ್ಲಿ ನೀಡಲಾಗಿರುವ ಅಧಿಕಾರವನ್ನು ಬಳಸಿ ಅರ್ಕುಳದ ಖಾಲಿದ್ ಸ್ವತ್ತನ್ನು ಮುಟ್ಟುಗೋಲು ಹಾಕುವ ಪ್ರಕ್ರಿಯೆ ಆರಂಭವಾಗಿದೆ ಅಂತಾ ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications