ದ.ಕ. ಲೋಕಸಭಾ ಕ್ಷೇತ್ರ:ಎಸ್ಡಿಪಿಐ ಅಭ್ಯರ್ಥಿಯಾಗಿ ಇಲ್ಯಾಸ್ ತುಂಬೆ ಆಯ್ಕೆ
ಮಂಗಳೂರು, ಮಾರ್ಚ್ 19:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಭಾರೀ ಚಟುವಟಿಕೆ ನಡೆಯುತ್ತಿದೆ. ಟಿಕೆಟ್ ಅಕಾಂಕ್ಷಿಗಳ ನಡುವೆ ಆರೋಪ ಪ್ರತ್ಯಾರೋಪ, ಲಾಭಿ ಪ್ರಕ್ರಿಯೆ ಬಿರುಸುಗೊಂಡಿದೆ.
ದಕ್ಷಿಣ ಕನ್ನಡದಲ್ಲಿ ಕೈ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಗಣನೀಯ ಹೆಚ್ಚಳ
ಈ ನಡುವೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲಿರುವ ತನ್ನ ಅಭ್ಯರ್ಥಿಯನ್ನು ಎಸ್ ಡಿಪಿಐ ಘೋಷಿಸಿದೆ. ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿಯಾಗಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಕಣಕ್ಕೆ ಇಳಿಯಲಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರ:ಜಯಪ್ರಕಾಶ್ ಪರ ಟ್ವೀಟ್, ಯಾರಿಗೆ ಸಿಗಲಿದೆ ಬಿಜೆಪಿ ಟಿಕೆಟ್?
ಎಸ್ ಡಿಪಿಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್, ದಕ್ಷಿಣ ಕನ್ನಡ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರ ಹೆಸರನ್ನು ಘೋಷಿಸಿದ್ದಾರೆ.
ಈ ದೇಶದ ಸ್ವಾತಂತ್ರ್ಯ, ಸಂವಿಧಾನವನ್ನು ಯಾವ ಬೆಲೆ ತೆತ್ತಾದರೂ ಉಳಿಸಿ, ಹಸಿವು ಮುಕ್ತ ದೇಶ, ಭಯ ಮುಕ್ತ ದೇಶವನ್ನಾಗಿ ಮಾಡಿ ಸಂವಿಧಾನದ ಆಶಯದಂತೆ ಭಾರತದ ಪುನರ್ ನಿರ್ಮಾಣವೇ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಗುರಿ ಎಂದು ಅಬ್ದುಲ್ ಮಜೀದ್ ತಿಳಿದ್ದಾರೆ.