ಮಂಗಳೂರು: ಐಕಳ ಕಂಬಳದಲ್ಲಿ ನೂತನ ಆವಿಷ್ಕಾರ, ಹೊಸ ಪ್ರಯೋಗಕ್ಕೆ ನಾಂದಿ
ಮಂಗಳೂರು, ಫೆಬ್ರವರಿ 05: ತುಳುನಾಡಿನ ಜನಪ್ರಿಯ ಜನಪದ ಕ್ರೀಡೆ ಕಂಬಳಕ್ಕೆ ದಿನದಿಂದ ದಿನಕ್ಕೆ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಂಬಳ ಕೋಣಗಳ ಸಂಖ್ಯೆಯೂ ಹೆಚ್ಚಾಗಿದೆ. ನಿಗದಿತ ಸಮಯಕ್ಕೆ ಕಂಬಳ ಮುಗಿಸಲು ಸಾಧ್ಯವಾಗದ ಕಾರಣ ಕಂಬಳ ಸಮಿತಿ ಈಗ ಹೊಸ ತಂತ್ರಜ್ಞಾನದ ಮೊರೆ ಹೋಗಿದೆ.
ಕರಾವಳಿಯ ಜಾನಪದ ಕ್ರೀಡೆ ಕಂಬಳದಲ್ಲಿ ಹೊಸ ತಂತ್ರಜ್ಞಾನದ ಆವಿಷ್ಕಾರ ಆಗುತ್ತಿದೆ. ಒಂದೆಡೆ ಕಂಬಳದ ಜನಪ್ರಿಯತೆಯೂ ಹೆಚ್ಚುತ್ತಿದೆ. ಜನಪ್ರಿಯತೆ ಹೆಚ್ಚಿದಂತೆ ಕೋಣಗಳ ಭಾಗವಹಿಸುವಿಕೆಯ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಆದರೆ ನಿಗದಿತ ಸಮಯದಲ್ಲಿ ಕಂಬಳ ಮುಕ್ತಾಯ ಮಾಡುದಕ್ಕೆ ಸಾಧ್ಯ ಆಗುತ್ತಿಲ್ಲ.

24 ಗಂಟೆಯಲ್ಲಿ ಮುಕ್ತಾಯ ಆಗುತ್ತಿದ್ದ ಆಧುನಿಕ ಕಂಬಳ 36/40 ಗಂಟೆ ಆದರ ಮುಕ್ತಾಯವಾಗದೇ, ಇರುವುದು ಜಿಲ್ಲಾ ಸಮಿತಿಗೆ ತಲೆ ನೋವಾಗಿತ್ತು. ಹೀಗಾಗಿ ನಿಗದಿತ ಸಮಯದಲ್ಲಿ ಕಂಬಳ ಮುಕ್ತಾಯಗೊಳಿಸಲು ಹಾಗೂ ನಿಖರ ಫಲಿತಾಂಶಕ್ಕಾಗಿ ಹೊಸ ತಂತ್ರಜ್ಞಾನಗ ಆವಿಷ್ಕಾರ ಮಾಡಲಾಗಿದೆ.
ಈ ಅವಿಷ್ಕಾರದ ಮೊದಲ ಪ್ರಯೋಗವನ್ನು ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದ ಐಕಳ ಕಂಬಳದಲ್ಲಿ ಮಾಡಲಾಗಿದೆ. ಐಕಳಬಾವ ಕಾಂತಬಾರೆ ಬೂದಬಾರೆ ಕಂಬಳದಲ್ಲಿ ಸ್ವಯಂಚಾಲಿತ ಸಮಯ ಗೇಟ್ ವ್ಯವಸ್ಥೆ ಹಾಗೂ ಫೋಟೊ ಫಿನಿಶ್ ಫಲಿತಾಂಶದ ತಂತ್ರಜ್ಞಾನಕ್ಕೆ ಚಾಲನೆ ನೀಡಲಾಗಿದೆ.

ವಿವಿಧ ವಿಭಾಗದ ಕೋಣಗಳಿಗೆ ಬೇರೆ ಬೇರೆ ಸಮಯ ನಿಗದಿ ಮಾಡಲಾಗಿದ್ದು, ನಿಗದಿತ ಸಮಯದಲ್ಲಿ ಒಂದು ವೇಳೆ ಕೋಣ ಬಿಡದಿದ್ದರೆ ನೆಟ್ ಮಾದರಿಯ ಗೇಟ್ ಬೀಳುತ್ತದೆ. ಇದಾದ ನೂರು ಸೆಕೆಂಡ್ ನಿಂದ ಇಳಿಕೆ ಕ್ರಮದಲ್ಲಿ 10 ಸೆಕೆಂಡ್ ವರೆಗೆ ರೆಡ್ ಲೈಟ್, ಹತ್ತು ಸೆಕೆಂಡ್ನಿಂದ ಒಂದು ಸೆಕೆಂಡ್ ವರೆಗೆ ಹಳದಿ ಲೈಟ್, ನಂತರ ಝಿರೋ ಸೆಕೆಂಡ್ ಆದಾಗ ಹಸಿರು ಲೈಟ್ ಉರಿಯಲಿದೆ. ಈ ಅವಧಿಯಲ್ಲಿ ಕೋಣವನ್ನು ಬಿಡಬೇಕು. ಇಲ್ಲದಿದ್ದರೆ ಆ ಕೋಣವನ್ನು ಸ್ಪರ್ಧೆಯಿಂದ ಹೊರಗಿಡಲಾಗುತ್ತದೆ.
ಮತ್ತೊಂದು ಹೊಸ ತಂತ್ರಜ್ಞಾನ ಫೋಟೋ ಫಿನಿಶಿಂಗ್ ಕಂಬಳದಲ್ಲಿ ಅಳವಡಿಸಲಾಗಿದೆ. ಕೋಣಗಳ ಮುಖ ಸ್ಕ್ಯಾನ್ ಮೇಲೆ ನಿಖರ ಫಲಿತಾಂಶವನ್ನು ನೀಡಲಿದೆ. ಐಕಳಬಾವ ಕಂಬಳದಲ್ಲಿ ಹೊಸ ತಂತ್ರಜ್ಞಾನ ಪ್ರಯೋಗವಾಗಿದ್ದು, ಇದರ ಸಾಧಕ ಬಾಧಕಗಳನ್ನು ನೋಡಿಕೊಂಡು ಮುಂದಿನ ಕಂಬಳದಲ್ಲಿ ಬಳಸಲಾಗುತ್ತದೆ. ಹೊಸ ತಂತ್ರಜ್ಞಾನ ಬಳಕೆ ಆದ ನಂತರವಾದರೂ ಕಂಬಳ ನಿಗದಿತ ಸಮಯಕ್ಕೆ ಮುಕ್ತಾಯಗೊಳ್ಳುತ್ತಾ ಕಾದು ನೋಡಬೇಕಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications