ಚಿತ್ರಗಳು : ಧರ್ಮಸ್ಥಳದಲ್ಲಿ ಪ್ರಧಾನಿ ನರೇಂದ್ರ ಮೋದಿ
ದಕ್ಷಿಣ ಕನ್ನಡ, ಅಕ್ಟೋಬರ್ 29 : 'ಪರ್ ಡ್ರಾಪ್ ಮೋರ್ ಕ್ರಾಪ್ ಪರಿಕಲ್ಪನೆಯಡಿ ರೈತರು ಪ್ರತಿ ನೀರಿನ ಹನಿಯ ಬಳಕೆಯಲ್ಲೂ ದೃಷ್ಟಿಯಲ್ಲಿಟ್ಟು ಕೃಷಿ ಮಾಡುವತ್ತ ದಾಪುಗಾಲಿಡಬೇಕು' ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.
In Pics : ಧರ್ಮಸ್ಥಳದಲ್ಲಿ ನರೇಂದ್ರ ಮೋದಿ
ಭಾನುವಾರ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ, ಉಜಿರೆಯ ರತ್ನಾಕರ ವರ್ಮ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಫಲಾನುಭವಿಗಳಿಗೆ ರೂಪೇ ಕಾರ್ಡ್ ವಿತರಿಸಿ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದರು.
ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು. 'ಆದಿ ಶಂಕರಾಚಾರ್ಯರು ಸ್ಥಾಪಿಸಿದ ಕೇದಾರನಾಥಕ್ಕೆ ಕೆಲವು ದಿನಗಳ ಹಿಂದೆ ಭೇಟಿ ನೀಡಿದ್ದೆ. ಈ ಬಾರಿ ದಕ್ಷಿಣದ ಮಂಜುನಾಥ ಸ್ವಾಮಿಯ ದರ್ಶನ ಪಡೆಯುವ ಸೌಭಾಗ್ಯ ನನಗೆ ದೊರಕಿದ್ದು, ಸಂತಸ ತಂದಿದೆ' ಎಂದರು.

'ನಾನು ತುಂಬಾ ತುಂಬಾ ಸಾಮಾನ್ಯ'
'ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಕಾರ್ಯವನ್ನು ಶ್ಲಾಘಿಸಿದ ನರೇಂದ್ರ ಮೋದಿ ಕಳೆದ 50 ವರ್ಷಗಳಿಂದ ಡಾ.ವೀರೇಂದ್ರ ಹೆಗ್ಗಡೆಯವರು ಮಾಡಿಕೊಂಡು ಬಂದಂತಹ ಕಾರ್ಯ ಅವಿಸ್ಮರಣೀಯ ಹೆಗಡೆಯವರಂಥ ವ್ಯಕ್ತಿತ್ವದ ಮುಂದೆ ನಾನು ತುಂಬಾ ತುಂಬಾ ಸಾಮಾನ್ಯ' ಎಂದು ಹೇಳಿದರು.

'ಜನಪರ ಕಾರ್ಯಕ್ರಮ ಅನುಷ್ಠಾನ'
ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ ಡಿ ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕೌಶಲ್ಯಾಭಿವೃದ್ಧಿ ಕಾರ್ಯಗಳು ದೇಶಕ್ಕೆ ಮಾದರಿಯಾಗಿವೆ. ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ರೀತಿಯನ್ನು ಹೆಗಡೆ ಅವರಿಂದ ಕಲಿಯಬೇಕು' ಎಂದು ಅವರು ಅಭಿಪ್ರಾಯಪಟ್ಟರು

‘ಹೆಚ್ಚಿನ ಚರ್ಚೆಗಳಾಗಿಲ್ಲ'
'ಕೌಶಲ್ಯ ಅಭಿವೃದ್ಧಿ ಕೇವಲ ಜೀವನ ನಿರ್ವಹಣೆಗೆ ಮಾತ್ರವಲ್ಲದೆ ಅದು ದೇಶದ ಅಭಿವೃದ್ಧಿಯ ದಾರಿ ಎಂದು ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಇಂತಹ ಕಾರ್ಯಗಳು ಈಗಾಗಲೇ ನಡೆಯುತ್ತಿವೆ. ತೀರ್ಥ ಕ್ಷೇತ್ರಗಳು ಪುಣ್ಯ ಕ್ಷೇತ್ರಗಳು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂಬ ಕುರಿತು ಇಂದಿಗೂ ಹೆಚ್ಚಿನ ಚರ್ಚೆಗಳಾಗಿಲ್ಲ' ಎಂದರು.

'ಒಂದು ಸಂಸ್ಥೆ ಹೇಗೆ ಕೆಲಸ ಮಾಡಬೇಕು'
'ಎಂಬಿಎ , ಇಂಜಿನಿಯರಿಂಗ್ ಹಾಗೂ ಕಾಮರ್ಸ್ ಕಾಲೇಜುಗಳ ಶ್ರೇಣಿಗಳನ್ನು ನಾವೀಗಾಗಲೇ ಕಾಣುತ್ತಿದ್ದೇವೆ. ಸಾಮಾಜಿಕ ಕಲ್ಯಾಣಕ್ಕಾಗಿ ಒಂದು ಸಂಸ್ಥೆ ಯಾವ ರೀತಿಯಲ್ಲಿ ಕೆಲಸ ಮಾಡಬೇಕು ಎಂಬುದನ್ನು ಧರ್ಮಸ್ಥಳ ಮಾಡಿ ತೋರಿಸುತ್ತಾ ಬಂದಿದೆ' ಎಂದರು.

'ಕ್ಯಾಶ್ ಲೆಸ್ ಮಾಡುವತ್ತ ದಾಪುಗಾಲಿಟ್ಟಿದ್ದೇವೆ'
'21 ನೇ ಶತಮಾನದಲ್ಲಿ ಕೌಶಲ್ಯ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಚರ್ಚೆ ನಡೆಯುತ್ತಿದೆ ಇಡೀ ಭಾರತವನ್ನು ಕ್ಯಾಶ್ ಲೆಸ್ ಮಾಡುವತ್ತ ದಾಪುಗಾಲಿಟ್ಟಿದ್ದೆವೆ. ಡಿಜಿಟಲ್ ಇಂಡಿಯಾ ಯೋಜನೆ ಘೋಷಣೆಯಾದಾಗ ಕ್ಯಾಶ್ ಲೆಸ್ ವ್ಯವಸ್ಥೆಯನ್ನು ಹಲವರು ಪ್ರಶ್ನಿಸಿದ್ದರು.ದೇಶದ ಮಹಾನ್ ಚಿಂತಕರು, ಆರ್ಥಿಕ ತಜ್ಞರು ಎಂದು ಗುರುತಿಸಿಕೊಳ್ಳುವವರು ಕ್ಯಾಶ್ ಲೆಸ್ ವ್ಯವಸ್ಥೆಯ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು. ಈ ಟೀಕೆಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಗ್ರಾಮೀಣ ಪ್ರದೇಶದ ಮಹಿಳೆಯರೇ ಉತ್ತರ ನೀಡಿದ್ದಾರೆ' ಎಂದು ಅವರು ಹೇಳಿದರು .

'ಹಣದ ರೂಪ ಬದಲಾಗುತ್ತಿದೆ'
'ಶತಮಾನಗಳಿಂದ ಹಣದ ರೂಪ ಬದಲಾಗುತ್ತಿದೆ. ಕಲ್ಲಿನ ನಾಣ್ಯದಿಂದ ಆರಂಭಗೊಂಡು ಬಂಗಾರ, ಕಂಚಿನ ನಾಣ್ಯ ಗಳಿಂದ ಹಿಡಿದು ಕಾಗದದ ನೋಟುಗಳ ವರೆಗೆ ನಗದು ವ್ಯವಹಾರ ಬದಲಾವಣೆ ಕಂಡಿದೆ. ಆದರೆ, ಈಗ ಡಿಜಿಟಲ್ ಹಣದ ಯುಗ ಆರಂಭವಾಗಿದೆ' ಎಂದು ಮೋದಿ ಹೇಳಿದರು.

'ಪರ್ ಡ್ರಾಪ್ ಮೋರ್ ಕ್ರಾಪ್'
'ಪರಿಸರ ರಕ್ಷಣೆ ಹಾಗೂ ನೀರಿನ ಸದ್ಬಳಕೆ ಬಗ್ಗೆ ಸಂಕಲ್ಪ ಮಾಡಬೇಕಾದ ಅನಿವಾರ್ಯತೆ ಇದೆ. ಪರ್ ಡ್ರಾಪ್ ಮೋರ್ ಕ್ರಾಪ್ ಪರಿಕಲ್ಪನೆಯಡಿ ರೈತರು ಪ್ರತಿ ನೀರಿನ ಹನಿಯ ಬಳಕೆಯಲ್ಲೂ ದೃಷ್ಟಿಯಲ್ಲಿಟ್ಟು ಕೃಷಿ ಮಾಡುವತ್ತ ದಾಪುಗಾಲಿಡಬೇಕು' ಎಂದು ಮೋದಿ ಕರೆ ನೀಡಿದರು.

ಮೀನುಗಾರರಿಗೆ ಸಲಹೆ
'ಕರಾವಳಿಯ ಮೀನುಗಾರರಿಗೆ ಸಿ ವಿಡ್ ಬೆಳೆಸುವ ಕುರಿತು ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಮೀನುಗಾರಿಕಾ ರಜೆ ಸಂದರ್ಭದಲ್ಲಿ ಸಮುದ್ರ ತಟದಲ್ಲಿ ಈ ಸಿ ವೀಡ್ ಗಳನ್ನು ಬೆಳೆದು ಮೀನುಗಾರರು ಆದಾಯ ಗಳಿಸಬಹುದು ಎಂದು ಅವರು ಹೇಳಿದರು. ಈ ಸಸ್ಯಗಳನ್ನು ಕೃಷಿ ಸಂದರ್ಭದಲ್ಲೂ ಮಣ್ಣಿನಲ್ಲಿ ಬೆರೆಸುವುದರಿಂದ ಕೃಷಿಯ ಉತ್ಪಾದನೆ ಕೂಡ ಹೆಚ್ಚುತ್ತದೆ' ಎಂದು ಅವರು ಹೇಳಿದರು

'ಯೂರಿಯಾ ಬಳಕೆ ಕಡಿಮೆ'
'ಪ್ರಕೃತಿಯನ್ನು ಉಳಿಸುವ ಕಾರ್ಯ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಲೇ ಆರಂಭಗೊಳ್ಳಬೇಕು ಎಂದು ಹೇಳಿದ ಪ್ರಧಾನಿ ಮೋದಿ 2022 ರ ಹೊತ್ತಿಗೆ ಕೃಷಿಯಲ್ಲಿ ಯೂರಿಯಾ ಬಳಕೆ ಶೇ 50 ರಷ್ಟು ತಗ್ಗಿಸುವ ನಿಟ್ಟಿನಲ್ಲಿ ಕೃಷಿಕರು ಸಂಕಲ್ಪ ತೊಡಬೇಕು' ಎಂದು ಅವರು ಕರೆ ನೀಡಿದರು .
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications