ಚಿತ್ರಗಳು : 'ಓಖಿ' ಚಂಡಮಾರುತದಿಂದ ಮಂಗಳೂರಲ್ಲಿ ಕಡಲ್ಕೊರೆತ
ಮಂಗಳೂರು, ಡಿಸೆಂಬರ್ 03 : ಓಖಿ ಚಂಡಮಾರುತದ ಪ್ರಭಾವ ರಾಜ್ಯದ ಕರಾವಳಿ ತೀರಕ್ಕೂ ತಟ್ಟಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಲಿ ಅಬ್ಬರ ಜೋರಾಗಿದೆ. ಕಡಲಕೊರೆತ ಆರಂಭವಾಗಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕಡಪ್ಪರ, ಉಪ್ಪಳ ಬಳಿಯ ಕೊಯಿಪಾಡಿ ಎಂಬಲ್ಲಿ 6 ಮನೆಗಳು ಸಮುದ್ರದ ಪಾಲಾಗಿವೆ. ಅಲ್ಲಿದ್ದ ನಿವಾಸಿಗಳನ್ನು ಮೊದಲೇ ಸ್ಥಳಾಂತರ ಮಾಡಿದ್ದರಿಂದ ಜೀವ ಹಾನಿ ತಪ್ಪಿದೆ.
In Pics:ಓಖಿ ಸೋಕಿದ ಊರೆಲ್ಲ ನೀರೋ ನೀರು, ನೆಲ ನೋಡಿದ ಮರಗಳು
ಮಂಜೇಶ್ವರದ ಕಡಲ ಕಿನಾರೆಯಲ್ಲಿ ಮನೆಯೊಂದು ನೋಡ ನೋಡುತ್ತಿದ್ದಂತೆಯೇ ಸಮುದ್ರದ ಪಾಲಾಯಿತು. ಶನಿವಾರ ಸಂಜೆಯಿಂದಲೇ ಕಡಲ್ಕೊರೆತ ಆರಂಭವಾಗಿದೆ. ಇದರಿಂದಾಗಿ ಮನೆಗಳಿಗೆ ಹಾನಿಯಾಗಿದೆ.
ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮಂಗಳೂರು ಹೊರವಲಯದ ಉಳ್ಳಾಲದ ತೀರ ಪ್ರದೇಶದಲ್ಲಿ ಕಡಲ ಅಬ್ಬರ ಹೆಚ್ಚಿದ್ದು ಸಮುದ್ರದಲ್ಲಿ ಆಳೆತ್ತರದ ಕಲೆಗಳು ಏಳುತ್ತಿದೆ. ಕಳೆದ ರಾತ್ರಿ ಉಳ್ಳಾಲದ ರೆಸಾರ್ಟ್ ಗೂ ನೀರು ನುಗ್ಗಿದೆ.

ಅಕ್ಕ-ಪಕ್ಕದ ರಾಜ್ಯಗಳಲ್ಲಿ ಮಳೆ
'ಓಖಿ' ಚಂಡಮಾರುತದ ಅಬ್ಬರದಿಂದಾಗಿ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.

ಮಂಗಳೂರಿನಲ್ಲಿಯೂ ಪ್ರಭಾವ
'ಓಖಿ' ಚಂಡಮಾರುತದ ಪ್ರಭಾವ ಮಂಗಳೂರಿನ ಕಡಲ ತೀರದಲ್ಲಿ ಕಂಡುಬರುತ್ತಿದೆ. ಶನಿವಾರ ಸಂಜೆಯಿಂದ ಕಡಲ್ಕೊರೆತ ಆರಂಭವಾಗಿದೆ.

ಆಳೆತ್ತರದ ಆಲೆಗಳ ಆರ್ಭಟ
ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಲಿ ಅಬ್ಬರ ಜೋರಾಗಿದೆ. ಕಡಲಕೊರೆತ ಆರಂಭವಾಗಿದೆ. ಆಳೆತ್ತರದ ಅಲೆಗಳು ಆರ್ಭಟ ನಡೆಸುತ್ತಿವೆ.

ಸ್ಥಳೀಯರ ದೂರು
ಮಂಜೇಶ್ವರದಲ್ಲಿ ಮೀನುಗಾರಿಕಾ ಬಂದರು ನಿರ್ಮಾಣ ಆಗುತ್ತಿದ್ದು ಬ್ರೇಕ್ ವಾಟರ್ ಅವೈಜ್ಞಾನಿಕವಾಗಿ ನಿರ್ಮಿಸಿದ್ದರಿಂದ ಕೆಲವು ಪ್ರದೇಶಗಳಲ್ಲಿ ಸಮುದ್ರದ ತೀವ್ರತೆ ಹೆಚ್ಚಿದ್ದಾಗಿ ಸ್ಥಳೀಯರು ದೂರಿದ್ದಾರೆ. ಇನ್ನು ಮಂಜೇಶ್ವರದ ಕಡಪ್ಪರದಲ್ಲಿ ಮನೆಯೊಂದು ನೋಡ ನೋಡುತ್ತಲೇ ಸಮುದ್ರಕ್ಕೆ ಬಿದ್ದು ನೀರುಪಾಲಾಗಿದೆ.

ಉಳ್ಳಾಲದಲ್ಲೂ ಅಬ್ಬರ
ಉಳ್ಳಾಲದ ಕಡಲ ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ. ಖಾಸಗಿ ರೆಸಾರ್ಟ್ ಗೋಡೆಯೊಂದು ಅಲೆಗಳ ಹೊಡೆತಕ್ಕೆ ಸಮುದ್ರದ ಪಾಲಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications