ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಕ್ರೀದ್‌ ಪ್ರಯುಕ್ತ ಉಡುಪಿ, ದಕ್ಷಿಣ ಕನ್ನಡದಲ್ಲಿ ಸೆ. 1 ರಂದು ರಜೆ

By Sachhidananda Acharya
|
Google Oneindia Kannada News

Recommended Video

Bakrid festival : Holiday on September 1st in Udupi

ಮಂಗಳೂರು, ಆಗಸ್ಟ್ 31: ಮುಸ್ಲಿಂ ಸಮುದಾಯದ ಬಕ್ರೀದ್‌ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1ರಂದು (ಶುಕ್ರವಾರ) ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರಕಾರವೇ ಈ ಅಧಿಕೃತ ಆದೇಶ ಹೊರಡಿಸಿದೆ.

ಉಡುಪಿ, ದಕ್ಷಿಣ ಕನ್ನಡದಲ್ಲಿ ಸೆ.1ರಂದು ಬಕ್ರೀದ್ ಆಚರಣೆಉಡುಪಿ, ದಕ್ಷಿಣ ಕನ್ನಡದಲ್ಲಿ ಸೆ.1ರಂದು ಬಕ್ರೀದ್ ಆಚರಣೆ

ಹೀಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೆಪ್ಟೆಂಬರ್ 1ರಂದು ಶಾಲೆ, ಕಾಲೇಜು ಮತ್ತು ಸರಕಾರಿ ಕಚೇರಿಗಳಿಗೆ ರಜೆ ಇರಲಿದೆ.

In Udupi and Dakshina Kannada Bakrid Holiday on September 1

ಮುಸ್ಲಿಂ ಬಾಂಧವರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ ಚಂದ್ರ ದರ್ಶನ ಒಂದು ದಿವಸ ಮುಂಚಿತವಾಗಿ ಆಗಿರುವುದರಿಂದ ಜಿಲ್ಲೆಗಳಲ್ಲಿ ಮಾತ್ರ ಒಂದು ದಿವಸ ಮುಂಚಿತವಾಗಿ ಅಂದರೆ ಸೆಪ್ಟೆಂಬರ್ 1ರಂದು ಬಕ್ರೀದ್ ಆಚರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ರಜೆಯಲ್ಲೂ ಸರಕಾರ ಮಾರ್ಪಾಟು ಮಾಡಿದೆ.

ಇನ್ನು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಪೂರ್ವನಿಗದಿಯಂತೆ ಸೆಪ್ಟೆಂಬರ್ 2 ರಂದು ಸಾರ್ವತ್ರಿಕ ರಜೆ ಇರಲಿದೆ.

English summary
The general holiday was announced on September 1 (Friday) in Dakshina Kannada and Udupi districts on the occasion of Bakrid festival. This official order has been issued by the Karnataka State Government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X