ವೈವಾಹಿಕ ಜೀವನಕ್ಕೆ ಕಾಲಿಟ್ಟ ಹಾಕಿ ಆಟಗಾರ ಕೊಡಗಿನ ಸುನಿಲ್
ಮಂಗಳೂರು, ಮಾರ್ಚ್ 05: ಭಾರತ ಹಾಕಿ ತಂಡದ ಫಾರ್ವರ್ಡ್ ಪ್ಲೇಯರ್, ಅರ್ಜುನ ಪ್ರಶಸ್ತಿ ವಿಜೇತ ಕೊಡಗಿನ ಎಸ್.ವಿ ಸುನೀಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸುನೀಲ್, ಮಂಗಳೂರು ಮೂಲದ ನಿಶಾರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ನಿಶಾ ಮಂಗಳೂರಿನ ಕೊಂಚಾಡಿ ಗ್ರಾಮದ ತಾರನಾಥ-ಸುನಿತಾ ಅವರ ದಂಪತಿಯ ಪುತ್ರಿಯಾಗಿದ್ದು, ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದಾರೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕಲ್ಯಾಣ ಮಂಟಪದಲ್ಲಿ ವಿಶ್ವಕರ್ಮ ಸಮುದಾಯದ ಪದ್ಧತಿಯಂತೆ ಮದುವೆ ಕಾರ್ಯಕ್ರಮ ನಡೆಸಲಾಯಿತು.

ಆಪ್ತರಿಗೆಷ್ಟೆ ಆಮಂತ್ರಣವಿದ್ದ ಕಾರಣ ಸೀಮಿತ ಸಂಖ್ಯೆಯಲ್ಲಿ ಬಂಧು-ಮಿತ್ರರು, ಸ್ನೇಹಿತರು ಹಾಗೂ ಹಾಕಿ ತಂಡದ ಐವರು ಮಿತ್ರರು ಪಾಲ್ಗೊಂಡಿದ್ದರು. ಮಂಗಳೂರಿನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಸ್ನೇಹಿತರು ಸುನೀಲ್ ಅವರಿಗೆ ಅಚ್ಚರಿ ನೀಡಿ ಸ್ಟೇಜ್ ನಲ್ಲಿ ಸ್ಟೆಪ್ ಹಾಕಿ ಸಂಭ್ರಮಿಸಿದ್ದಾರೆ.

ಸೋಮವಾರ ಮಡಿಕೇರಿಯ ಕಾವೇರಿ ಹಾಲ್ನಲ್ಲಿ ಆರತಕ್ಷತೆ ನಡೆಯಲಿದ್ದು, ಸ್ನೇಹಿತರು, ಭಾರತ ಹಾಕಿ ತಂಡದ ಆಟಗಾರರು, ಮಾಜಿ ಆಟಗಾರರಾದ ಅರ್ಜುನ್ ಹಾಲಪ್ಪ, ಧನರಾಜ್ ಪಿಳೈ, ಎ.ಬಿ.ಸುಬ್ಬಯ್ಯ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಆಟಗಾರರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಆರತಕ್ಷತೆಗೆ ಸುಮಾರು ಎರಡೂವರೆ ಸಾವಿರ ಮಂದಿಗೆ ಆಮಂತ್ರಣ ನೀಡಲಾಗಿದ್ದು ಈ ಸಂಬಂಧ ಎಲ್ಲ ಸಿದ್ಧತೆ ಮಾಡಲಾಗಿದೆ.

-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications