'ಕೇಂದ್ರದ ನೂತನ ಮಸೂದೆಯಿಂದ ಕೈಗಾರಿಕೆಗಳಿಗೆ ತೊಂದರೆ'
ಮಂಗಳೂರು, ಡಿಸೆಂಬರ್ 11: ಕೇಂದ್ರ ಸರ್ಕಾರವು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ವ್ಯಾಖ್ಯಾನ ಬದಲಾವಣೆ ಮಾಡಿ ಮಸೂದೆ ಜಾರಿಗೊಳಿಸಲು ಹೊರಟಿದ್ದು, ಇದರಿಂದ ದೇಶದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮೇಲೆ ಭಾರಿ ಹೊಡೆತ ಬೀಳಲಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ದ ಅಧ್ಯಕ್ಷ ಬಸವರಾಜ ಎಸ್. ಜವಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ರೀತಿ ವ್ಯಾಖ್ಯಾನವನ್ನು ಸಂಪೂರ್ಣ ಬದಲು ಮಾಡುವುದರಿಂದ ದೊಡ್ಡ ಕೈಗಾರಿಕೆಗಳು ಬಹುದೊಡ್ಡ ಸಂಖ್ಯೆಯಲ್ಲಿ ಈ ಕಾಯ್ದೆಯ ಅಡಿಗೆ ಬಂದು ಸಣ್ಣ ಕೈಗಾರಿಕೆಗಳಿಗೆ ಸಿಗುವ ಸವಲತ್ತುಗಳನ್ನು ಕಸಿದುಕೊಳ್ಳಲಿವೆ. ಸಣ್ಣ ಮತ್ತು ಅತಿ ಸಣ್ಣ ಪ್ರಮಾಣದ ಕೈಗಾರಿಕೆಗಳು ಅಳಿವಿನಂಚಿಗೆ ಸಾಗಲಿವೆ.
ಇಂತಹ ಹೊಸ ಕರಡು ಮಸೂದೆ ಡಿಸೆಂಬರ್ 11 ರಿಂದ ನಡೆಯುವ ಲೋಕಸಭಾ ಅಧಿವೇಶನದಲ್ಲಿ ಚರ್ಚೆಗೆ ಬರಲಿದ್ದು, ಅದಕ್ಕಿಂತ ಮೊದಲೇ ಕೇಂದ್ರ ಎಂಎಸ್ಎಂಇ ಸಚಿವರನ್ನು ಭೇಟಿಯಾಗಿ ಹೊಸ ವ್ಯಾಖ್ಯಾನವನ್ನು ಕೈಬಿಡುವಂತೆ ಮನವಿ ಸಲ್ಲಿಸಲಿದ್ದೇವೆ ಎಂದು ಜವಳಿ ಹೇಳಿದರು.

ದೇಶದಲ್ಲಿ ಇದುವರೆಗೆ ಘಟಕ ಮತ್ತು ಯಂತ್ರೋಪಕರಣಗಳಲ್ಲಿ ಬಂಡವಾಳ ಹೂಡಿಕೆಯ ಆಧಾರದ ಮೇಲೆ ಎಂಎಸ್ಎಂಇಗಳನ್ನು ವ್ಯಾಖ್ಯಾನಿಸಲಾಗುತ್ತಿತ್ತು. ಆದರೆ ಈಗ ಹೊಸ ವ್ಯಾಖ್ಯಾನ ನಡೆದಿರುವುದು ಕೈಗಾರಿಕೆಗಳ ವಹಿವಾಟು ಆಧಾರದ ಮೇಲೆ. ಹೀಗೆ ಮಾಡುವುದರಿಂದ ಶೇ.70ರಷ್ಟು ಉದ್ಯೋಗ ಸೃಷ್ಟಿ ಮಾಡುತ್ತಿರುವ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಸಮಸ್ಯೆಯಾಗಲಿದೆ. ಉದ್ಯೋಗ ಸೃಷ್ಟಿಗೂ ದೊಡ್ಡ ಹೊಡೆತ ಬೀಳಲಿದೆ ಎಂದು ಹೇಳಿದರು.
ಇದು ನಿಜಕ್ಕೂ ತೀವ್ರ ಆತಂಕಕಾರಿ ಬದಲಾವಣೆ ಹಾಗೂ ಅನೇಕ ಸಣ್ಣ ತಯಾರಿಕಾ ಘಟಕಗಳ ಅನಿರೀಕ್ಷಿತ ಗಂಭೀರ ಪರಿಣಾಮಗಳಿಗೆ ಎಡೆ ಮಾಡಿಕೊಡಬಹುದು. ಹೊಸ ಅರ್ಥ ವಿವರಣೆಯು ದೊಡ್ಡ ಸಂಖ್ಯೆಯ ಘಟಕಗಳು ಮತ್ತು ವ್ಯಾಪಾರಿ ಸಂಸ್ಥೆಗಳು ಎಂಎಸ್ಎಂಇ ವ್ಯಾಪ್ತಿಯೊಳಗೆ ಸೇರಲು ಅವಕಾಶ ದೊರೆಯುತ್ತದೆ. ಇದರಿಂದ ಎಂಎಸ್ಎಂಇಗಳಿಗೆ ದೊರೆಯಬೇಕಾದ ಸೌಲಭ್ಯಗಳು ನಷ್ಟವಾಗುತ್ತವೆ ಎಂದು ಬಸವರಾಜ ಎಸ್. ಜವಳಿ ತಿಳಿಸಿದರು.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕಾಯ್ದೆ 2006 ರ ಪ್ರಕಾರ, 25ಲಕ್ಷ ರೂಪಾಯಿವರೆಗಿನ ಕೈಗಾರಿಕೆಗಳನ್ನು ಸೂಕ್ಷ್ಮ ಕೈಗಾರಿಕೆಗಳನ್ನಾಗಿಯೂ, 25 ಲಕ್ಷ ರೂ .ಗಿಂತ 5 ಕೋಟಿ ರೂ.ವರೆಗೆ ಸಣ್ಣ ಕೈಗಾರಿಕೆಗಳೆಂದೂ, 5 ಕೋಟಿ ರೂಪಾಯಿಗಳಿಂದ 10 ಕೋಟಿ ರೂಪಾಯಿ ವರೆಗೆ ಮಧ್ಯಮ ಕೈಗಾರಿಕೆಯೆಂದು ವ್ಯಾಖ್ಯಾನಿಸಲಾಗಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸಚಿವ ಸಂಪುಟವು ಸೂಕ್ಷ್ಮ ಕೈಗಾರಿಕೆಗಳ ಮಿತಿಯನ್ನು5 ಕೋಟಿ ರೂಪಾಯಿವರೆಗೆ, ಸಣ್ಣ ಕೈಗಾರಿಕೆಗಳ ಮಿತಿಯನ್ನು5 ರಿಂದ 75 ಕೋಟಿ ರೂಪಾಯಿವರೆಗೆ, ಮಧ್ಯಮ ಕೈಗಾರಿಕೆಗಳ ಮಿತಿಯನ್ನು 75ರಿಂದ 250 ಕೋಟಿ ರೂಪಾಯಿವರೆಗೆ ಹೆಚ್ಚಿಸಿ ಹೊಸ ವ್ಯಾಖ್ಯಾನ ಮಾಡಿ ಕರಡು ಮಸೂದೆ ಜಾರಿಗೆ ಮುಂದಾಗಿದೆ.
ಹೀಗೆ ಮಾಡುವುದರಿಂದ ಶೇ.70ರಷ್ಟು ಉದ್ಯೋಗ ಸೃಷ್ಟಿ ಮಾಡುತ್ತಿರುವ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ಸೂಕ್ಷ್ಮ ಕೈಗಾರಿಕೆಗಳಿಗೆ 2 ಕೋಟಿ ರೂ. ವರೆಗಿನ ಮಿತಿಯನ್ನೂ, ಸಣ್ಣ ಕೈಗಾರಿಕೆಗಳಿಗೆ 25ಕೋಟಿ ರೂಪಾಯಿ ಮಧ್ಯಮ ಕೈಗಾರಿಕೆಗಳಿಗೆ 50ಕೋಟಿ ರೂಪಾಯಿ ಮಿತಿಯನ್ನು ನಿಗದಿಗೊಳಿಸಬೇಕು ಎಂದು ಜವಳಿ ಆಗ್ರಹಿಸಿದರು.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications