ದೀಪಕ್ ರಾವ್ ಯಾರು? ಕೊಲೆ ಆಗಲು ಕಾರಣವೇನು?
Recommended Video

ಮಂಗಳೂರು, ಜನವರಿ 04 : ಬುಧವಾರ, ಜನವರಿ 3ರಂದು ಮಧ್ಯಾಹ್ನ ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ನ ಹತ್ಯೆ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ದೀಪಕ್ನನ್ನು ಅಟ್ಟಾಡಿಸಿಕೊಂಡು ಹೋಗಿ ಗಾಡಿಯಿಂದ ಗುದ್ದಿ, ಬೀಳಿಸಿ, ಕತ್ತಿಗಳನ್ನು ಬೀಸಿ, ನೆತ್ತರು ಚೆಲ್ಲಿಸಿ ಅತ್ಯಂತ ಅಮಾನುಷವಾಗಿ ಹತ್ಯೆ ಮಾಡಲಾಗಿತ್ತು.
ಅಷ್ಟು ಅಮಾನುಷವಾಗಿ ಹತ್ಯೆಯಾದ 25 ವರ್ಷದ ಯುವಕ ದೀಪಕ್ ರಾವ್ ಯಾರು? ಅಷ್ಟು ಭೀಕರವಾಗಿ ಆತನನ್ನು ಕೊಲೆಗೈಯಲು ಏನು ಕಾರಣ? ಇಲ್ಲಿದೆ ದೀಪಕ್ ರಾವ್ ಗೆ ಸಂಬಂಧಿಸಿದ ಕೆಲವು ಮಾಹಿತಿಗಳು ಇಲ್ಲಿವೆ.
ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ
ದೀಪಕ್ ರಾವ್ ಮಂಗಳೂರಿನ ಕಾಟಿಪಳ್ಳ ಮೂರನೇ ಬ್ಲಾಕ್ ಜನತಾ ಕಾಲನಿ ಬಳಿಯ ಗಣೇಶ ಕಟ್ಟೆ ನಿವಾಸಿ ದಿ.ರಾಮಚಂದ್ರ ರಾವ್, ಪ್ರೇಮ ದಂಪತಿಯ ಮೊದಲ ಮಗ. ದೀಪಕ್ ರಾವ್ ನಿಗೆ ಒಬ್ಬ ತಮ್ಮ ಇದ್ದಾನೆ, ಆತನದ್ದು ಕೂಲಿ ಕೆಲಸ, ಸತೀಶ್ ಆತನ ಹೆಸರು. ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದ ದೀಪಕ್ ರಾವ್ ಸಂಪಾದನೆಯಿಂದಲೇ ಮನೆ ನಡೆಯುತ್ತಿದುದು.

ದೀಪಕ್ ಸಂಪಾದನೆಯೇ ಕುಟುಂಬದ ಆಧಾರ
ದೀಪಕ್ ಕಾಟಿಪಳ್ಳದ ಅಬ್ದುಲ್ ಮಜೀದ್ ಎಂಬವರ ಮೊಬೈಲ್ ಕರೆನ್ಸಿ, ಸಿಮ್ ಮಾರಾಟ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ. ಜೊತೆಗೆ ಭಜರಂಗದಳ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಇತ್ತೀಚೆಗೆ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿಯೂ ಕೆಲಸ ಮಾಡುತ್ತಿದ್ದ.

ಫ್ಲೆಕ್ಸ್ ಹಾಕುವ ವಿಷಯಕ್ಕೆ ಜಗಳ
ಡಿಸೆಂಬರ್ 1ರಂದು ಕಾಟಿಪಳ್ಳದ ಕೈಕಂಬದಲ್ಲಿ ಭೂತಕೋಲ ಆಯೋಜಿಸಲಾಗಿತ್ತು, ಆಯೋಜಕರು ಪ್ರತಿವರ್ಷ ಒಂದು ನಿರ್ದಿಷ್ಟ ಜಾಗದಲ್ಲಿಯೇ ಫ್ಲೆಕ್ಸ್ ಹಾಕುತ್ತಿದ್ದರು ಈ ಬಾರಿಯೂ ಅಲ್ಲಿಯೇ ಫ್ಲೆಕ್ಸ್ ಹಾಕಲು ಹೋದಾಗ ಅಲ್ಲಿ ಮೊದಲೇ ಹಾಕಿದ್ದ ಈದ್ ಮಿಲಾದ್ ಶುಭಾಷಯದ ಫ್ಲೆಕ್ಸ್ ಅನ್ನು ತೆರವುಗೊಳಿಸಲು ಕೆಲವು ಅನ್ಯ ಧರ್ಮೀಯ ಯುವಕರು ಅಡ್ಡಿಪಡಿಸಿದರು.

ವಿಡಿಯೋ ಡಿಲಿಟ್ ಮಾಡುವಂತೆ ಬೆದರಿಕೆ
ಆಗ ಅಲ್ಲಿ ಸಣ್ಣ ಗಲಾಟೆಯೂ ಆಯಿತು, ಆಗ ದೀಪಕ್ ರಾವ್ ಕೂಡಾ ಸ್ಥಳದಲ್ಲಿ ಹಾಜರಿದ್ದ, ಅಷ್ಟೇ ಅಲ್ಲ ಆತ ಆ ಗಲಾಟೆಯ ವಿಡಿಯೊ ಚಿತ್ರೀಕರಣ ಮಾಡಿದ್ದ, ಆಗ ಅನ್ಯ ಕೋಮಿನ ಕೆಲವರು 'ವಿಡಿಯೋ ಡಿಲೀಟ್ ಮಾಡು, ಇಲ್ಲಿದಿದ್ದರೆ ನಿನ್ನನ್ನು ಡಿಲೀಟ್ ಮಾಡುತ್ತೇವೆ' ಎಂದು ಹೆದರಿಸಿದ್ದರು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲೂ ಬೆದರಿಕೆ
ಆ ನಂತರ ದೀಪಕ್ ರಾವ್ ಕೆಲಸ ಮಾಡುತ್ತಿದ್ದ ಮೊಬೈಲ್ ಅಂಗಡಿಗೆ ಬಂದು ದೀಪಕ್ ನನ್ನು ಕೆಲಸದಿಂದ ತೆಗೆದು ಹಾಕುವಂತೆ ಅಂಗಡಿ ಮಾಲೀಕ ಅಬ್ದುಲ್ ಮಜೀದ್ ಮೇಲೆ ಅನ್ಯ ಧರ್ಮೀಯ ಕೆಲ ಯುವಕರು ಒತ್ತಡ ಹಾಕಿದ್ದರು. ಆ ನಂತರವೂ ಸಾಮಾಜಿಕ ಜಾಲತಾಣಗಳಲ್ಲಿ ದೀಪಕ್ ಗೆ ಬೆದರಿಕೆಗಳು ಬರುತ್ತಿದ್ದವು ಎನ್ನಲಾಗಿದೆ. ಈಗ ಅವರೇ ದೀಪಕ್ ಕೊಲೆ ಮಾಡಿರಬಹುದು ಎಂಬ ಆರೋಪ ಕೇಳಿ ಬರುತ್ತಿದೆ. ಕೊಲೆ ಮಾಡಿದ್ದಾರೆ ಎನ್ನಲಾಗಿರುವ ನಾಲ್ಕು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ಬಳಿಕ ಕೊಲೆಗೆ ನಿಜವಾದ ಕಾರಣ ತಿಳಿದು ಬರಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications