ಕುವೈತ್ನಿಂದ ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್
ಮಂಗಳೂರು, ಮೇ 11: ದೇಶದಲ್ಲಿ ತಲೆದೂರಿರುವ ಆಕ್ಸಿಜನ್ ಸಮಸ್ಯೆ ನೀಗಿಸಲು ಮತ್ತೆ ಗಲ್ಫ್ ರಾಷ್ಟ್ರಗಳು ಭಾರತದತ್ತ ಸಹಾಯಹಸ್ತ ಚಾಚಿವೆ. ಕುವೈತ್ನಿಂದ ನವ ಮಂಗಳೂರು ಬಂದರಿಗೆ ಮತ್ತೆ 40 ಮೆಟ್ರಿಕ್ ಟನ್ ಆಕ್ಸಿಜನ್ ಬಂದಿದೆ.
ಭಾರತೀಯ ನೌಕಾ ಸೇನೆಯ ಐಎನ್ಎಸ್ ಕೊಲ್ಕತ್ತಾ ಯುದ್ಧ ನೌಕೆಯ ಮೂಲಕ ಆಕ್ಸಿಜನ್ ಮಂಗಳೂರು ಬಂದರನ್ನು ತಲುಪಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ, ಸರ್ಕಾರದ ಪರವಾಗಿ ಬರಮಾಡಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಬಹ್ರೇನ್ನಿಂದ 40 ಟನ್ ಆಕ್ಸಿಜನ್ ಮಂಗಳೂರಿಗೆ ಬಂದಿದ್ದು, ಈ ಆಕ್ಸಿಜನ್ ಅನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹತ್ತಿರದ ಜಿಲ್ಲೆಗಳಿಗೆ ರವಾನಿಸಲಾಗಿತ್ತು. ಈ ಬಾರಿ ಅಗತ್ಯವಿರುವ ಜಿಲ್ಲೆಗಳಿಗೆ ಈ ಆಕ್ಸಿಜನ್ ರವಾನಿಸಲು ಸರ್ಕಾರ ನಿರ್ಧಾರ ಮಾಡಿದೆ.

ಕುವೈತ್ನಿಂದ ಬಂದ ಐಎನ್ಎಸ್ ಕೊಲ್ಕತ್ತಾ ಯುದ್ಧ ನೌಕೆಯಲ್ಲಿ ಐಎಸ್ಒ ಅನಿಲ ಟ್ಯಾಂಕ್ ಸಹಿತ, 5 ಟನ್ ಆಕ್ಸಿಜನ್ ಸಿಲಿಂಡರ್, ಮತ್ತು 4 ಹೈ ಪ್ಲೋ ಆಕ್ಸಿಜನ್ ಕಂಟೈನರ್ ಒಳಗೊಂಡಿತ್ತು.
ಕಳೆದ ಬಾರಿ ಬಹ್ರೇನ್ನಿಂದ ಆಕ್ಸಿಜನ್ ತಂದ ಐಎನ್ಎಸ್ ತಲವಾರ್ ನೌಕೆಯ ಎದುರು ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಹಿತ ಬಿಜೆಪಿ ಶಾಸಕರು ಫೋಟೋ ತೆಗೆಸಿಕೊಂಡು ಇದು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಗೌರವದಿಂದ ಬಂದ ಆಕ್ಸಿಜನ್ ಎಂಬುವುದಾಗಿ ಹೇಳಿಕೊಂಡಿದ್ದರು.

ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ಟೀಕಾ ಪ್ರಹಾರ ನಡೆಸಿದ್ದರು. ರಾಜಕೀಯ ನಾಯಕರ ಕ್ರೆಡಿಟ್ ವಾರ್ ಗೆ ಜನರಿಂದ ಆಕ್ರೋಶವೂ ವ್ಯಕ್ತವಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications