ಕರಾವಳಿಯ ದೈವಾರಾಧ್ಯನಿಗೆ ಸರ್ಕಾರದ ಅಧಿಕೃತ ವೆಬ್ ಸೈಟ್ನಲ್ಲೇ ಅವಮಾನ; ಭುಗಿಲೆದ್ದ ಆಕ್ರೋಶ
ಮಂಗಳೂರು, ಸೆಪ್ಟೆಂಬರ್ 25; ಕರಾವಳಿಯ ಜನರು ಭಕ್ತಿಯಿಂದ ಪೂಜಿಸುವ ದೈವಾರಾಧನೆಗೆ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್ನಲ್ಲಿ ಅವಮಾನ ಮಾಡಲಾಗಿದೆ. ವೆಬ್ ಸೈಟ್ನಲ್ಲಿ ದೈವಾರಾಧನೆ ವಿಚಾರದಲ್ಲಿ ಅನುಚಿತವಾಗಿ ಬರೆಯಲಾಗಿದ್ದು, ತುಳುವರ ವ್ಯಾಪಕ ವಿರೋಧದ ಬಳಿಕ ಇಲಾಖೆ ವೆಬ್ ಸೈಟ್ನ ಪೇಜ್ ಅನ್ನೇ ಡಿಲೀಟ್ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ಅಧಿಕೃತ ವೆಬ್ ಸೈಟ್ನಲ್ಲಿ ಅನುಚಿತ ಬರಹ ವೈರಲ್ ಆಗುತ್ತಿದ್ದು, ಇದರ ವಿರುದ್ಧ ಜನಾಕ್ರೋಶವೂ ವ್ಯಕ್ತವಾಗುತ್ತಿದೆ.
ತುಳುವರ ದೈವಾರಾಧ್ಯನಿಗೆ ಅವಮಾನ
ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್ನಲ್ಲಿ ದೈವಾರಾಧನೆಯ ಪರಿಕಲ್ಪನೆಯನ್ನೇ ಅಡಿಮೇಲು ಮಾಡಿದ್ದಾರೆ ಎಂದು ಆಕ್ರೋಶಗಳು ವ್ಯಕ್ತವಾಗುತ್ತಿವೆ. ಆಕ್ಷೇಪಾರ್ಹ ಪದ ಉಪಯೋಗಿಸಿರುವುದನ್ನು ತುಳುವಿನ ಟ್ರೋಲ್ ಪೇಜ್ನವರು ಟ್ರೋಲ್ ಮಾಡಿದ್ದರು. ಇದು ಗಮನಕ್ಕೆ ಬರುತ್ತಿದ್ದಂತೆ ಪ್ರವಾಸೋದ್ಯಮ ಇಲಾಖೆಯು ವೆಬ್ ಸೈಟ್ನಲ್ಲಿನ 'ಭೂತ ಕೋಲ' ಪೇಜ್ ಅನ್ನು ಡಿಲಿಟ್ ಮಾಡಿದೆ.

'ಆ' ಒಂದು ಟ್ವೀಟ್ನಿಂದ ಯಡವಟ್ಟು
ಭೂತಾರಾಧನೆ ಎಂಬ ತಲೆಬರಹದಲ್ಲಿರುವ ದೈವಾರಾಧನೆ ವಿಚಾರ ಟ್ರೋಲ್ ಆಗಿದೆ. ಇಲ್ಲಿ ಭೂತದ ಕೋಲ ಎಂಬ ಪದವು "ಭೂತದ ಕೊಳ" ಎಂದಾಗಿದೆ. ಅಲ್ಲದೆ ಭೂತಾರಾಧನೆಯನ್ನು ದೆವ್ವದ ಆರಾಧನೆ ಎಂದು ಬರೆಯಲಾಗಿದೆ. ಭೂತಗಳನ್ನು ಪ್ರತಿನಿಧಿಸುವ ವಿಗ್ರಹಗಳನ್ನು ಮೆರವಣಿಗೆಯಲ್ಲಿ ಡ್ರಮ್ಗಳನ್ನು ಬಾರಿಸುವುದು ಮತ್ತು ಪಟಾಕಿಗಳನ್ನು ಸಿಡಿಸುವ ಮೂಲಕ ಮೆರವಣಿಗೆ ಮಾಡುತ್ತಾರೆ. ಕತ್ತಿ ಮತ್ತು ಗಂಟೆಗಳೊಂದಿಗೆ ಕುಣಿಯುತ್ತ ನರ್ತಕಿ ತಾನು ಪ್ರತಿನಿಧಿಸುವ ದೆವ್ವದ ಅನುಕರಣೆಯಲ್ಲಿ ಸುತ್ತುತ್ತಾನೆ. ಉದ್ರಿಕ್ತವಾಗಿ ಮೇಲಕ್ಕೆ ಕೆಳಕ್ಕೆ ಹೆಜ್ಜೆ ಹಾಕುತ್ತಾನೆ ಎಂದು ಆಕ್ಷೇಪಾರ್ಹವಾಗಿ ಬರೆಯಲಾಗಿದೆ.

ಕರಾವಳಿಯಲ್ಲಿ ಭುಗಿಲೆದ್ದ ಆಕ್ರೋಶ
ತುಳುವಿನ ಟ್ರೋಲ್ ಪೇಜ್ @Tuluvas speaks ಕರ್ನಾಟಕ ಸರ್ಕಾರದಿಂದ ತುಳುವರ ದೈವಕ್ಕೆ ಅವಮಾನ ಎಂದು ಈ ಬರಹದ ಪೇಜ್ ಅನ್ನು ಪೋಸ್ಟ್ ಮಾಡಿ ಟ್ರೋಲ್ ಮಾಡಿದೆ. ನಾವು ನಂಬುವ ದೈವಗಳನ್ನು, ಸತ್ಯಗಳನ್ನು ದೆವ್ವವೆಂದು ಪ್ರವಾಸೋದ್ಯಮ ಇಲಾಖೆ ಹೇಳಿದೆ. ಅಲ್ಲದೆ ದೆವ್ವ?, ಕತ್ತಿ?, ಕೊಳ?, ಡ್ರಮ್, ನರ್ತಕಿ? ಎಂದು ಆಕ್ಷೇಪವುಳ್ಳ ಪದ ಬಳಕೆ ಮಾಡಿದೆ. ಈ ಟ್ರೋಲ್ ಪೇಜ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತನ್ನ ವೆಬ್ ಸೈಟ್ನ ಪೇಜ್ ಟ್ರೋಲ್ ಆಗುತ್ತಿದ್ದಂತೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಭೂತ ಕೋಲ ಎಂಬ ಪೇಜ್ ಅನ್ನು ಡಿಲಿಟ್ ಮಾಡಿದೆ ಎನ್ನಲಾಗಿದೆ.
ದೈವಾರಾಧನೆಯ ಅರಿವೇ ಇಲ್ಲದ ವ್ಯಕ್ತಿಯಿಂದ ಈ ಬರಹವನ್ನು ಬರೆಯಲಾಗಿದೆ. ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್ ಅನ್ನು ನಂಬಿ ಕರಾವಳಿಗೆ ಬರುವ ಜನರು ಭೂತಾರಾಧನೆಯ ಪರಿಕಲ್ಪನೆಯನ್ನೇ ಅಪಾರ್ಥಮಾಡಿಕೊಳ್ಳುವ ಸಾಧ್ಯತೆಗಳಿವೆ. ಇಲಾಖೆ ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ತುಳು ವಿದ್ವಾಂಸರಿಂದಲೇ ವೆಬ್ ಸೈಟ್ನಲ್ಲಿ ಕರಾವಳಿಯ ಸಂಸ್ಕೃತಿ ಬಗ್ಗೆ ಬರೆಯಲಿ ಎಂದು ಜನರು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications