ಭೂತಾರಾಧನೆಗೆ ಅವಮಾನ; ಬಿ.ಟಿ. ಲಲಿತಾ ನಾಯಕ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ದೂರು
ಮಂಗಳೂರು, ನವೆಂಬರ್, 13: ''ತುಳುನಾಡಿನ ಭೂತಾರಾಧನೆ ಮೂಢನಂಬಿಕೆ'' ಎಂದಿರುವ ಸಾಹಿತಿ ಬಿ.ಟಿ.ಲಲಿತಾ ನಾಯಕ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಗೆ ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ಉಮೇಶ್ ಪಕ್ಕಲು ದೂರು ನೀಡಿದ್ದಾರೆ. ಭಾರತೀಯ ದಂಡಸಂಹಿತೆ 295ಎ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಲಿಖಿತ ದೂರು ನೀಡಲಾಗಿದೆ. ಧಾರ್ಮಿಕ ಭಾವನೆಗೆ ಧಕ್ಕೆ ನಿಯಮದಡಿ ಪ್ರಕರಣ ದಾಖಲಿಸುವಂತೆ ಉಡುಪಿ ನಗರ ಠಾಣೆಗೆ ದೂರು ಮನವಿ ಮಾಡಿದ್ದಾರೆ
ಹಿಂದೂ ಜಾಗರಣ ವೇದಿಕೆ ಮುಂದೆ ನ್ಯಾಯಾಲಯದಲ್ಲೂ ಖಾಸಗಿ ದೂರು ದಾಖಲಿಸುವ ಎಚ್ಚರಿಕೆಯನ್ನು ನೀಡಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ಲಲಿತಾ ನಾಯಕ್ ಹೇಳಿಕೆಯಿಂದ ಧಾರ್ಮಿಕ ನಂಬಿಕೆ ಮತ್ತು ಭಾವನೆಗೆ ಘಾಸಿಯಾಗಿದೆ. ಒಂದು ವರ್ಗ, ಸಮುದಾಯಕ್ಕೆ ಅವಹೇಳನ ಆದಾಗ ನಿಯಮದಂತೆ ಸೆಕ್ಷನ್ ಅಡಿ ದೂರು ದಾಖಲಿಸುವಂತೆ ಮನವಿ ಮಾಡಿದ್ದೇವೆ. ಮೂರು ವರ್ಷ ಶಿಕ್ಷೆ, ದಂಡ ವಿಧಿಸಬೇಕು ಎಂದು ಒತ್ತಾಯ ಮಾಡಿದೆ.
ಲಲಿತಾ ನಾಯಕ್ ವಿರುದ್ಧ ಶ್ರೀಕಾಂತ್ ಕಿಡಿ
ದೈವಾರಾದನೆ ಮೂಢನಂಬಿಕೆ, ವೇಷ ಕಟ್ಟಿ ಕುಣಿಯುತ್ತಾರೆ. ಮಾನಸಿಕ ಸಮಸ್ಯೆ ಅಂತೆಲ್ಲಾ ಲಲಿತಾ ನಾಯಕ್ ಅವರು ಮಾತನಾಡಿದ್ದಾರೆ. ಬಿ.ಟಿ.ಲಲಿತಾ ನಾಯಕ್ ಅವರ ಹೇಳಿಕೆಯನ್ನು ಕಟುವಾಗಿ ಖಂಡಿಸುತ್ತೇವೆ. ತುಳುನಾಡಿನ ಕೋಟ್ಯಂತರ ಜನರ ಭಾವನೆಗೆ ಧಕ್ಕೆಯಾಗಿದೆ. ಹಿಂದೂ ಜಾಗರಣ ವೇದಿಕೆ ಇದನ್ನು ಖಂಡಿಸುತ್ತದೆ. ತುಳು ನಾಡಿನ ಜನರ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿರುವುದು ಸಹಿಸಲು ಸಾಧ್ಯವಿಲ್ಲ. ಬಯಲು ಸೀಮೆಯವರಿಗೆ ತುಳುನಾಡಿನ ದೈವಾರಾದನೆ ಬಗ್ಗೆ ಸ್ಪಷ್ಟ ಚಿತ್ರಣ, ಕಲ್ಪನೆ ಇಲ್ಲ. ಆಪ್ತಮಿತ್ರ, ನಾ ನಿನ್ನ ಬಿಡಲಾರೆ ಮೊದಲಾದ ಚಿತ್ರಗಳಲ್ಲಿ ಬರುವ ದೈವಗಳು ಆರಾಧನೆ ಆಗಲ್ಲ ಅಂತಾ ಶ್ರೀಕಾಂತ್ ಶೆಟ್ಟಿ ಕಿಡಿಕಾರಿದ್ದಾರೆ.

ದೈವಾರಾಧನೆ ನಮ್ಮ ಜೀವನದ ಅವಿಭಾಜ್ಯ ಅಂಗ
ದೈವಾರಾಧನೆ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ನಮ್ಮ ಮನೆಗಳಲ್ಲಿ ದೈವಕ್ಕೆ ಮೊದಲು ಕೈ ಮುಗಿದು ಮುಂದಿನ ಕೆಲಸ ಮಾಡುವ ಸಂಪ್ರದಾಯ ಇದೆ. ನಮ್ಮ ನೆಲಮೂಲದ ಧೈವಗಳಿಗೆ ಮೊದಲ ಸ್ಥಾನ, ಆನಂತರದಲ್ಲಿ ದೇವರಿಗೆ ಆದ್ಯತೆ ಇರುತ್ತದೆ. ದೈವಾರಾದನೆ ಕುರಿತು ಹಾದಿ ಬೀದಿಯಲ್ಲಿ ಹೋಗುವವರು ಹಗುರವಾಗಿ ಮಾತನಾಡಿದರೆ ಸಹಿಸಲು ಆಗುವುದಿಲ್ಲ. ದೈವಾರಾಧಕರನ್ನು ಬಿ.ಟಿ.ಲಲಿತಾ ನಾಯಕ್ ಹೀಯಾಳಿಸಿದ್ದಾರೆ. ಸರ್ಕಾರಕ್ಕೆ ಮಾಸಾಶನ ನಿಲ್ಲಿಸಲು ಲಲಿತಾ ನಾಯಕ್ ಮನವಿ ಮಾಡಿದ್ದಾರೆ.

ಬಡವರ ಶೋಷಿತರ ಪರ ಎನ್ನುವ ವಿಚಾರವಾದಿಗಳು, ಕೆಳ ಸಮುದಾಯ ಎಂದು ಗುರುತಿಸಿಕೊಂಡಿರುವ ಪಾಣಾರ, ಪಂಬದ, ನಲಿಕೆ ಹಿರಿಯರಿಗೆ ಸಣ್ಣ ಮಾಸಾಶನ ನೀಡಲು ಸರ್ಕಾರ ಮುಂದಾಗಿದೆ. ಈ ಸಣ್ಣ ಮಾಸಾಶನವನ್ನೂ ಕಿತ್ತುಕೊಳ್ಳಲು ಹೊರಟಿರುವುದು ಅಕ್ಷಮ್ಯ ಅಪರಾಧವಾಗಿದೆ. ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ದೈವಾರಾದನೆ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡಿದರೆ ತುಳುನಾಡಿನ ಜನರು ಸುಮ್ಮನಿರಲ್ಲ ಎಂದು ಶ್ರೀಕಾಂತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications