ಕುಸಿಯುತ್ತಿದೆಯಾ ಬೆಳ್ತಂಗಡಿಯಲ್ಲಿರುವ ಗಡಾಯಿಕಲ್ಲು ಬೆಟ್ಟ?
ಮಂಗಳೂರು ಜೂನ್ 24: ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಹಿನ್ನೆಲೆಯುಳ್ಳ ಗಡಾಯಿಕಲ್ಲು ಬೆಟ್ಟ ಅಥವಾ ಜಮಾಲಾಬಾದ್ ಕುಸಿಯುತ್ತಿದೆಯಾ ? ಇಂತಹದೊಂದು ಆತಂಕ ಬೆಳ್ತಂಗಡಿ ಪರಿಸದ ಜನರಲ್ಲಿ ಮನೆ ಮಾಡಿದೆ. ಇದಕ್ಕೆ ಪುಷ್ಟಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿವೆ.
ದಕ್ಷಿಣಕನ್ನಡ ಜಿಲ್ಲೆಯ ಗಡಾಯಿಕಲ್ಲು ಬೆಟ್ಟದಲ್ಲಿ ಬಿರುಕು ಬಿಟ್ಟಿದ್ದು, ಬೆಟ್ಟದ ಒಂದು ಪಾರ್ಶ್ವದಲ್ಲಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಸ್ಥಳೀಯರ ಮಾಹಿತಿ ಪ್ರಕಾರ ಈ ಘಟನೆ ಸಂಭವಿಸುವ ವೇಳೆ ಪರಿಸರದಲ್ಲಿ ಭಾರೀ ಶಬ್ದವೂ ಕೇಳಿಸಿಕೊಂಡಿತ್ತು ಎಂದು ಹೇಳಲಾಗಿದೆ.
ಚಾರಣಪ್ರೀಯರ ಹಾಟ್ ಸ್ಪಾಟ್ ಆಗಿರುವ ಬೆಳ್ತಂಗಡಿಯ ಈ ಪ್ರವಾಸಿತಾಣ ನರಸಿಂಹಗಢ ಎಂದೂ ಕರೆಯಲಾಗುತ್ತದೆ. ಭೂಮಿಯಿಂದ 1700 ಅಡಿ ಎತ್ತರದಲ್ಲಿರುವ ಗಡಾಯಿಕಲ್ಲಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಭಾರೀ ಶಬ್ಧ ಕೇಳಿಬಂದಿದ್ದು,ಕಲ್ಲಿನ ಒಂದು ಪಾರ್ಶ್ವದಲ್ಲಿ ಕುಸಿತವಾಗಿದೆ ಎಂದು ಹೇಳಲಾಗಿದೆ.

ಬೆಳ್ತಂಗಡಿ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಈ ಗಡಾಯಿಕಲ್ಲು ಭೂಮಿಯಿಂದ ನೂರಾರು ಅಡಿ ಎತ್ತರದಲ್ಲಿರುವ ಈ ಪರ್ವತವು ಪ್ರಸಿದ್ದ ಪ್ರವಾಸಿ ತಾಣ ಮತ್ತು ಟ್ರಕ್ಕಿಂಗ್ ಸ್ಪಾಟ್ ಆಗಿಯೂ ಗುರುತಿಸಿಕೊಂಡಿದೆ. ಆದರೆ ಈ ಘಟನೆಯನ್ನು ಅರಣ್ಯ ಇಲಾಖೆ ಅಲ್ಲಗಳೆದಿದ್ದು , ಪರ್ವತಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಗಡಾಯಿಕಲ್ಲು ಕುಸಿಯುತ್ತಿದೆ ಎನ್ನುವ ಸುದ್ದಿ ಸ್ಥಳೀಯ ಲಾಯಿಲ, ಇಂದಬೆಟ್ಟು, ಕೊಲ್ಲಿ, ಮಲವಂತಿಗೆ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ. ಬೆಳ್ತಂಗಡಿ ವನ್ಯಜೀವಿವಲಯದ ವ್ಯಾಪ್ತಿಯಲ್ಲಿ ಬರುವ ಗಡಾಯಿಕಲ್ಲಿನ ಬಿರುಕಿನ ಬಗ್ಗೆ ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದು,ಇದರಿಂದ ಯಾವುದೇ ಅನಾಹುತ ಸಂಭವಿಸೋದಿಲ್ಲ ಅಂತಾ ಸ್ಪಷ್ಟನೆ ನೀಡಿದೆ.

ಮೊದಲು ಹಿಂದೂ ರಾಜರುಗಳ ಕೋಟೆಯಾಗಿದ್ದ ನರಸಿಂಹ ಗಢಕ್ಕೆ 1794ರಲ್ಲಿ ಟಿಪ್ಪುಸುಲ್ತಾನ್ ದಾಳಿ ಮಾಡಿ ವಶ ಪಡಿಸಿಕೊಂಡ ಬಳಿಕ ಜಮಾಲಾಬಾದ್ ಕೋಟೆ ಎಂದು ಮರುನಾಮಕರಣ ಮಾಡಿದ್ದ.ನರಸಿಂಹ ಗಢದಲ್ಲಿ ಇಂದಿಗೂ ಟಿಪ್ಪು ಸುಲ್ತಾನ್ ಕಾಲದ ಫಿರಂಗಿಗಳು ಕಾಣಸಿಗುತ್ತಿದ್ದು,ಪ್ರವಾಸಿಗರ ನೆಚ್ಚಿನ ತಾಣವಾಗಿದೆ..
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications