ಖಜಾನೆ ಖಾಲಿ ಎಂದ ಬಿಜೆಪಿಯಿಂದ ಕೆಲಸ ನಿರೀಕ್ಷಿಸುವುದು ಸಾಧ್ಯವೇ?; ರಮಾನಾಥ ರೈ
ಮಂಗಳೂರು, ಅಕ್ಟೋಬರ್ 28: ನೆರೆ ಪರಿಹಾರ ನೀಡಲು ಸಾಧ್ಯವಾಗದೆ ಖಜಾನೆ ಖಾಲಿಯಾಗಿದೆ ಎಂದು ಹೇಳುತ್ತಿರುವ ಬಿಜೆಪಿ ಸರ್ಕಾರದಿಂದ ಕೆಲಸ ನಿರೀಕ್ಷೆ ಸಾಧ್ಯವೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದ್ದಾರೆ.
ಮಂಗಳೂರಿನಲ್ಲಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಾಂಗ್ರೆಸ್ ಆಡಳಿತಲ್ಲಿದ್ದಾಗ ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಾಧ್ಯವಾಗಿದೆ. ಆದರೆ ಬಿಜೆಪಿ ಸರಕಾರದಿಂದ ನೆರೆ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ" ಎಂದು ಆಕ್ಷೇಪಿಸಿದರು.

"ಈ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಮಹಾನಗರ ಪಾಲಿಕೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ನೀರಿನ ಸಮಸ್ಯೆಯನ್ನು ನಿವಾರಿಸುವಲ್ಲಿ ತುಂಬೆ ಅಣೆಕಟ್ಟು ರಚನೆ, ಒಳಚರಂಡಿ ಕಾಮಗಾರಿ, ನಗರದ ಪ್ರಮುಖ ರಸ್ತೆಗಳ ಕಾಂಕ್ರಿಟೀಕರಣ, ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ, ಸುರತ್ಕಲ್ ನಲ್ಲಿ ಮಾದರಿ ಮಾರುಕಟ್ಟೆ ನಿರ್ಮಾಣ, ಲೇಡಿಗೇಶನ್ ಹಾಗೂ ವೆನ್ಲಾಕ್ ಆಸ್ಪತ್ರೆ ಮೇಲ್ದರ್ಜೆ, ಪಡೀಲ್ ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಹಲವಾರು ಯೋಜನೆಗಳು ಕಾಂಗ್ರೆಸ್ ಆಡಳಿತದಲ್ಲಿ ಆಗಿವೆ. ಜನತೆ ಈ ಅಭಿವೃದ್ಧಿ ಕಾರ್ಯಗಳನ್ನು ತುಲನೆ ಮಾಡಿಕೊಂಡು ಮತ್ತೊಮ್ಮೆ ಕಾಂಗ್ರೆಸ್ಗೆ ಅವಕಾಶ ನೀಡಬೇಕು. ನಗರದಲ್ಲಿ ಅಭಿವೃದ್ಧಿ ಜತೆಗೆ ಸಾಮಾಜಿಕ ಸಾಮರಸ್ಯವನ್ನು ಗಟ್ಟಿಗೊಳಿಸಲು ಪಕ್ಷವನ್ನು ಬೆಂಬಲಿಸಬೇಕು" ಎಂದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications