Breaking: ಮಂಗಳೂರು ಸ್ಪೋಟದ ಹೊಣೆ ಹೊತ್ತ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್
ಮಂಗಳೂರು, ನವೆಂಬರ್, 24: ಮಂಗಳೂರಿನ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಹೊತ್ತುಕೊಂಡಿರುವ ಬಗ್ಗೆ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡು ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಹೆಸರಿನ ಗುಂಪಿನ ಪೋಸ್ಟ್ ನಲ್ಲಿ ಉಲ್ಲೇಖಿಸಿದ ಅಂಶದ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪೊಲೀಸರು ಅದನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದಾರೆ.
ಮೂಲವಾಗಿ ಕದ್ರಿ ದೇವಸ್ಥಾನದ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಲಾಗಿತ್ತು ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಇದರ ಹೊರತಾಗಿ ಪೋಸ್ಟ್ ಅನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಲೇ ತುಂಡರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇಡೀ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಿದ ಬೆನ್ನಲ್ಲೇ ಇಂಥದೊಂದು ಬೆಳವಣಿಗೆ ನಡೆದಿದೆ.

ಬುಧವಾರ ಎನ್ಐಎಗೆ ಕೇಸ್ ಹಸ್ತಾಂತರ:
ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣವನ್ನು ಬುಧವಾರ ಅಧಿಕೃತವಾಗಿ ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ಕ್ಕೆ ಹಸ್ತಾಂತರಿಸಲಾಗಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದರು. "ಯುಎಪಿಎಗೆ ಸಂಬಂಧಿಸಿದ ಯಾವುದೇ ಪ್ರಕರಣವಾಗಿದ್ದರೂ ಅದನ್ನು ಎನ್ಐಎ ತಂಡಕ್ಕೆ ಹಸ್ತಾಂತರ ಮಾಡಲಾಗುತ್ತದೆ. ನಿನ್ನೆ ಸಂಜೆಯೇ ನಾವು ಮಂಗಳೂರು ಆಟೋರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಎನ್ಐಎ ತಂಡಕ್ಕೆ ರವಾನಿಸಿದ್ದೇವೆ. ಅದನ್ನು ಇಂದು ಕೇಂದ್ರ ಗೃಹ ಸಚಿವಾಲಯಕ್ಕೆ ತಲುಪಿಸಲಾಗುತ್ತದೆ," ಎಂದು ತಿಳಿಸಿದರು.
ಮಂಗಳೂರಿನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣವೂ ಸೇರಿದಂತೆ ಇಂಥ ಪ್ರಕರಣಗಳಲ್ಲಿ ಆರಂಬದಿಂದಲೂ ಕೇಂದ್ರೀಯ ತನಿಖಾ ತಂಡಗಳು ವಿಚಾರಣೆಯಲ್ಲಿ ಪೊಲೀಸರ ಜೊತೆಗೆ ಕೈ ಜೋಡಿಸಿರುತ್ತವೆ. ಸೂಕ್ಷ್ಮ ಅಂಶಗಳನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ತನಿಖೆಯನ್ನು ನಡೆಸುತ್ತವೆ. ಆದರೆ ಈಗ ಅಧಿಕೃತವಾಗಿ ಎನ್ಐಎ ತಂಡಕ್ಕೆ ಈ ಪ್ರಕರಣವನ್ನು ಹಸ್ತಾಂತರ ಮಾಡಲಾಗುತ್ತಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದರು.
ಮಂಗಳೂರಿನಲ್ಲಿ ಸ್ಫೋಟ ಸಂಭವಿಸಿದ್ದ ಸ್ಥಳಕ್ಕೆ ಭೇಟಿ:
ಮಂಗಳೂರಿನ ಆಟೋ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಡಿಜಿಪಿ ಪ್ರವೀಣ್ ಸೂದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಪೋಟಗೊಂಡ ಆಟೋವನ್ನು ಘಟನಾ ಸ್ಥಳದಲ್ಲೇ ಇರಿಸಲಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಆಟೋ ವೀಕ್ಷಿಸಿ ಪೊಲೀಸರಿಂದ ಮಾಹಿತಿ ಪಡೆದಿದ್ದರು.
ಕಳೆದ ನವೆಂಬರ್ 19ರಂದು ಸಂಜೆ ಶಂಕಿತ ಭಯೋತ್ಪಾದಕ ಶಾರೀಕ್ ಪಂಪ್ ವೆಲ್ ಕಡೆಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆತನ ಬಳಿಯಿದ್ದ ಕುಕ್ಕರ್ ಬಾಂಬ್ ಗರೋಡಿ ಬಳಿಯಲ್ಲಿ ಸ್ಪೋಟಗೊಂಡಿತ್ತು. ಆ ಬಳಿಕ ಆಟೋದಲ್ಲಿ ಸ್ಫೋಟ ನಡೆದಿರುವ ಸ್ಥಳವನ್ನು ಬ್ಯಾರಿಕೇಡ್ ಹಾಕಿ ಯಾರೂ ಅಲ್ಲಿ ಓಡಾಡದಂತೆ ರಸ್ತೆಯಿಂದ ಪ್ರತ್ಯೇಕಿಸಲಾಗಿತ್ತು. ಈ ಸ್ಥಳದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಬಿಗಿ ಭದ್ರತೆಯನ್ನು ಒದಗಿಸಲಾಗಿತ್ತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications