ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳು ಎಂದ ಮಂಗಳೂರಿನ ವ್ಯಕ್ತಿ: ವಿಡಿಯೋ ವೈರಲ್
ಮಂಗಳೂರು ಅಕ್ಟೋಬರ್ 14: ಪ್ಯಾಲೇಸ್ತೀನ್ನ ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿ ಏಳು ದಿನಗಳು ಕಳೆದಿವೆ. ಯುದ್ಧ ಭೂಮಿಯಲ್ಲಿ ಪ್ರತಿ ದಿನವೂ ನೂರಾರು ಸಾವುಗಳು ಸಂಭವಿಸುತ್ತಿದ್ದು, ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.
ಇಂತಹ ರಣರಂಗಕ್ಕೆ ಕಾರಣವಾದ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ಝಾಕಿರ್ ಎಂಬಾತ ವಿಡಿಯೋ ಹರಿಬಿಟ್ಟಿದ್ದಾನೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬಾನ್ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್ ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳು ಎಂದಿದ್ದಾನೆ.

ಹಮಾಸ್ ಉಗ್ರರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಝಾಕಿರ್ ಕರೆ ನೀಡಿದ್ದು ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಿದ್ದಾನೆ. ಅಲ್ಲದೇ ಪ್ಯಾಲೇಸ್ತೀನ್ನ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲಿ ಎಂದಿದ್ದಾನೆ.
ಝಾಕಿರ್ನಾ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಝಾಕಿರ್ ಹೇಳಿಕೆ ಬಗ್ಗೆ ಹಿಂದೂ ಸಂಘಟನೆಗಳಿಂದಲೂ ಭಾರೀ ವಿರೋಧ ವ್ಯಕ್ತವಾಗಿದ್ದು, ಝಾಕಿರ್ ನನ್ನು ಈ ಕೂಡಲೇ ಬಂಧಿಸುವಂತೆ ಸ್ಥಳೀಯ ಪೊಲೀಸರಿಗೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ.
ಹಮಾಸ್ ಉಗ್ರರಿಗೆ ಬೆಂಬಲ-ಝಾಕಿರ್ ಬಂಧನ
ಹಮಾಸ್ ಉಗ್ರರಿಗೆ ಬೆಂಬಲ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ ಮಂಗಳೂರಿನ ಝಾಕಿರ್ನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ವೈರಲ್ ಬೆನ್ನಲ್ಲೇ ಬಂದರು ಪೊಲೀಸ್ ಠಾಣೆಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರದೀಪ್ ಕುಮಾರ್ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಬಂದರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಇಸ್ರೇಲ್ನಲ್ಲಿ 12 ಸಾವಿರಕ್ಕೂ ಅಧಿಕ ಕರಾವಳಿ ಕನ್ನಡಿಗರು
ಇನ್ನು ಪ್ಯಾಲೇಸ್ತೀನ್ನ ಹಮಾಸ್ ಉಗ್ರರು ದಾಳಿ ನಡೆಸಿರುವ ಇಸ್ರೇಲ್ನಲ್ಲಿ 12 ಸಾವಿರಕ್ಕೂ ಅಧಿಕ ಕರಾವಳಿ ಕನ್ನಡಿಗರಿದ್ದಾರೆ. ಗಡಿನಾಡು ಕಾಸರಗೋಡಿನ ಗೋವಾದ ಗಡಿಭಾಗ ಕಾರವಾರದವರೆಗೆ ಇಸ್ರೇಲ್ನಲ್ಲಿ ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಇವರೆಲ್ಲರೂ ಯುದ್ಧ ಪೀಡಿತ ಪ್ರದೇಶದ ಸುತ್ತಮುತ್ತಲೇ ಇದ್ದರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.
ಇವರಲ್ಲಿ ಶೇಕಡಾ 50ರಷ್ಟು ಮಹಿಳೆಯರೂ ಇದ್ದಾರೆ. 8 ಸಾವಿರಕ್ಕೂಅಧಿಕ ಮಂದಿ ದಕ್ಷಿಣ ಕನ್ನಡದವರೂ ಇದ್ದಾರೆ ಎಂದು ತಿಳಿದು ಬಂದಿದೆ. ಇವರೆಲ್ಲರೂ ಭಾರತದ ಹೋಮ್ ನರ್ಸ್ ಮಾದರಿಯ ಕೇರ್ ಗೀವರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ.
ಕಳೆದ 16 ವರ್ಷಗಳಿಂದ ಇಸ್ರೇಲ್ನ ಟಲ್ ಅವೀವ್ನಲ್ಲಿ ಮಂಗಳೂರಿನ ಹೊರವಲಯದ ದಾಮಸ್ ಕಟ್ಟೆಯ ಪ್ರವೀಣ್ ಪಿಂಟೋ ಕುಟುಂಬ ನೆಲೆಸಿದೆ. ಅದೇ ರೀತಿ ಮಂಗಳೂರು ಮೂಲದ ಲೆನಾರ್ಡ್ ಫರ್ನಾಂಡೀಸ್ ಕಳೆದ 14 ವರ್ಷಗಳಿಂದ ಇಸ್ರೇಲ್ ವಾಸಿಯಾಗಿದ್ದಾರೆ. ದೂರವಾಣಿ ಮೂಲಕ ಅವರುಗಳ ಸುರಕ್ಷತೆಯನ್ನು ಕುಟುಂಬ ಖಾತರಿ ಪಡೆಸುತ್ತಿದೆ. ಬಂಕರ್ಗಳಲ್ಲಿ ಇಬ್ಬರೂ ಸುರಕ್ಷಿತವಾಗಿರುವ ಮಾಹಿತಿ ಲಭ್ಯವಾಗಿದೆ. ಮನೆಯಿಂದ ಹೊರ ಬಾರದಂತೆ ಭಾರತೀಯ ರಾಯಭಾರ ಕಚೇರಿ ಸೂಚನೆಯನ್ನು ನೀಡಿದೆ ಎಂದು ತಿಳಿದು ಬಂದಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications