ವಿಮಾನ ನಿಲ್ದಾಣ ಹೆಸರು ಬದಲಾಯಿಸದಿದ್ದರೆ ಉಗ್ರ ಹೋರಾಟ: ಐವಾನ್ ಡಿಸೋಜಾ
ಮಂಗಳೂರು; ಏಪ್ರಿಲ್ 14: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರಿನ ಫಲಕದಲ್ಲಿ ಅದಾನಿ ಹೆಸರನ್ನು ತೆಗೆಯದಿದ್ದರೆ ಫಲಕಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸುವುದಾಗಿ ಎಐಸಿಸಿ ಕಾರ್ಯದರ್ಶಿ ಐವಾನ್ ಡಿಸೋಜಾ ಸವಾಲು ಹಾಕಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯಲ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಐವಾನ್ ಡಿಸೋಜಾ, ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಕಡಿಮೆಯಾಗಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ. ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಗತಿ ಕುಂಠಿತವಾಗಿದೆ.
ದೆಹಲಿ, ಮುಂಬೈ ವಿಮಾನಯಾನ ಸೇವೆಗಳನ್ನು ರದ್ದುಪಡಿಸಲಾಗಿದೆ. ಬೆಳಗಾವಿ, ಕಲಬುರಗಿ, ಗೋವಾ, ಮೈಸೂರಿಗೆ ಮಂಗಳೂರಿನಿಂದ ಹೋಗಲು ವಿಮಾನ ಇಲ್ಲ. ನಮ್ಮ ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ವಿಮಾನ ಕಂಪನಿಗಳು ಮಂಗಳೂರಿನಿಂದ ವಿಮಾನಗಳನ್ನು ಹಾರಾಟ ಮಾಡಲು ಮುಂದೆ ಬರುತ್ತಿಲ್ಲ. ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣವನ್ನು ಮುಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಐವಾನ್ ಡಿಸೋಜಾ ಆರೋಪಿಸಿದರು.
ಮಂಗಳೂರಿನ ವಿಮಾನ ನಿಲ್ದಾಣವನ್ನು ಅದಾನಿ ಎಂದು ಹೆಸರನ್ನಿಟ್ಟು ನಿಯಮ ಉಲ್ಲಂಘನೆ ಮಾಡಲಾಗಿದೆ. ಈ ಮೂಲಕ ಆಸ್ತಿ ಗುಳುಂ ಮಾಡಲು ಹೊರಟಿದ್ದನ್ನು ನೋಡಿ ನಾವು ಸುಮ್ಮನೇ ಕೂರಬೇಕೇ?, ಮಂಗಳೂರು ಏರ್ ಪೋರ್ಟ್ ನಲ್ಲಿ ಪ್ರವಾಸೋದ್ಯಮ ಮತ್ತು ಇತರ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಮಾಹಿತಿ ನೀಡಲು ಯಾವುದೇ ವ್ಯವಸ್ಥೆ ಇಲ್ಲ ಎಂದರು.

ವಿಮಾನ ನಿಲ್ದಾಣದಿಂದ ನಗರಕ್ಕೆ ಹೋಗಲು ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಕೂಡಾ ಇಲ್ಲ. ವಿಮಾನ ನಿಲ್ದಾಣದಲ್ಲಿ arrival & departure ಬೇರೆ ಬೇರೆ ಕಡೆ ವ್ಯವಸ್ಥೆ ಮಾಡಲು ಕಳೆದ ಎರಡು ವರ್ಷಗಳಿಂದ ಕಾಮಗಾರಿ ನಡೆಸಿದರು ಇನ್ನೂ ಜಾರಿಯಾಗಿಲ್ಲ ಅಂತಾ ಆರೋಪಿಸಿದ್ದಾರೆ.
ಮಂಗಳೂರು ಏರ್ ಪೋರ್ಟ್ ಅಭಿವೃದ್ಧಿ ಮಾಡುವಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿಫಲರಾಗಿದ್ದಾರೆ ಎಂದು ಐವಾನ್ ಡಿಸೋಜಾ ದೂರಿದರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ












Click it and Unblock the Notifications