ಜೈಲಲ್ಲಿ ಬಾಡೂಟ ನಡೆಸಿದ ಫೋಟೋ ಹಳೆಯದು - ಐವನ್ ಡಿ ಸೋಜಾ
ಮಂಗಳೂರು, ಜುಲೈ 21: ಕಾರಾಗೃಹದಲ್ಲಿ ಖೈದಿಗಳು ಬಾಡೂಟ ನಡೆಸಿದ್ದಾರೆನ್ನಲಾದ ಘಟನೆ ಹಳೆಯದು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾಗಿ ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದ್ದಾರೆ.
"ಜೈಲಿನಲ್ಲಿ ವಿಚಾರಣಾಧೀನ ಕೈದಿಗಳು ನಡೆಸಿದ್ದಾರೆನ್ನಲಾದ ಬಾಡೂಟದ ಬಗ್ಗೆ ನಾನಿಂದು ಜೈಲಿನ ಪ್ರಭಾರ ಅಧೀಕ್ಷರನ್ನು ಪ್ರಶ್ನಿಸಿದ್ದೇನೆ. ಆ ಫೋಟೋದಲ್ಲಿ ಕಾಣಿಸಿಕೊಂಡಿರುವ ಮೂವರು ಖೈದಿಗಳು ಈಗಾಗಲೇ ಇಲ್ಲಿಂದ ಬಿಡುಗಡೆಗೊಂಡಿದ್ದಾರೆ. ಅದು ಯಾವಾಗ ನಡೆದ ಘಟನೆ ಎಂದು ತಮಗೆ ಗೊತ್ತಿಲ್ಲವೆಂದು ಅಧಿಕಾರಿ ತಿಳಿಸಿದ್ದಾರೆ ," ಎಂದು ಐವನ್ ಡಿಸೋಜಾ ನುಡಿದರು.

"ಹೊಸ ಡಿಜಿ (ಕಾರಾಗೃಹ)ಯಾಗಿ ಎನ್.ಎಸ್. ಮೇಘರಿಕ್ರವರು ಅಧಿಕಾರ ಸ್ವೀಕರಿಸಿದ ಬಳಿಕ ಅವರನ್ನು ಭೇಟಿ ಮಾಡಿ ಇಲ್ಲಿನ ಸಿಬ್ಬಂದಿಗಳ ಕೊರತೆಯನ್ನು ಈಗಾಗಲೇ ಗಮನಕ್ಕೆ ತಂದಿದ್ದೇನೆ. 118
ವಿಚಾರಣಾಧೀನ ಖೈದಿಗಳಿರಬೇಕಾದ ಜೈಲಿನಲ್ಲಿ 418 ಮಂದಿ ಖೈದಿಗಳಿದ್ದಾರೆ. ಇದರಿಂದ ಜೈಲಿನಲ್ಲಿ ಘರ್ಷಣೆಗೆ ಕಾರಣವಾಗುತ್ತಿರುವ ಬಗ್ಗೆಯೂ ಅವರಿಗೆ ತಿಳಿಸಲಾಗಿದೆ. ಅವರು ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ," ಎಂದರು.
ನಗರದ ಕೇಂದ್ರ ಕಾರಾಗೃಹದ ಸಮಸ್ಯೆಗಳ ಕುರಿತಂತೆ ಜು. 22ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹಾಗೂ ಕಾರಾಗೃಹ ಡಿಜಿಯನ್ನು ಭೇಟಿಯಾಗಿ ಚರ್ಚೆ ನಡೆಸುವುದಾಗಿ ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿಸೋಜಾ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಜೈಲಿನ ಒಳಗೆ ನಿಯಮಾವಳಿಗಳನ್ನು ಬಿಟ್ಟು ಕಾರ್ಯಾಚರಣೆ ಮಾಡುತ್ತಿರುವ ಕುರಿತಂತೆ ಭೇಟಿಯ ವೇಳೆ ಜೈಲು ಅಧಿಕಾರಿಗಳನ್ನು ಪ್ರಶ್ನಿಸಿದಾಗ, ಅವರು ಅಲ್ಲಿನ ಸಂಕಷ್ಟಗಳನ್ನು ಹೇಳಿಕೊಂಡಿದ್ದಾರೆ. ಇವೆಲ್ಲವನ್ನೂ ಮುಖ್ಯಮಂತ್ರಿ ಹಾಗೂ ಜೈಲಿನ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications