ದಾಖಲೆ ಸಹಿತ ಸರ್ಕಾರದ ಸಾಧನೆ ತಿಳಿಸುವೆ: ಡಿಸೋಜಾ ಸವಾಲು
ಮಂಗಳೂರು, ಜೂನ್ 14: ಯಾವುದೇ ರೀತಿಯ ಮಾಹಿತಿ ಇಲ್ಲದೆ ಸರ್ಕಾರದ ವಿರುದ್ಧ ವೃಥಾ ಆರೋಪ ಮಾಡುತ್ತಿರುವ ಬಿಜೆಪಿ, ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಲು ವಿಫಲವಾಗಿದೆ. ಮಾಹಿತಿ ಇಲ್ಲದೆ ಆರೋಪಗಳನ್ನು ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ವಿಧಾನ ಪರಿಷತ್ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರು ಮಾಹಿತಿ ಇಲ್ಲದೆ ಆರೋಪ ಮಾಡಿ ಜನರನ್ನು ದಾರಿ ತಪ್ಪಿಸುವ ಬದಲು ಅಭಿವೃದ್ಧಿ ಬಗ್ಗೆ ನನ್ನ ಜತೆ ಚರ್ಚೆಗೆ ಬರಲಿ. ರಾಜ್ಯ ಸರಕಾರದ ಸಾಧನೆಗಳನ್ನು ನಾನು ದಾಖಲೆ ಸಹಿತ ಅವರಿಗೆ ತಿಳಿಸುವೆ ಎಂದು ಸವಾಲು ಹಾಕಿದರು.
ಬಿಪಿಎಲ್ ಪಡಿತರ ಚೀಟಿ ದೊರಕಿಲ್ಲ ಎಂಬುದಾಗಿ ರಾಜ್ಯ ಸರಕಾರದ ವಿರುದ್ಧ ಶೋಭಾ ಕರಂದ್ಲಾಜೆ ವ್ಯಕ್ತಪಡಿಸುತ್ತಿರುವ ಆಕ್ರೋಶ ವಾಸ್ತವದಲ್ಲಿ ಕೇಂದ್ರ ಸರಕಾರದ ವಿರುದ್ಧವಾಗಿದೆ. ಕೇಂದ್ರದಲ್ಲಿ ಮಂತ್ರಿ ಸ್ಥಾನ ದೊರೆಯದೆ ಹತಾಶರಾಗಿರುವ ಅವರು ಈ ರೀತಿ ರಾಜ್ಯ ಸರಕಾರದ ವಿರುದ್ಧ ತಮ್ಮ ಅಸಹನೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಟೀಕಿಸಿದರು.

ರೈತರ ಸಾಲ ಮನ್ನಾ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ಬ್ಯಾಂಕ್ಗಳ ಬೆಳೆ ಸಾಲಕ್ಕೆ ಸಂಬಂಧಿಸಿ 16.73 ಕೋಟಿ ರೂಪಾಯಿ ಬಿಡುಗಡೆಯಾಗಬೇಕಾಗಿದೆ. ಇದರಲ್ಲಿ 3710 ಫಲಾನುಭವಿಗಳಿಗೆ ಈಗಾಗಲೇ 10.73 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ತಿಳಿಸಿದರು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications