ವಿಜಯಾ ಬ್ಯಾಂಕ್ ವಿಲೀನಕ್ಕೆ ಐವನ್ ಡಿಸೋಜಾ ವಿರೋಧ, ಉಪವಾಸ ಸತ್ಯಾಗ್ರಹದ ಎಚ್ಚರಿಕೆ
ಮಂಗಳೂರು, ಸೆಪ್ಟೆಂಬರ್ 19 : ಬ್ಯಾಂಕುಗಳ ವಿಲೀನಗೊಳಿಸಲು ಮುಂದಾಗಿರುವ ಕೇಂದ್ರ ಸರಕಾರದ ನಿರ್ಧಾರವನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ವಿರೋಧಿಸಿದ್ದಾರೆ.
ಇತರ ಎರಡು ಬ್ಯಾಂಕ್ ಗಳ ಜೊತೆಗೆ ವಿಜಯಾ ಬ್ಯಾಂಕ್ ಅನ್ನು ವಿಲೀನಗೊಳಿಸುವ ನಿರ್ಧಾರವನ್ನು ಈ ಕೂಡಲೇ ಕೈಬಿಡದೆ ಇದ್ದಲ್ಲಿ ಕೇಂದ್ರ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಿತ ವಿಜಯಾ ಬ್ಯಾಂಕ್ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯಾಗಿದೆ. ಕರಾವಳಿಯಲ್ಲಿ 1931ರಲ್ಲಿ ಆರಂಭವಾದ ಈ ಬ್ಯಾಂಕ್ ಗ್ರಾಮೀಣ ಜನರಿಗೆ, ಕೃಷಿಕರಿಗೆ ಸೇವೆಯನ್ನು ಒದಗಿಸಿ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿದೆ. ವಿಜಯ ಬ್ಯಾಂಕ್ ಈ ಮೂಲಕ ಮನೆಮಾತಾಗಿದೆ ಎಂದು ಹೇಳಿದರು.

ದೇಶದ ಪ್ರತಿಷ್ಠಿತ ಇತರ ರಾಷ್ಟ್ರೀಕೃತ ಬ್ಯಾಂಕುಗಳೆಲ್ಲ ಇತ್ತೀಚಿನ ವರ್ಷಗಳಲ್ಲಿ ನಷ್ಟ ಅನುಭವಿಸುತ್ತಿವೆ. ಆದರೆ ಅದರ ನಡುವೆಯೂ ಲಾಭಗಳಿಸಿದ ಎರಡನೇ ಬ್ಯಾಂಕ್ ಎಂಬ ಹೆಗ್ಗಳಿಕೆ ವಿಜಯಾ ಬ್ಯಾಂಕ್ನದ್ದು.
ಈ ಬ್ಯಾಂಕನ್ನು ಮುಲ್ಕಿ ಸುಂದರ್ ರಾಮ್ ಶೆಟ್ಟಿಯವರು ಸ್ಥಾಪನೆ ಮಾಡಿದ್ದೇ ಬಡವರಿಗಾಗಿ. ಬೇರೆ ರಾಷ್ಟ್ರೀಕೃತ ಬ್ಯಾಂಕ್ಗಳನ್ನು ಬೇಕಿದ್ದರೆ ವಿಲೀನಗೊಳಿಸಲಿ. ಆದರೆ ವಿಜಯಾ ಬ್ಯಾಂಕನ್ನು ವಿಲೀನಗೊಳಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಕರಾವಳಿಯ ಹೆಮ್ಮೆಯಾಗಿರುವ ವಿಜಯಾ ಬ್ಯಾಂಕ್ ಉಳಿಸುವ ನಿಟ್ಟಿನಲ್ಲಿ ರಾಜ್ಯದ ಸಂಸದರು ಮುಂದಾಗಬೇಕು. ಎಲ್ಲಾ ಸಂಸದರು ಪ್ರಧಾನಿ ಮೋದಿಯವರಿಗೆ ಮನವಿ ಮಾಡಬೇಕು. ಬ್ಯಾಂಕಿನ ಉದ್ಯೋಗಿಗಳ ಸಹಕಾರದಿಂದ ನಿಯೋಗದ ಮೂಲಕ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications