ಬಾಹುಬಲಿ ಮಹಾಮಸ್ತಕಾಭಿಷೇಕ:ಧರ್ಮಸ್ಥಳಕ್ಕೆ ಹರಿದುಬರುತ್ತಿದೆ ಭಕ್ತರ ದಂಡು
ಮಂಗಳೂರು, ಫೆಬ್ರವರಿ 12: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕದ ಸಂಭ್ರಮ ಮನೆ ಮಾಡಿದೆ. ಬಾಹುಬಲಿ ಬೆಟ್ಟದಲ್ಲಿ ಮಹಾಮಸ್ತಕಾಭಿಷೇಕದ ಪೂಜಾ ವಿಧಿವಿಧಾನಗಳು ಭರದಿಂದ ಸಾಗುತ್ತಿವೆ. ವೈರಾಗ್ಯ ಮೂರ್ತಿ ಪಾದಗಳಿಗೆ ಪ್ರತಿದಿನ ಅಭಿಷೇಕಗಳು ನಡೆಯುತ್ತಿವೆ.12 ವರ್ಷಗಳಿಗೊಮ್ಮೆ ನಡೆಯುವ ಈ ಅಪರೂಪದ ಕ್ಷಣವನ್ನು ಕಣ್ತುಂಬಿಕೊಳ್ಳಲು ಭಕ್ತರ ದಂಡೇ ಧರ್ಮಸ್ಥಳದತ್ತ ಹರಿದುಬರುತ್ತಿದೆ.
ಮಹಾಮಸ್ತಕಾಭಿಷೇಕ ಸಂಭ್ರಮದ 5 ದಿನಗಳು ಪೂರ್ಣಗೊಂಡಿದ್ದು, ಇಡೀ ಧರ್ಮಸ್ಥಳ ಹಬ್ಬದ ಸಂಭ್ರಮದಲ್ಲಿ ಮಿಂದೇಳುತ್ತಿದೆ. ಮುಂಜಾನೆಯಿಂದಲೇ ಬಾಹುಬಲಿಗೆ ಅಭಿಷೇಕ, ಪೂಜಾ ವಿಧಾನ, ಯಜ್ಞ ಯಾಗಾದಿಗಳು ನಡೆಯುತ್ತಿವೆ.ಜೈನ ಮುನಿಗಳ ಸಮ್ಮುಖದಲ್ಲಿ ಬಾಹುಬಲಿಯ ಆರಾಧನೆ ನಡೆಯುತ್ತಿದೆ.

ಫೆಬ್ರವರಿ 15ರವರೆಗೆ ಬಾಹುಬಲಿ ಸ್ವಾಮಿಯ ಪಾದಗಳಿಗೆ ಕುಂಕುಮ, ಚಂದನ, ಎಳನೀರು, ಕಲಶಾಭಿಷೇಕಗಳು ನಡೆದರೆ, ಫೆಬ್ರವರಿ 16 ರಿಂದ 19ರವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದೆ. ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿವೀರೇಂದ್ರ ಹೆಗ್ಗಡೆ ಕುಟುಂಬಸ್ಥರಿಂದ ಬಾಹುಬಲಿ ಜಲಾಭಿಷೇಕ, ಕಬ್ಬಿನ ಹಾಲು, ಸೀಯಾಳ,ಕಷಾಯ, ಕುಂಕುಮ, ಚಂದನದ ಅಭಿಷೇಕ ನಡೆಯಲಿದೆ.

ಜೈನ ಮುನಿಗಳ ನಿರ್ದೇಶನದಂತೆಯೇ ಪ್ರಾತಃಕಾಲದಲ್ಲಿಯೇ ಅಭಿಷೇಕಾಧಿ ಕ್ರಿಯೆಗಳು ನಡೆಯಲಿದ್ದು, ಬಾಹುಬಲಿಗೆ ನಡೆಯುವ ಈ ಮಹಾಮಸ್ತಕಾಭಿಷೇಕದ ವೈಭವ ಕಾಣಲು ದೇಶದ ವಿವಿಧೆಡೆಯಿಂದ ಜಿನ ಭಕ್ತರು ಧರ್ಮಸ್ಥಳದತ್ತ ಬರಲಿದ್ದಾರೆ.
ವೈರಾಗ್ಯ ಮೂರ್ತಿಯ ಮಹಾಮಜ್ಜನಕ್ಕೆ ದಿನಗಣನೆ ಆರಂಭವಾಗಿದ್ದು, ಇಡೀ ಧರ್ಮಸ್ಥಳ ಸ್ವರ್ಗದಂತೆ ಕಂಗೊಳಿಸುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications