ತನ್ವೀರ್ ಅಶ್ಲೀಲ ಚಿತ್ರ ವೀಕ್ಷಣೆ: ರಾಜೀನಾಮೆಗೆ ಪೂಜಾರಿ ಆಗ್ರಹ
ತನ್ವೀರ್ ಅಶ್ಲೀಲ ವೀಡಿಯೊ ವೀಕ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸೇಠ್ ಅವರ ರಾಜೀನಾಮೆಯನ್ನು ತಕ್ಷಣ ಪಡೆಯಬೇಕು ಎಂದು ಕಾಂಗ್ರೆಸ್ನ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ.
ಮಂಗಳೂರು, ನವೆಂಬರ್ 11 : ತನ್ವೀರ್ ಅಶ್ಲೀಲ ವೀಡಿಯೊ ವೀಕ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸೇಠ್ ಅವರ ರಾಜೀನಾಮೆಯನ್ನು ತಕ್ಷಣ ಪಡೆಯಬೇಕು. ಎಂದು ಕೇಂದ್ರ ಸರಕಾರದ ಮಾಜಿ ವಿತ್ತ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಎಂ ಅವರೇ, ನಿಮಗೆ ನೈತಿಕತೆಯಿದ್ದರೆ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ, ರಾಜೀನಾಮೆ ತೆಗೆದುಕೊಳ್ಳಲು ಆಗದಿದ್ದರೆ. ಅದನ್ನು ಜನತೆಯ ಮುಂದೆ ನೀವು ದುರ್ಬಲಾಗಿದ್ದೀರಿ ಎಂಬುದನ್ನು ಒಪ್ಪಿಕೊಳ್ಳಿ. ಈಗ ನೀವು ನಿದ್ದೆ ಮಾಡಿದರೆ ಚುನಾವಣೆ ಸಂದರ್ಭದಲ್ಲಿ ಜನರೇ ನಿಮಗೆ ನಿದ್ದೆ ಮಾಡುವಂತೆ ಮಾಡುತ್ತಾರೆ' ಎಂದು ಹೇಳಿದ್ದಾರೆ. [ಟಿಪ್ಪು ವೇದಿಕೆಯಲ್ಲೇ ಅರೆ ನಗ್ನ ಚಿತ್ರ ವೀಕ್ಷಿಸಿದ ತನ್ವೀರ್]

ಹೈಕಮಾಂಡ್ ದಿಗ್ವಿಜಯ್ ಸಿಂಗ್ ಅವರಿಂದ ಘಟನೆಗೆ ಸಂಬಂಧಿಸಿದಂತೆ ವರದಿ ಕೇಳಿದೆ. ಆದರೆ, ಈಗಾಗಲೇ ಮಾಧ್ಯಮದಲ್ಲಿ ಬಂದಿರುವುದರಿಂದ ಕಾಲಹರಣ ಮಾಡದೆ ತಕ್ಷಣ ರಾಜೀನಾಮೆ ಪಡೆದುಕೊಳ್ಳಲು ಸಿದ್ದರಾಮಯ್ಯಗೆ ಸೂಚನೆ ನೀಡಬೇಕೆಂದರು. ತನ್ವೀರ್ ಸೇಠ್ ನಿಮ್ಗೆ ಪಕ್ಷದ ಮೇಲೆ ಗೌರವವಿದ್ದರೆ ತಕ್ಷಣ ರಾಜೀನಾಮೆ ನೀಡಿ ಸಚಿವ ಸಂಪುಟದಿಂದ ಹೊರಗೆ ಬನ್ನಿ. ಆಗ ನಿಮ್ಮ ಮೇಲಿನ ಗೌರವ ಹೆಚ್ಚುತ್ತದೆ. ಉಡಾಫೆ, ನಿರ್ಲಕ್ಷ್ಯ ತೋರಿದರೆ ಜನರೇ ನಿಮಗೆ ಸರಿಯಾದ ಬುದ್ಧಿ ಕಲಿಸುತ್ತಾರೆ ಎಂದರು.
500 ಹಾಗೂ 1000 ನೋಟ್ ಗಳನ್ನು ಚಲಾವಣೆ ರದ್ದು ಮಾಡಿದ ಪ್ರಧಾನಿ ನರೇಂದ್ರ ಮೋದಿಯವರ ಉದಾತ್ತವಾದ ಉದ್ದೇಶವನ್ನು ಪೂಜಾರಿ ಸ್ವಾಗತಿಸಿದ್ದಾರೆ. ಆದರೆ, ಹೊಸ ನೋಟುಗಳ ಮುದ್ರಣ ಹಾಗೂ ವಿತರಣೆಯಲ್ಲಿ ಆಗುತ್ತಿರುವ ಅವ್ಯವಸ್ಥೆಯಲ್ಲಿ ಇವರ ಆಡಳಿತದ ಅನುಭವ ಎದ್ದುಕಾಣುತ್ತದೆ ಎಂದರು.['ಅಶ್ಲೀಲ ಮಂತ್ರಿ' ಗೆ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ: ಪುಟ್ಟಣ್ಣ]
ಪ್ರಧಾನಿಗೆ ಅನುಭವದ ಕೊರತೆ. ಈ ಹಿಂದೆ ನಾನು ಕೇಂದ್ರದ ವಿತ್ತ ಸಚಿವನಾಗಿದ್ದಾಗ ಚಿಲ್ಲರೆ ಅಭಾವವನ್ನು ಸಮರ್ಪಕವಾಗಿ ನಿವಾರಿಸಿದ್ದೇನೆ. ಪ್ರಸಕ್ತ ಜನರಿಗೆ ಹಣದ ಅಭಾವ ಉಂಟಾಗುವಂತೆ ಮಾಡಿ ತೊಂದರೆ ನೀಡಿರುವುದು ಸರಿಯಾದ ಕ್ರಮವಲ್ಲ ಎಂದು ಜನಾರ್ದನ ಪೂಜಾರಿ ಆರೋಪಿಸಿದರು. ಈ ಯೋಜನೆಯಿಂದ ಕಳ್ಳ ನೋಟಿನ ದಂಧೆ ಸಂಪೂರ್ಣವಾಗಿ ಕೊನೆಗೊಳ್ಳುತ್ತದೆ ಎನ್ನುವ ವಿಶ್ವಾಸ ತನಗಿಲ್ಲ ಎಂದು ಸಹ ಹೇಳಿದರು.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications