ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈತ್ರಿ ಸರ್ಕಾರ ಉಳಿಸಿದ್ದು ಸಿದ್ದರಾಮಯ್ಯ ಅಲ್ಲ:ಜನಾರ್ಧನ ಪೂಜಾರಿ

|
Google Oneindia Kannada News

ಮಂಗಳೂರು, ಜನವರಿ 24: ಇತ್ತೀಚೆಗೆ ಸೃಷ್ಟಿಯಾಗಿದ್ದ ಬಿಕ್ಕಟ್ಟಿನಿಂದ ರಾಜ್ಯ ಸರಕಾರವನ್ನು ಪಾರು ಮಾಡಿದ್ದೇ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ದೇವೇಗೌಡರು. ಅವರಿಂದಲೇ ಸರಕಾರ ಉಳಿದಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ಧನ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಇತ್ತೀಚಿನ ರೆಸಾರ್ಟ್ ರಾಜಕಾರಣ, ಆಪರೇಷನ್ ಕಮಲದಿಂದ ಸೃಷ್ಟಿಯಾಗಿದ್ದ ಬಿಕ್ಕಟ್ಟನ್ನು ಚಾಣಾಕ್ಷತೆಯಿಂದ ಶಮನಗೊಳಿಸಿ ಸರಕಾರ ಉಳಿಸುವಲ್ಲಿ ದೊಡ್ಡ ಗೌಡರದ್ದೇ ಮಹತ್ವದ ಪಾತ್ರ.

ಆನಂದ್ ಸಿಂಗ್ ಮೇಲೆ ಹಲ್ಲೆ: ಅಜ್ಞಾತ ಸ್ಥಳದಿಂದ ಶಾಸಕ ಗಣೇಶ್ ಹೇಳಿಕೆ ಬಿಡುಗಡೆಆನಂದ್ ಸಿಂಗ್ ಮೇಲೆ ಹಲ್ಲೆ: ಅಜ್ಞಾತ ಸ್ಥಳದಿಂದ ಶಾಸಕ ಗಣೇಶ್ ಹೇಳಿಕೆ ಬಿಡುಗಡೆ

ದೇವೇಗೌಡರು ನನ್ನನ್ನು ಎಲ್ಲಿ ಭೇಟಿಯಾದರೂ 'ಗುರುಗಳೇ' ಎಂದು ಆತ್ಮೀಯತೆಯಿಂದ ಕರೆಯುತ್ತಾರೆ. ದೇವೇಗೌಡರು ನನ್ನನ್ನು ಸುಮ್ಮನೆ ಗುರುಗಳೇ ಎಂದು ಕರೆಯುವುದಿಲ್ಲ. ಇದಕ್ಕೆ ಕಾರಣ ಗಳು ಹಲವಾರು ಇದೆ. ದೇವೇಗೌಡರ ರಾಜಕೀಯ ಅನುಭವವನ್ನು ಲಘುವಾಗಿ ಪರಿಗಣಿಸುವಂತಿಲ್ಲ ಎಂದು ತಿಳಿಸಿದರು.

Janardhan Poojary slams Siddaramaiah

 ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ: ಕಾಂಗ್ರೆಸ್ ಗೆ ಶಕ್ತಿ ಸಿಗಲಿದೆ ಎಂದ ಬಿ. ಜನಾರ್ಧನ ಪೂಜಾರಿ ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ: ಕಾಂಗ್ರೆಸ್ ಗೆ ಶಕ್ತಿ ಸಿಗಲಿದೆ ಎಂದ ಬಿ. ಜನಾರ್ಧನ ಪೂಜಾರಿ

ಇತ್ತೀಚಿನ ಬಿಕ್ಕಟ್ಟಿನಿಂದ ರಾಜ್ಯದ ಮೈತ್ರಿ ಸರಕಾರವನ್ನು ಉಳಿಸಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲ . ಮೈತ್ರಿ ಸರಕಾರ ಉಳಿದಿದ್ದೇ ಎಚ್ ಡಿ ಕುಮಾರ ಸ್ವಾಮಿ ಹಾಗೂ ದೇವೇಗೌಡರಿಂದ. ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಂದಿದ್ದೇ ಪಕ್ಷವನ್ನು ಮುಗಿಸಲು ಎಂದು ಕಿಡಿಕಾರಿದರು.

English summary
Mangaluru Congress senior leader B Janadrdhana Poojary slammed former Chief Minister Siddaramaiah. He said Siddaramaiah joined congress to destroy party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X