ಭಗವಾನ್ ಗಲಾಟೆ ಹುಟ್ಟು ಹಾಕಲು ರಾಮನ ಬಗ್ಗೆ ಮಾತನಾಡುತ್ತಾರೆ:ಜನಾರ್ಧನ ಪೂಜಾರಿ
Recommended Video

ಮಂಗಳೂರು, ಜನವರಿ 07:ಪ್ರೊ.ಭಗವಾನ್ ಶ್ರೀ ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ದೊಡ್ಡ ದುರಂತ. ಶ್ರೀ ರಾಮ ಇದ್ದಾಗ ಭಗವಾನ್ ಇದ್ರಾ? ರಾಮ ಮಾಂಸ ತಿನ್ನುವುದು ಇವರು ನೋಡಿದ್ರ? ಇವರು ಹುಟ್ಟಿದ್ರ ? ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ ಕಿಡಿಕಾರಿದರು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಗವಾನ್ ಅವರಿಗೆ ನಾಲಗೆ ಇದೆ ಅಂತ ಏನೇನೋ ಮಾತನಾಡುವುದಲ್ಲ. ಮಹಮ್ಮದ್ ಪೈಗಂಬರ್ ಮುಸ್ಲಿಮರ ದೇವರು. ಏಸು ಕ್ರಿಸ್ತರ ದೇವರು. ಹಾಗೆಯೇ ಶ್ರೀರಾಮ ನಮ್ಮ ದೇವರು.ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದರ ಉದ್ದೇಶ ಗಲಾಟೆ ಹುಟ್ಟು ಹಾಕುವುದು ಅಷ್ಟೆ. ಇದರಿಂದ ಎಷ್ಟೋ ಕುಟುಂಬ ಹಾಳಾಯಿತು ಎಂದು ಅಭಿಪ್ರಾಯಪಟ್ಟರು.
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ವಿಚಾರವಾಗಿ ಮಾತನಾಡಿದ ಅವರು ಟಿಕೆಟ್ ಸಿಕ್ಕಿದರೆ ನಿಲ್ಲುತ್ತೇನೆ. ಇದಕ್ಕಾಗಿ ಪ್ರಯತ್ನಪಡುತ್ತಿದ್ದೇನೆ. ಅಷ್ಟೇ ಅಲ್ಲ, ಎಲ್ಲದಕ್ಕೂ ಕಾದು ನೋಡಿ ಎಂದು ಮಾರ್ಮಿಕವಾಗಿ ಉತ್ತರಿಸಿದರು. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಗಾಗಿ ದೆಹಲಿಯವರೆಗೂ ಹೋಗುತ್ತೇನೆ ಎಂದು ಹೇಳಿದರು.

ಶಬರಿಮಲೆಗೆ ಮಹಿಳಾ ಪ್ರವೇಶ ವಿಚಾರವಾಗಿ ಮಾತನಾಡಿ, ಮಹಿಳೆಯರು ದೇವರ ಮಕ್ಕಳಲ್ಲವೇ? ಕೇರಳದ ಮುಖ್ಯಮಂತ್ರಿಗಳು ಒಳ್ಳೆಯ ಕಾರ್ಯ ಮಾಡಿದ್ದಾರೆ. ಈಗಾಗಲೇ ಮೂರು ಮಹಿಳೆಯರು ಪ್ರವೇಶಿಸಿದ್ದಾರೆ. ಇನ್ನು ಎಲ್ಲಾ ಮಹಿಳೆಯರ ಪ್ರವೇಶಕ್ಕೆ ವ್ಯವಸ್ಥೆ ಕಲ್ಪಿಸಲು ಮುಖ್ಯಮಂತ್ರಿ ಮುಂದಾಗಲಿ.
ಸ್ವಾಮಿ ಅಯ್ಯಪ್ಪ ಎಲ್ಲಿಯೂ ಮಹಿಳಾ ಪ್ರವೇಶದ ಬಗ್ಗೆ ಹೇಳಿಲ್ಲ. ಆದರೆ ಮಹಿಳೆಯರು ಪ್ರವೇಶಿಸಬಾರದೆಂದು ರಾಜಕೀಯ ಮಾಡುವವರು ಹೇಳುತ್ತಿದ್ದಾರೆ. ಇದರ ಬಗ್ಗೆ ಅಲ್ಲಿನ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿ. ಯಾರು ಇದನ್ನು ವಿರೋಧಿಸುತ್ತಾರೋ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಿ. ಕಾಂಗ್ರೆಸ್ ಆಗಲಿ ಬಿಜೆಪಿ ಆಗಲಿ ವಿರೋಧ ಮಾಡುವುದು ತಪ್ಪೆಂದರು.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications