ಮಹಾಪ್ರತಿಜ್ಞೆ ಮುರಿದ ಜನಾರ್ದನ ಪೂಜಾರಿ; ದೇವರಲ್ಲಿ ಕ್ಷಮೆ ಯಾಚನೆ
ಮಂಗಳೂರು, ಜುಲೈ 1: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾಡಿದ್ದ ಮಹಾ ಪ್ರತಿಜ್ಞೆಯನ್ನು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ ಮುರಿದಿದ್ದಾರೆ. ನಗರದ ಕುದ್ರೋಳಿ ದೇವಸ್ಥಾನಕ್ಕೆ ನಿನ್ನೆ ಜನಾರ್ದನ ಪೂಜಾರಿ ಭೇಟಿ ನೀಡಿ ಗೋಕರ್ಣನಾಥನಲ್ಲಿ ಕ್ಷಮೆ ಯಾಚಿಸಿದ್ದಾರೆ.
ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸೋತರೆ ದೇವಸ್ಥಾನಕ್ಕೆ ಕಾಲಿಡುವುದಿಲ್ಲ ಎಂದು ಬಹಿರಂಗ ಸಭೆಯಲ್ಲಿ ಜನಾರ್ದನ ಪೂಜಾರಿ ಪ್ರತಿಜ್ಞೆ ಮಾಡಿದ್ದರು. ಅಷ್ಟೆ ಅಲ್ಲದೇ ಮಿಥುನ್ ರೈ ಸೋತರೆ ಚರ್ಚ್, ಮಸೀದಿಗಳಿಗೂ ಕಾಲಿಡುವುದಿಲ್ಲ ಎಂದಿದ್ದರು.
ಇಂದು ಏಕಾಏಕಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಜನಾರ್ದನ ಪೂಜಾರಿ, ಗೋಕರ್ಣನಾಥ ಹಾಗೂ ಪರಿವಾರ ದೇವರ ದರ್ಶನ ಪಡೆದರು. ಗೋಕರ್ಣನಾಥನ ಮುಂದೆ ಕ್ಷಮೆ ಯಾಚಿಸಿ ಭಾವುಕರಾದರು. ದೇವರ ದರ್ಶನದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ನಾನು ಕ್ಷೇತ್ರಕ್ಕೆ ಭೇಟಿ ನೀಡಲ್ಲ ಎಂದು ಹೇಳಿ ದೊಡ್ಡ ತಪ್ಪು ಮಾಡಿದ್ದೇನೆ. ನನ್ನ ಹೇಳಿಕೆಗೆ ಪಶ್ಚಾತ್ತಾಪ ಪಡುತ್ತಿದ್ದೇನೆ. ಯಾರೂ ಇಂತಹ ತಪ್ಪು ಮಾಡಬಾರದು. ಇದಕ್ಕೆ ಎಲ್ಲರ ಹತ್ತಿರ ಕ್ಷಮೆ ಕೇಳುತ್ತಿದ್ದೇನೆ' ಎಂದು ಹೇಳಿದರು.

ತಪ್ಪನ್ನು ಸರಿ ಮಾಡದೆ ಸತ್ತರೆ ದೇವರು ಕ್ಷಮಿಸಲ್ಲ. ಅದಕ್ಕೆ ಇಂದು ನನ್ನ ತಪ್ಪಿಗೆ ಕ್ಷಮೆ ಯಾಚಿಸಿದ್ದೇನೆ. ಇವತ್ತು ಮಧ್ಯಾಹ್ನ ಮಲಗಿದ್ದ ಸಮಯದಲ್ಲಿ, ದೇವರ ಭೇಟಿಗೆ ನಿರ್ಧರಿಸಿದೆ. ದೇವರ ಆದೇಶ ಬಂದದ್ದರಿಂದ ಕೂಡಲೇ ಹೊರಟೆ. ತಪ್ಪು ಮಾಡಿದ್ದನ್ನು ತಿದ್ದಲು ಕೂಡಲೇ ಹೊರಡು ಎಂದು ದೇವರ ಆದೇಶವಿತ್ತು. ಅದರಂತೆ ಕ್ಷೇತ್ರಕ್ಕೆ ಬಂದು ಕ್ಷಮೆ ಯಾಚಿಸಿದ್ದೇನೆ ಎಂದು ಹೇಳಿದರು.
ಚರ್ಚ್, ಮಸೀದಿಗೂ ತೆರಳುವುದಿಲ್ಲ ಎಂದು ಚುನಾವಣೆ ಸಮಯ ಹೇಳಿದ್ದೆ. ಆದರೆ, ಈಗ ಅಲ್ಲಿಗೂ ಹೋಗಿ ಕ್ಷಮೆ ಯಾಚಿಸಿ ನನ್ನ ತಪ್ಪನ್ನು ಸರಿಪಡಿಸಿಕೊಳ್ಳುತ್ತಿದ್ದೇನೆ ಎಂದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications