ಪೂಜಾರಿ ಆತ್ಮಚರಿತ್ರೆ ಬಿಡುಗಡೆಗೆ ಸಿದ್ಧ, ರಾಜ್ಯ ರಾಜಕಾರಣದಲ್ಲಿ ತಳಮಳ
ಮಂಗಳೂರು, ಜನವರಿ 5: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಒಂದೆಡೆ ಬಿಜೆಪಿ ಪರಿರ್ವತನಾ ಯಾತ್ರೆ ಆರಂಭಿಸಿದ್ದರೆ, ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಧನಾ ಸಮಾವೇಶ ನಡೆಯುತ್ತಿದೆ. ಇವೆಲ್ಲದರ ಮಧ್ಯೆ ಕಾಂಗ್ರೆಸ್ ಪಾಳಯದಲ್ಲಿ ಈಗ ಭಾರೀ ತಳಮಳ ಆರಂಭವಾಗಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ.
ನೇರ, ನಿಷ್ಠುರ ಮಾತುಗಳ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಗುರುತಿಸಿ ಕೊಂಡಿರುವ ಬಿ. ಜನಾರ್ಧನ ಪೂಜಾರಿ ಅವರ ಆತ್ಮಚರಿತ್ರೆ ಬಿಡುಗಡೆಗೆ ಸಿದ್ದವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ಏಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.
ಇದೇ ಬರುವ ಜನವರಿ 26ರ ಗಣರಾಜ್ಯೋತ್ಸವ ದಿನದಂದು ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ಬಿಡುಗಡೆಯಾಗಲಿದೆ.

ಮಂಗಳೂರಿನ ಗೋಕರ್ಣನಾಥ ದೇವಾಲಯದಲ್ಲಿ ಪೂಜಾರಿಯವರ ಆತ್ಮಚರಿತ್ರೆ ಬಿಡುಗಡೆಗೊಳ್ಳಲಿದ್ದುಈ ನಿಟ್ಟಿನಲ್ಲಿ ಪೂರ್ವ ತಯಾರಿ ಆರಂಭಗೊಂಡಿದೆ. ಪೂಜಾರಿ ಅವರ ಆತ್ಮಚರಿತ್ರೆ 3 ಭಾಷೆಯಲ್ಲಿ ಪ್ರಕಟಗೊಳ್ಳಲಿದೆ. ಕನ್ನಡದಲ್ಲಿ ಪ್ರಕಟವಾಗುವ ಆತ್ಮಚರಿತ್ರೆ ಮೊದಲು ಬಿಡುಗಡೆಗೊಳ್ಳಲಿದ್ದು, ತದ ನಂತರ ಕೆಲ ದಿಗಳ ಬಳಿಕ ಹಿಂದಿ ಹಾಗು ಇಂಗ್ಲಿಷ್ ಭಾಷೆಯಲ್ಲಿ ಆತ್ಮಚರಿತ್ರೆ ಬಿಡುಗಡೆಗೊಳ್ಳಲಿದೆ.
ಹೇಳಿ ಕೇಳಿ ಜನಾರ್ಧನ ಪೂಜಾರಿ ನೇರ ನಿಷ್ಠುರ ನುಡಿಗಳ ರಾಜಕಾರಣಿ. ಈ ಹಿನ್ನೆಲೆಯಲ್ಲಿ ತಮ್ಮ ಆತ್ಮಚರಿತ್ರೆಯಲ್ಲಿ ಯಾರ ಯಾರ ಬಂಡವಾಳ ಬಯಲಾಗುವುದೋ ಎಂಬ ಆತಂಕ ಕಾಂಗ್ರೆಸ್ ಸೇರಿದಂತೆ ಇತರ ರಾಜಕೀಯ ಪಕ್ಷಗಳ ಮುಖಂಡರಿಗೆ ಆರಂಭವಾಗಿದೆ.
ಜನಾರ್ಧನ ಪೂಜಾರಿ 7 ವರ್ಷಗಳಕಾಲ ಕೇಂದ್ರದಲ್ಲಿ ಅರ್ಥಖಾತೆ ಸಚಿವರಾಗಿದ್ದವರು. ಸಾಲಮೇಳದ ಸರದಾರ ಎಂದೇ ಗುರುತಿಸಿಕೊಂಡವರು. 4 ಬಾರಿ ಸಂಸದರಾಗಿ, 2ಬಾರಿ ರಾಜ್ಯಸಭಾ ಸದಸ್ಯರಾಗಿ, 2 ಬಾರಿ ರಾಜ್ಯದ ಕೆಪಿಸಿಸಿ ಅಧ್ಯಕ್ಷರಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದವರು.
ಉಕ್ಕಿನ ಮಹಿಳೆ ಎಂದೇ ಗುರುತಿಸಲಾಗುವ ಇಂದಿರಾ ಗಾಂಧಿ ಕಾಲದಿಂದ ನರಸಿಂಹ ರಾವ್ ಅವರ ಕಾಲದವರೆಗೆ ರಾಷ್ಡ್ರ ರಾಜಕಾರಣದಲ್ಲಿ ಅತ್ಯಂತ ಪ್ರಭಾವಿ ರಾಜಕಾರಣಿಯಾಗಿ ಛಾಪನ್ನು ಮೂಡಿಸಿದವರು ಪೂಜಾರಿ. ಈ ಸುಧೀರ್ಘ ಕಾಲದ ಅನುಭವ ಹಾಗು ಕೆಲ ಅಪರೂಪದ ಘಟನಾವಳಿಗಳ ನೆನಪಿನ ಬುತ್ತಿಯನ್ನು ಪೂಜಾರಿ ತಮ್ಮ ಆತ್ಮಚರಿತ್ರೆಯಲ್ಲಿ ತೆರೆದಿಡಲಿದ್ದಾರೆ.
ತಮ್ಮಿಂದ ರಾಜಕೀಯ ಕ್ಷೇತ್ರದಲ್ಲಿ ಬೆಳೆದವರ ಸಂಗತಿ ಆತ್ಮಚರಿತ್ರೆಯಲ್ಲಿ ಜಾಗ ಪಡೆಯಲಿದ್ದು , ಪೂಜಾರಿ ಅವರಿಂದ ಲಾಭ ಪಡೆದು ನಂತರ ಅವರನ್ನೇ ತುಳಿಯಲು ಯತ್ನಿಸಿದವರ ಜಾತಕ ಈ ಆತ್ಮಚರಿತ್ರೆಯಲ್ಲಿ ಬಯಲಾಗಲಿದೆ ಎಂಬ ಮಾತು ಕೇಳಿಬರುತ್ತಿದೆ.
ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿನ ಮುನಿಸು ಸೇರಿದಂತೆ ರಾಜ್ಯದ ಪ್ರಮುಖ ರಾಜಕಾರಣಿಗಳ ಬಂಡವಾಳ ಪೂಜಾರಿ ಅವರ ಆತ್ಮಚರಿತ್ರೆಯಿಂದ ತೆರೆದುಕೊಳ್ಳಲಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪೂಜಾರಿ ಅವರ ಆತ್ಮಚರಿತ್ರೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications