ತಾಕತ್ತಿದ್ದರೆ ಬಿಜೆಪಿ ಸಿಡಿ ಬಿಡುಗಡೆ ಮಾಡಿ ಹೆಚ್ ಡಿಕೆಗೆ ಪೂಜಾರಿ ಸವಾಲ್
ಮಂಗಳೂರು, ಫೆಬ್ರವರಿ 27 : ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್ ಗೆ ಕಪ್ಪ ಕೊಟ್ಟಿರುವುದಕ್ಕೆ ಸಿಡಿ ಇದೆ, ಕ್ರಮಕೈಗೊಂಡರೆ ಮಾತ್ರ ಬಿಡುಗಡೆ ಮಾಡುವುದಾಗಿ ಹೇಳಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಸವಾಲ್ ಹಾಕಿದ್ದಾರೆ.
ಮುಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, 'ಕುಮಾರಸ್ವಾಮಿ ಅವರು ಬಿಜೆಪಿ ಅವರು ಹೈಕಮಾಂಡ್ ಗೆ ನೀಡಿರುವ ಬಗ್ಗೆ ಸಿಡಿ ಇದೆ ಎನ್ನುತ್ತಿದ್ದಾರೆ. ಬಿಜೆಪಿ ಹೈಕಮಾಂಡ್ ಕ್ರಮ ತೆಗೆದುಕೊಂಡರೆ ಬಿಡುಗಡೆ ಮಾಡುತ್ತೇನೆ ಅಂತಿದ್ದಾರೆ'.

ಬಿಜೆಪಿಯವರು ಕಪ್ಪ ಕೊಟ್ಟಿರುವ ವಿಚಾರ ಇದ್ದರೆ ಜನರಿಗೆ ತೋರಿಸಿ. ಇಲ್ಲದಿದ್ದರೆ ಜನರನ್ನು ಮೋಸ ಮಾಡಿದಂತಾಗುತ್ತದೆ. ತಾಕತ್ತಿದ್ದರೆ ಸಂಜೆಯೊಳಗೆ ಸಿಡಿ ಬಿಡುಗಡೆ ಮಾಡಿ ಎಂದು ಕುಮಾರಸ್ವಾಮಿಗೆ ಜನಾರ್ದನ ಪೂಜಾರಿ ಸವಾಲ್ ಹಾಕಿದರು.
ಈ ಸಂಧರ್ಭದಲ್ಲಿ ಬರಗಾಲದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, 'ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಮಲೆನಾಡು ಬರದಿಂದ ತತ್ತರಿಸಿ ಹೋಗಿದೆ. ಮಾಜಿ ಪ್ರಧಾನಿ ದೇವೇಗೌಡರು ಕಣ್ಣೀರು ಸುರಿಸಿದ್ದಾರೆ. ಹೀಗಿರಬೇಕಾದರೆ ಮುಖ್ಯಮಂತ್ರಿ ನಿದ್ದೆ ಮಾಡುತ್ತಿದ್ದಾರೆಯೇ?
ಸಿದ್ದರಾಮಯ್ಯನವರೇ ಆಡಳಿತ ನಡೆಸಲಾಗದಿದ್ದರೆ ಕುರ್ಚಿ ಬಿಟ್ಟುಬಿಡಿ ಎಂದು ಜನಾರ್ದನ ಪೂಜಾರಿ ಸಿದ್ದರಾಮಯ್ಯನವರು ವಿರುದ್ಧ ಕಿಡಿಕಾರಿದರು.
'ಹಗರಣದಲ್ಲಿ ಮುಳುಗಿರುವ ಜನಪ್ರತಿನಿಧಿಗಳಿಗೆ ಬರಗಾಲ ಕಾಣ್ತಾ ಇಲ್ಲ. ಟಿವಿ ಮಾಧ್ಯಮಗಳು ಎಲ್ಲವನ್ನೂ ತೋರಿಸುತ್ತಿವೆ. ಈಗ ಜನಪ್ರತಿನಿಧಿಗಳು ಏನು ಮಾಡುತ್ತಿದ್ದಾರೆ? ಸಿಎಂ ನೇತೃತ್ವದ ಕೋರ್ ಕಮಿಟಿ ಸಭೆಯಲ್ಲೂ ಚರ್ಚೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಚಪ್ಪಲಿಯಲ್ಲಿ ಹೊಡೆಯಬೇಕೆಂಬ ಸಚಿವ ಖಾದರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ' ಯು.ಟಿ.ಖಾದರಿದ್ದು ಮೂರ್ಖತನದ ಪರಮಾವಧಿ. ಪ್ರಜಾಪ್ರಭುತ್ವದಲ್ಲಿ ಚಪ್ಪಲಿಯಲ್ಲಿ ಹೊಡೆಯುತ್ತಾರೆಯೇ? ಮಾತಾಡುವಾಗ ಜಾಗ್ರತೆ ಇರಲಿ.
ಸಂವಿಧಾನದಲ್ಲಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ ಎಂದು ಸಚಿವ ಯು.ಟಿ.ಖಾದರ್ ಗೆ ಪೂಜಾರಿ ಛಾಟಿ ಬೀಸಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications